ಆತ್ಮಹತ್ಯೆ ಮಾಡಿಕೊಂಡ ಸಿಆರ್ ಪಿಎಫ್ ಪೇದೆ 
ರಾಜ್ಯ

ಗುಂಡು ಹಾರಿಸಿಕೊಂಡು ಸಿಆರ್ ಪಿಎಫ್ ಪೇದೆ ಆತ್ಮಹತ್ಯೆ

ಛತ್ತೀಸ್ಗಢದ ನಕ್ಸಲ್ ಪೀಡಿತ ಪ್ರದೇಶ ದಂತೇವಾಡದಲ್ಲಿ ಹುಬ್ಬಳ್ಳಿ ಮೂಲದ ಸಿಆರ್ ಪಿಎಫ್ ಪೇದೆಯೊಬ್ಬ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...

ಹುಬ್ಬಳ್ಳಿ: ಛತ್ತೀಸ್ಗಢದ ನಕ್ಸಲ್ ಪೀಡಿತ ಪ್ರದೇಶ ದಂತೇವಾಡದಲ್ಲಿ ಹುಬ್ಬಳ್ಳಿ ಮೂಲದ ಸಿಆರ್ ಪಿಎಫ್ ಪೇದೆಯೊಬ್ಬ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ನಡೆದಿದೆ.

ಸತೀಶ್ ಯಂಕಪ್ಪ ಸಯನ್ನವಾರ್ (31) ಆತ್ಮಹತ್ಯೆ ಮಾಡಿಕೊಂಡ ಸಿಆರ್ ಪಿಎಫ್ ಪೇದೆ. ಅರನ್ಪುರ ಗ್ರಾಮದಲ್ಲಿದ್ದ ಕ್ಯಾಂಪೊದರಲ್ಲಿ ನಿನ್ನೆ ಬೆಳಿಗ್ಗೆ 10 ಗಂಟೆ ಸುಮಾರಿಗೆ ಬಂದಿರುವ ಸತೀಶ್ ಅವರು ಇದ್ದಕ್ಕಿದ್ದಂತೆ ಇನ್ಸಾಸ್ ರೈಫಲ್ ತೆಗೆದುಕೊಂಡು ಗುಂಡು ಹಾರಿಸಿಕೊಂಡಿದ್ದಾರೆ. ಕೂಡಲೇ ಅವರನ್ನು ಸಹೋದ್ಯೋಗಿಗಳು ಆಸ್ಪತ್ರೆಗೆ ದಾಖಲಿಸಿದ್ದಾರಾದರೂ ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದಾರೆಂದು ವೈದ್ಯರು ತಿಳಿಸಿದ್ದಾರೆ.

ಇನ್ನು ಸತೀಶ್ ಅವರ ಆತ್ಮಹತ್ಯೆ ಪ್ರಕರಣ ಕುರಿತಂತೆ ಈಗಾಗಲೇ ನ್ಯಾಯಾಲಯ ತನಿಖೆಗೆ ಆದೇಶಿಸಿದ್ದು, ತನಿಖೆ ನಂತರವಷ್ಟೇ ಆತ್ಮಹತ್ಯೆಗೆ ಪ್ರಮುಖ ಕಾರಣವೇನು ಎಂಬುದು ಹೊರಬರಬೇಕಿದೆ.

ಸತೀಶ್ ಕಳೆದ 11 ವರ್ಷಗಳಿಂದಲೂ 231 ಬೆಟಾಲಿಯನ್ ಸಿಆರ್ ಪಿಎಫ್ ನಲ್ಲಿ ಸೇವೆ ಸಲ್ಲಿಸಿದ್ದು, ಮೂಲತಃ ಹುಬ್ಬಳ್ಳಿಯ ಅಮರ್ಗೋಲ್ ಗ್ರಾಮದವರಾಗಿದ್ದಾರೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'Grok ರಚಿಸಿದ ಅಸಭ್ಯ, ಕಾನೂನುಬಾಹಿರ ವಿಷಯಗಳ ತೆಗೆದುಹಾಕಿ': Elon Musk ಎಕ್ಸ್‌ಗೆ ಕೇಂದ್ರ ಸರ್ಕಾರ ಖಡಕ್ ಎಚ್ಚರಿಕೆ!

Ramnath Goenka Sahithya Samman 2025: ಸಾಹಿತಿ ಚಂದ್ರಶೇಖರ ಕಂಬಾರರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ

ಬಳ್ಳಾರಿ ಫೈರಿಂಗ್: ನಿನ್ನೆಯಷ್ಟೇ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಪವನ್ ನೆಜ್ಜೂರ್ ಅಮಾನತು

ಭಾರತ ತಂಡಕ್ಕೆ ಭಾರಿ ಆಘಾತ; ಸ್ಟಾರ್ ಆಟಗಾರನ ಮೂಳೆ ಮುರಿತ, ದೀರ್ಘಕಾಲ ಕ್ರಿಕೆಟ್‌ನಿಂದ ದೂರ!

EVM Survey: ಹಳೆಯ ಸಮೀಕ್ಷೆ ಬಳಸಿಕೊಂಡು ಜನರ ದಾರಿತಪ್ಪಿಸುತ್ತಿರುವುದು ವಿಷಾದನೀಯ - ಸಿಎಂ ಸಿದ್ದರಾಮಯ್ಯ

SCROLL FOR NEXT