ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಅನಂತ ಕುಮಾರ್ 
ರಾಜ್ಯ

ಕುದುರೆ ವ್ಯಾಪಾರದಲ್ಲಿ ಕಾಂಗ್ರೆಸ್ ಭಾಗಿ: ಅನಂತ ಕುಮಾರ್

ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಕುದುರೆ ವ್ಯಾಪಾರ ನಡೆದಿದೆ ಎಂದು ಹೇಳಲಾಗುತ್ತಿದೆ. ಕೆಲವು ಭಾಗದಲ್ಲಿ ನೋಡುವುದಾದರೆ ಕಾಂಗ್ರೆಸ್ ಕೂಡ ಕುದುರೆ ವ್ಯಾಪಾರದಲ್ಲಿ ಭಾಗಿಯಾಗಿದೆ...

ಹುಬ್ಬಳ್ಳಿ: ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಕುದುರೆ ವ್ಯಾಪಾರ ನಡೆದಿದೆ ಎಂದು ಹೇಳಲಾಗುತ್ತಿದೆ. ಕೆಲವು ಭಾಗದಲ್ಲಿ ನೋಡುವುದಾದರೆ ಕಾಂಗ್ರೆಸ್ ಕೂಡ ಕುದುರೆ ವ್ಯಾಪಾರದಲ್ಲಿ ಭಾಗಿಯಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಅನಂತ ಕುಮಾರ್ ಅವರು ಸೋಮವಾರ ಹೇಳಿದ್ದಾರೆ.

ಕುದುರೆ ವ್ಯಾಪಾರ ಪ್ರಕರಣ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಸಿದ್ದರಾಮಯ್ಯ ಅವರ ದಬ್ಬಾಳಿಕೆ ಆಡಳಿತವನ್ನು ನಿಂದಿಸಬೇಕಾಗಿದೆ. ಪ್ರಸ್ತುತ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಜಿ. ಪರಮೇಶ್ವರ ಅವರ ಮಧ್ಯೆ ಕೋಲ್ಡ್ ವಾರ್ ನಡೆಯುತ್ತಿದ್ದು, ಇವರಿಬ್ಬ ಒಳಜಗಳ ಪೊಲೀಸ್ ವ್ಯವಸ್ಥೆ ಮೇಲೆ ಬಿದ್ದಿದೆ. ಮಾಧ್ಯಮಗಳಲ್ಲಿ ಇಬ್ಬರು ನಾಯಕರು ಹೇಳಿಕೆ ನೀಡುವುದನ್ನು ಇದಕ್ಕೆ ಸಾಕ್ಷಿಯಾಗಿ ತೆಗೆದುಕೊಳ್ಳಬಹುದು ಎಂದು ಹೇಳಿದ್ದಾರೆ.

ಯೂರಿಯಾ ಕೊರತೆಯಿಲ್ಲ
ಯೂರಿಯಾ ಸಂಗ್ರಹ ಕುರಿತಂತೆ ಮಾತನಾಡಿರುವ ಅವರು, ಮುಂದಿನ 18 ತಿಂಗಳ ಕಾಲದವರೆಗೂ ಯೂರಿಯಾ ಕೊರತೆಯಿಲ್ಲ .ದೇಶದಲ್ಲಿ ಇಂದು 32 ಲಕ್ಷ ಮೆಟ್ರಿಕ್ ಟನ್ ನಷ್ಟು ಯೂರಿಯಾ ಮತ್ತು ಕರ್ನಾಟಕದಲ್ಲಿ 1 ಲಕ್ಷ ಟನ್ ಯೂರಿಯಾ ಇದೆ, ಯೂರಿಯಾ ಬಗ್ಗೆ ಯಾವುದೇ ರಾಜ್ಯಗಳು ದೂರು ಹೇಳುವ ಪರಿಸ್ಥಿತಿ ಎದುರಾಗುವುದಿಲ್ಲ ಎಂದು ಹೇಳಿದ್ದಾರೆ.

ಯೂರಿಯಾ ಬಗ್ಗೆ ಈಗಾಗಲೇ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಯೂರಿಯಾ ಸೋರಿಕೆಯಾಗುವ ರಂಧ್ರಗಳ ಸ್ಥಳಗಳಲ್ಲಿ ಬೇವಿನ ಮೂಲಕ ಲೇಪನ ಮಾಡಲಾಗುತ್ತಿದೆ. ಇನ್ನು ಯೂರಿಯಾ ಉತ್ಪಾದನಾ ಘಟಕವನ್ನು ಕರ್ನಾಟಕದಲ್ಲಿ ಸ್ಥಾಪನೆ ಮಾಡಲು ಚಿಂತನೆ ನಡೆಸಲಾಗಿದೆ. ಆದರೆ, ರಾಜ್ಯ ಸರ್ಕಾರವೇ ಈ ಬಗ್ಗೆ ಸರಿಯಾಗಿ ಆಸಕ್ತಿಯನ್ನು ತೋರುತ್ತಿಲ್ಲ. ರೈತರ ಅಗತ್ಯತೆಗಾಗಿ ಎಲ್ಲಿ ಬೇಕಾದರೂ ಘಟಕ ಸ್ಥಾಪನೆ ಮಾಡಲು ಕೇಂದ್ರ ಸಿದ್ಧವಿದೆ. ಆದರೆ, ಮುಖ್ಯಮಂತ್ರಿಗಳು ಗಮನ ಹರಿಸುತ್ತಿಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT