ರಾಜ್ಯ ಗೃಹ ಸಚಿವ ಜಿ.ಪರಮೇಶ್ವರ 
ರಾಜ್ಯ

ರಜೆ ಪತ್ರಗಳನ್ನು ಹಿಂಪಡೆಯುತ್ತಿದ್ದಾರೆ ಪೊಲೀಸರು: ಗೃಹ ಸಚಿವ

ಇಲಾಖೆಗೆ ಸಲ್ಲಿಸಿರುವ ರಜೆ ಪತ್ರಗಳನ್ನು ಹಲವು ಪೊಲೀಸರು ಹಿಂಪಡೆಯುತ್ತಿದ್ದಾರೆಂದು ರಾಜ್ಯ ಗೃಹ ಸಚಿವ ಜಿ.ಪರಮೇಶ್ವರ ಅವರು ಬುಧವಾರ ಹೇಳಿದ್ದಾರೆ...

ಬೆಂಗಳೂರು: ಇಲಾಖೆಗೆ ಸಲ್ಲಿಸಿರುವ ರಜೆ ಪತ್ರಗಳನ್ನು ಹಲವು ಪೊಲೀಸರು ಹಿಂಪಡೆಯುತ್ತಿದ್ದಾರೆಂದು ರಾಜ್ಯ ಗೃಹ ಸಚಿವ ಜಿ.ಪರಮೇಶ್ವರ ಅವರು ಬುಧವಾರ ಹೇಳಿದ್ದಾರೆ.

ರಾಜ್ಯದ ಪೊಲೀಸ್ ಸಿಬ್ಬಂದಿಗಳು ಜೂ.4 ರಂದು ಸಾಮೂಹಿಕ ರಜೆ ಹಾಕುವ ಮೂಲಕ ಪ್ರತಿಭಟನೆ ನಡೆಸಲು ತೀರ್ಮಾನಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಬಳಿಕ ಮಾತನಾಡಿರುವ ಅವರು, ಪ್ರತಿಭಟನೆಗೆ ಕುಮ್ಮಕ್ಕು ನೀಡಿದವರ ವಿರುದ್ಧ ತನಿಖೆ ನಡೆಸಲಾಗುತ್ತಿದೆ. ಪ್ರತಿಭಟನಾ ದಿನದಂದು ರಜೆಬೇಕೆಂದು ಈಗಾಗಲೇ ಇಲಾಖೆ ಸಲ್ಲಿಸಲಾಗಿರುವ ರಜೆ ಪತ್ರವನ್ನು ಹಲವು ಪೊಲೀಸರು ಹಿಂಪಡೆಯುತ್ತಿದ್ದಾರೆ. ಈ ಬಗ್ಗೆ ಹಲವು ಜಿಲ್ಲಾ ಪ್ರಧಾನಕಚೇರಿಗಳಿಂದ ವರದಿಗಳನ್ನು ಪಡೆಯಲಾಗಿದೆ ಎಂದು ಹೇಳಿದ್ದಾರೆ.

ಪೊಲೀಸ್ ಕಲ್ಯಾಣ ಸಂಘ 30 ಆಗ್ರಹಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ. ಇದರಲ್ಲಿ 12 ಆಗ್ರಹಗಳನ್ನು ಸ್ವೀಕರಿಸಲಾಗಿದೆ. ಈ ಬಗ್ಗೆ ಪೊಲೀಸರಿಂದಲೂ ಧನಾತ್ಮಕ ಪ್ರತಿಕ್ರಿಯೆಗಳನ್ನು ಪಡೆಯುತ್ತಿದ್ದೇವೆ. ಪೊಲೀಸರು ಸಾಮೂಹಿಕ ರಜೆ ತೆಗೆದುಕೊಳ್ಳಲು ಹೋಗುವುದಿಲ್ಲ. ಒಂದು ವೇಳೆ ಸಾಮೂಹಿಕ ರಜೆ ಪಡೆದಿದ್ದೇ ಆದರೆ, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಈಗಾಗಲೇ ಸಿಬ್ಬಂದಿಗಳ ಬಳಿ ಮನವಿ ಮಾಡಲಾಗಿದೆ. ಶಿಸ್ತಿನ ಬಗ್ಗೆ ಪೊಲೀಸ್ ಇಲಾಖೆ ತಿಳಿದಿದೆ.

ಈ ಬಗ್ಗೆ ಸರ್ಕಾರ ಪೊಲೀಸರೊಂದಿಗೆ ಮತ್ತೊಂದು ಸುತ್ತಿನ ಮಾತುಕತೆಯನ್ನು ನಡೆಸಲಿದೆ. ಜೂನ್ 4 ನಂತರ ಈ ಮಾತುಕತೆಯನ್ನು ನಡೆಸಲು ತೀರ್ಮಾನಿಸಲಾಗಿದೆ. ಪೊಲೀಸ್ ಸಿಬ್ಬಂದಿಗಳ ಆಗ್ರಹಗಳನ್ನು ಈಡೇರಿಸಲು ಸರ್ಕಾರ ಸಮತಿಯೊಂದನ್ನು ರಚಿಸಲು ಒಪ್ಪಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಕ್ರಮಬದ್ಧ ವ್ಯವಸ್ಥೆಯನ್ನು ನಿರ್ಮೂಲನೆಗೆ ಚಿಂತನೆ
ಇನ್ನು ಹಿರಿಯ ಪೊಲೀಸ್ ಅಧಿಕಾರಿಗಳ ನಿವಾಸದಲ್ಲಿ ಪೇದೆಗಳು ಕೆಲಸ ಮಾಡುವ ಕ್ರಮಬದ್ಧ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದ್ದು, ಅಂತಹ ಪೊಲೀಸ್ ಸಿಬ್ಬಂದಿಗೆ ಪರ್ಯಾಯ ಆಲೋಚನೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT