ಅನುಪಮಾ ಶೆಣೈ 
ರಾಜ್ಯ

ನಾನು ರಾಜಿನಾಮೆ ನೀಡಿದ್ದೇನೆ, ಸಚಿವ ಪರಮೇಶ್ವರ್ ನಾಯ್ಕ್ ರಾಜಿನಾಮೆ ಯಾವಾಗ?: ಶೆಣೈ ಸವಾಲು

ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಪರಮೇಶ್ವರ್ ನಾಯ್ಕ್ ಅವರ ಕೆಂಗಣ್ಣಿಗೆ ಗುರಿಯಾಗಿ ವರ್ಗಾವಣೆಯಾಗಿದ್ದ ಕೂಡ್ಲಿಗಿ ಡಿವೈಎಸ್ ಪಿ ಅನುಪಮಾ ಶೆಣೈ....

ಬೆಂಗಳೂರು: ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಪರಮೇಶ್ವರ್ ನಾಯ್ಕ್ ಅವರ ಕೆಂಗಣ್ಣಿಗೆ ಗುರಿಯಾಗಿ ವರ್ಗಾವಣೆಯಾಗಿದ್ದ ಕೂಡ್ಲಿಗಿ ಡಿವೈಎಸ್ ಪಿ ಅನುಪಮಾ ಶೆಣೈ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿ, ಈಗ ವ್ಯವಸ್ಥೆಯ ವಿರುದ್ಧ ಫೇಸ್ ಬುಕ್ ನಲ್ಲಿ ಮತ್ತೆ ಸಿಡಿದೆದ್ದಿದ್ದಾರೆ.
ಕಳೆದ ಶನಿವಾರ ಡಿವೈಎಸ್ ಪಿ ಹುದ್ದೆಗೆ ರಾಜಿನಾಮೆ ನೀಡಿದ ನಂತರ ಯಾರ ಸಂಪರ್ಕಕ್ಕೂ ಸಿಗದೇ ಅಜ್ಞಾತ ಸ್ಥಳದಲ್ಲಿರುವ ಅನುಪಮಾ ಶೆಣೈ, ಸಾಮಾಜಿಕ ತಾಣದ ಮೂಲಕ ಕಾರ್ಮಿಕ ಸಚಿವ ಪರಮೇಶ್ವರ್ ನಾಯ್ಕ್ ಅವರಿಗೆ ಪ್ರತಿ ಸಾವಲು ಹಾಕಿದ್ದಾರೆ.
ಫೇಸ್ ಬುಕ್ ನಲ್ಲಿ ಹೊಸದಾಗಿ ಮತ್ತೊಂದು ಪೋಸ್ಟ್ ಅಪ್‌ಲೋಡ್ ಮಾಡಿರುವ ಶೆಣೈ, ಡಿವೈಎಸ್ಪಿ ಸ್ಥಾನಕ್ಕೆ ನಾನು ರಾಜೀನಾಮೆ ನೀಡಿದ್ದೇನೆ, ಪರಮೇಶ್ವರ ನಾಯಕ್ ಅವರೇ ನೀವು ಯಾವಾಗ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೀರಿ ಎಂದು ಪ್ರಶ್ನಿಸಿದ್ದಾರೆ.
ಇನ್ನು ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಪರಮೇಶ್ವರ್ ನಾಯ್ಕ್ ಅವರು, ವೈಎಸ್‌ಪಿ ಅನುಪಮಾ ಶೆಣೈ ರಾಜೀನಾಮೆಗೂ ತಮಗೂ ಯಾವುದೇ ಸಂಬಂಧ
ಇಲ್ಲ. ಪ್ರಕರಣ ಸಂಬಂಧ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

SCROLL FOR NEXT