ರಾಜ್ಯ ಗೃಹ ಸಚಿವ ಜಿ.ಪರಮೇಶ್ವರ 
ರಾಜ್ಯ

ರಜೆ ಪತ್ರಗಳನ್ನು ಹಿಂಪಡೆಯುತ್ತಿದ್ದಾರೆ ಪೊಲೀಸರು: ಗೃಹ ಸಚಿವ

ಇಲಾಖೆಗೆ ಸಲ್ಲಿಸಿರುವ ರಜೆ ಪತ್ರಗಳನ್ನು ಹಲವು ಪೊಲೀಸರು ಹಿಂಪಡೆಯುತ್ತಿದ್ದಾರೆಂದು ರಾಜ್ಯ ಗೃಹ ಸಚಿವ ಜಿ.ಪರಮೇಶ್ವರ ಅವರು ಬುಧವಾರ ಹೇಳಿದ್ದಾರೆ...

ಬೆಂಗಳೂರು: ಇಲಾಖೆಗೆ ಸಲ್ಲಿಸಿರುವ ರಜೆ ಪತ್ರಗಳನ್ನು ಹಲವು ಪೊಲೀಸರು ಹಿಂಪಡೆಯುತ್ತಿದ್ದಾರೆಂದು ರಾಜ್ಯ ಗೃಹ ಸಚಿವ ಜಿ.ಪರಮೇಶ್ವರ ಅವರು ಬುಧವಾರ ಹೇಳಿದ್ದಾರೆ.

ರಾಜ್ಯದ ಪೊಲೀಸ್ ಸಿಬ್ಬಂದಿಗಳು ಜೂ.4 ರಂದು ಸಾಮೂಹಿಕ ರಜೆ ಹಾಕುವ ಮೂಲಕ ಪ್ರತಿಭಟನೆ ನಡೆಸಲು ತೀರ್ಮಾನಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಬಳಿಕ ಮಾತನಾಡಿರುವ ಅವರು, ಪ್ರತಿಭಟನೆಗೆ ಕುಮ್ಮಕ್ಕು ನೀಡಿದವರ ವಿರುದ್ಧ ತನಿಖೆ ನಡೆಸಲಾಗುತ್ತಿದೆ. ಪ್ರತಿಭಟನಾ ದಿನದಂದು ರಜೆಬೇಕೆಂದು ಈಗಾಗಲೇ ಇಲಾಖೆ ಸಲ್ಲಿಸಲಾಗಿರುವ ರಜೆ ಪತ್ರವನ್ನು ಹಲವು ಪೊಲೀಸರು ಹಿಂಪಡೆಯುತ್ತಿದ್ದಾರೆ. ಈ ಬಗ್ಗೆ ಹಲವು ಜಿಲ್ಲಾ ಪ್ರಧಾನಕಚೇರಿಗಳಿಂದ ವರದಿಗಳನ್ನು ಪಡೆಯಲಾಗಿದೆ ಎಂದು ಹೇಳಿದ್ದಾರೆ.

ಪೊಲೀಸ್ ಕಲ್ಯಾಣ ಸಂಘ 30 ಆಗ್ರಹಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ. ಇದರಲ್ಲಿ 12 ಆಗ್ರಹಗಳನ್ನು ಸ್ವೀಕರಿಸಲಾಗಿದೆ. ಈ ಬಗ್ಗೆ ಪೊಲೀಸರಿಂದಲೂ ಧನಾತ್ಮಕ ಪ್ರತಿಕ್ರಿಯೆಗಳನ್ನು ಪಡೆಯುತ್ತಿದ್ದೇವೆ. ಪೊಲೀಸರು ಸಾಮೂಹಿಕ ರಜೆ ತೆಗೆದುಕೊಳ್ಳಲು ಹೋಗುವುದಿಲ್ಲ. ಒಂದು ವೇಳೆ ಸಾಮೂಹಿಕ ರಜೆ ಪಡೆದಿದ್ದೇ ಆದರೆ, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಈಗಾಗಲೇ ಸಿಬ್ಬಂದಿಗಳ ಬಳಿ ಮನವಿ ಮಾಡಲಾಗಿದೆ. ಶಿಸ್ತಿನ ಬಗ್ಗೆ ಪೊಲೀಸ್ ಇಲಾಖೆ ತಿಳಿದಿದೆ.

ಈ ಬಗ್ಗೆ ಸರ್ಕಾರ ಪೊಲೀಸರೊಂದಿಗೆ ಮತ್ತೊಂದು ಸುತ್ತಿನ ಮಾತುಕತೆಯನ್ನು ನಡೆಸಲಿದೆ. ಜೂನ್ 4 ನಂತರ ಈ ಮಾತುಕತೆಯನ್ನು ನಡೆಸಲು ತೀರ್ಮಾನಿಸಲಾಗಿದೆ. ಪೊಲೀಸ್ ಸಿಬ್ಬಂದಿಗಳ ಆಗ್ರಹಗಳನ್ನು ಈಡೇರಿಸಲು ಸರ್ಕಾರ ಸಮತಿಯೊಂದನ್ನು ರಚಿಸಲು ಒಪ್ಪಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಕ್ರಮಬದ್ಧ ವ್ಯವಸ್ಥೆಯನ್ನು ನಿರ್ಮೂಲನೆಗೆ ಚಿಂತನೆ
ಇನ್ನು ಹಿರಿಯ ಪೊಲೀಸ್ ಅಧಿಕಾರಿಗಳ ನಿವಾಸದಲ್ಲಿ ಪೇದೆಗಳು ಕೆಲಸ ಮಾಡುವ ಕ್ರಮಬದ್ಧ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದ್ದು, ಅಂತಹ ಪೊಲೀಸ್ ಸಿಬ್ಬಂದಿಗೆ ಪರ್ಯಾಯ ಆಲೋಚನೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!