ವಿ ಶಶಿಧರ್ 
ರಾಜ್ಯ

ರಾಜ್ಯ ಪೊಲೀಸ್ ಸಂಘದ ಅಧ್ಯಕ್ಷ ಶಶಿಧರ್ ಬಂಧನ

ಜೂನ್ 4ರಂದು ರಾಜ್ಯಾದ್ಯಂತ ಪೊಲೀಸ್ ಪ್ರತಿಭಟನೆಗೆ ಪ್ರಚೋದನೆ ನೀಡಿದ ಆರೋಪದ ಮೇರೆಗೆ ಅಖಿಲ ಕರ್ನಾಟಕ...

ಬೆಂಗಳೂರು: ಜೂನ್ 4ರಂದು ರಾಜ್ಯಾದ್ಯಂತ ಪೊಲೀಸ್ ಪ್ರತಿಭಟನೆಗೆ ಪ್ರಚೋದನೆ ನೀಡಿದ ಆರೋಪದ ಮೇರೆಗೆ ಅಖಿಲ ಕರ್ನಾಟಕ ಪೊಲೀಸ್ ಮಹಾ ಸಂಘದ ಅಧ್ಯಕ್ಷ ಶಶಿಧರ್ ಅವರನ್ನು ಬುಧವಾರ ರಾತ್ರಿ ಬಂಧಿಸಲಾಗಿದೆ. 
ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಶಶಿಧರ್ ವಿರುದ್ಧ ಪ್ರಕರಣ ದಾಖಲಾಗಿದೆ. ನಿನ್ನೆ ರಾತ್ರಿ 12.30ಕ್ಕೆ ಯಲಹಂಕ ಉಪನಗರದಲ್ಲಿ ಶಶಿಧರ್ ಅವರನ್ನು ಬಂಧಿಸಲಾಗಿದೆ. 
ಗುರುವಾರ ಬೆಳಗ್ಗೆ ನ್ಯಾಯಾಲಯಕ್ಕೆ ಶಶಿಧರ್ ಅವರನ್ನು ಹಾಜರು ಪಡಿಸಲಾಗಿದ್ದು, ಜೂನ್ 16ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಹಿರಿಯ ಅಧಿಕಾರಿಗಳ ಕಿರುಕುಳ ಖಂಡಿಸಿ ರಾಜ್ಯಾದ್ಯಂತ ಪೊಲೀಸ್ ಪೇದೆಗಳು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದು, ವಾರಕ್ಕೊಂದು ರಜೆ, ಕೆಲಸಕ್ಕೆ ತಕ್ಕ ಸಂಬಳ ಮುಂತಾದ ಬೇಡಿಕೆಗಳಿಗೆ ಆಗ್ರಹಿಸಿ ಅಖಿಲ ಕರ್ನಾಟಕ ಪೊಲೀಸ್ ಮಹಾ ಸಂಘ ಜೂನ್ 4ರಂದು ಪ್ರತಿಭಟನ ನಡೆಸಲು ತೀರ್ಮಾನಿಸಿದೆ. ಆದರೆ, ಇದಕ್ಕೆ ರಾಜ್ಯ ಸರ್ಕಾರ ವಿರೋಧ ವ್ಯಕ್ತಪಡಿಸಿದ್ದು, ಎಸ್ಮಾ ಜಾರಿ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

SCROLL FOR NEXT