ಆತ್ಮಹತ್ಯೆ ಮಾಡಿಕೊಂಡ ಸಿಆರ್ ಪಿಎಫ್ ಪೇದೆ 
ರಾಜ್ಯ

ಗುಂಡು ಹಾರಿಸಿಕೊಂಡು ಸಿಆರ್ ಪಿಎಫ್ ಪೇದೆ ಆತ್ಮಹತ್ಯೆ

ಛತ್ತೀಸ್ಗಢದ ನಕ್ಸಲ್ ಪೀಡಿತ ಪ್ರದೇಶ ದಂತೇವಾಡದಲ್ಲಿ ಹುಬ್ಬಳ್ಳಿ ಮೂಲದ ಸಿಆರ್ ಪಿಎಫ್ ಪೇದೆಯೊಬ್ಬ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...

ಹುಬ್ಬಳ್ಳಿ: ಛತ್ತೀಸ್ಗಢದ ನಕ್ಸಲ್ ಪೀಡಿತ ಪ್ರದೇಶ ದಂತೇವಾಡದಲ್ಲಿ ಹುಬ್ಬಳ್ಳಿ ಮೂಲದ ಸಿಆರ್ ಪಿಎಫ್ ಪೇದೆಯೊಬ್ಬ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ನಡೆದಿದೆ.

ಸತೀಶ್ ಯಂಕಪ್ಪ ಸಯನ್ನವಾರ್ (31) ಆತ್ಮಹತ್ಯೆ ಮಾಡಿಕೊಂಡ ಸಿಆರ್ ಪಿಎಫ್ ಪೇದೆ. ಅರನ್ಪುರ ಗ್ರಾಮದಲ್ಲಿದ್ದ ಕ್ಯಾಂಪೊದರಲ್ಲಿ ನಿನ್ನೆ ಬೆಳಿಗ್ಗೆ 10 ಗಂಟೆ ಸುಮಾರಿಗೆ ಬಂದಿರುವ ಸತೀಶ್ ಅವರು ಇದ್ದಕ್ಕಿದ್ದಂತೆ ಇನ್ಸಾಸ್ ರೈಫಲ್ ತೆಗೆದುಕೊಂಡು ಗುಂಡು ಹಾರಿಸಿಕೊಂಡಿದ್ದಾರೆ. ಕೂಡಲೇ ಅವರನ್ನು ಸಹೋದ್ಯೋಗಿಗಳು ಆಸ್ಪತ್ರೆಗೆ ದಾಖಲಿಸಿದ್ದಾರಾದರೂ ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದಾರೆಂದು ವೈದ್ಯರು ತಿಳಿಸಿದ್ದಾರೆ.

ಇನ್ನು ಸತೀಶ್ ಅವರ ಆತ್ಮಹತ್ಯೆ ಪ್ರಕರಣ ಕುರಿತಂತೆ ಈಗಾಗಲೇ ನ್ಯಾಯಾಲಯ ತನಿಖೆಗೆ ಆದೇಶಿಸಿದ್ದು, ತನಿಖೆ ನಂತರವಷ್ಟೇ ಆತ್ಮಹತ್ಯೆಗೆ ಪ್ರಮುಖ ಕಾರಣವೇನು ಎಂಬುದು ಹೊರಬರಬೇಕಿದೆ.

ಸತೀಶ್ ಕಳೆದ 11 ವರ್ಷಗಳಿಂದಲೂ 231 ಬೆಟಾಲಿಯನ್ ಸಿಆರ್ ಪಿಎಫ್ ನಲ್ಲಿ ಸೇವೆ ಸಲ್ಲಿಸಿದ್ದು, ಮೂಲತಃ ಹುಬ್ಬಳ್ಳಿಯ ಅಮರ್ಗೋಲ್ ಗ್ರಾಮದವರಾಗಿದ್ದಾರೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕರ್ನಾಟಕ ಜಾಗತಿಕ ನಾವೀನ್ಯತೆ ತಾಣವಾಗಿ ಪರಿವರ್ತಿಸಲು ಮೂರು ನೀತಿ ಅನಾವರಣಗೊಳಿಸಿದ ಸಿಎಂ

'ಆಪರೇಷನ್ ಕಾಡಾನೆ' ಸಕ್ಸಸ್: ನಾಲೆಗೆ ಬಿದ್ದು ಒದ್ದಾಡುತ್ತಿದ್ದ ಗಜರಾಜನ ರಕ್ಷಣೆ, ಅರಣ್ಯ ಇಲಾಖೆ ಸಾಹಸಕ್ಕೆ ಶ್ಲಾಘನೆ!

Ranji Trophy: ಚಂಡೀಗಢ ವಿರುದ್ಧ ಕರ್ನಾಟಕಕ್ಕೆ ಇನ್ನಿಂಗ್ಸ್ ಮತ್ತು 185 ರನ್ ಭರ್ಜರಿ ಜಯ

Ranji Trophy: ಒಂದೂ ರನ್ ನೀಡದೇ 5 ವಿಕೆಟ್.. Amit Shukla ಐತಿಹಾಸಿಕ ದಾಖಲೆ, IPL 2026 ಹರಾಜಿಗೆ ಭರ್ಜರಿ ಸಿದ್ಧತೆ!

'Glad Was In Audience': ಮತ್ತೆ ಪ್ರಧಾನಿಯನ್ನು ಹಾಡಿ ಹೊಗಳಿದ ಶಶಿ ತರೂರ್, ಗುಲಾಮ ಮನಸ್ಥಿತಿ ಕುರಿತ ಹೇಳಿಕೆ, ಕಾಂಗ್ರೆಸ್ ಕೆಂಡ!

SCROLL FOR NEXT