ಅನುಪಮಾ ಶೆಣೈ 
ರಾಜ್ಯ

ಕೂಡ್ಲಿಗಿಗೆ ಮರಳಿದ ಡಿಎವೈಎಸ್ಪಿ ಅನುಪಮಾ ಶೆಣೈ

ಡಿವೈಎಸ್‌ಪಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅನುಪಮಾ ಶೆಣೈ ಪತ್ತೆಯಾಗಿದ್ದಾರೆ. ಗುರುವಾರ ಮುಂಜಾನೆ ಅವರು ಕೂಡ್ಲಿಗೆಗೆ ಆಗಮಿಸಿದ್ದಾರೆ..

ಬಳ್ಳಾರಿ : ಡಿವೈಎಸ್‌ಪಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅನುಪಮಾ ಶೆಣೈ ಪತ್ತೆಯಾಗಿದ್ದಾರೆ. ಗುರುವಾರ ಮುಂಜಾನೆ ಅವರು ಕೂಡ್ಲಿಗೆಗೆ ಆಗಮಿಸಿದ್ದಾರೆ. ಸದ್ಯ ಅನುಪಮಾ ಕೂಡ್ಲಿಗಿಯ ಪೊಲೀಸ್ ವಸತಿ ಗೃಹದಲ್ಲಿ ವಾಸ್ತವ್ಯ ಹೂಡಿದ್ದಾರೆ.

ತಮ್ಮ ಸಹೋದರ ಅಚ್ಯುತ್ ಜೊತೆ ಅನುಪಮಾ ಶೆಣೈ ಇಂದು ಬೆಳಗ್ಗೆ ಕೂಡ್ಲಿಗಿಗೆ ಆಗಮಿಸಿದ್ದಾರೆ.ಇಂದು ಸಂಜೆ ಅವರು ಬಳ್ಳಾರಿ ಎಸ್‌ಪಿ ಆರ್.ಚೇತನ್ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಜೂನ್ 4ರ ಶನಿವಾರ ಅನುಪಮಾ ಶೆಣೈ ಅವರು ರಾಜೀನಾಮೆ ನೀಡಿದ್ದರು. ನಂತರ ಅವರು ಬಹಿರಂಗವಾಗಿ ಎಲ್ಲೂ ಕಾಣಿಸಿಕೊಂಡಿರಲಿಲ್ಲ.

ಪೊಲೀಸ್ ಮಹಾನಿರ್ದೇಶಕರ ಸೂಚನೆಯಂತೆ ಅವರನ್ನು ಹುಡುಕಲು ಬುಧವಾರ ಪೊಲೀಸರ ತಂಡ ರಚನೆ ಮಾಡಲಾಗಿತ್ತು. ಬುಧವಾರ ರಾತ್ರಿ ಭಟ್ಕಳದಿಂದ ಹೊರಟ ಅನುಪಮಾ ಶೆಣೈ ಅವರು, ಹುಬ್ಬಳ್ಳಿ ಮೂಲಕ ಗುರುವಾರ ಮುಂಜಾನೆ 4.30ರ ಸುಮಾರಿಗೆ ಕೂಡ್ಲಿಗಿಯಲ್ಲಿರುವ ಪೊಲೀಸ್ ಕ್ವಾಟರ್ಸ್‌ಗೆ ಆಗಮಿಸಿದರು. ಸಂಜೆ ಅವರು ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಭೇಟಿ ಮಾಡಿ, ರಾಜೀನಾಮೆ ಪ್ರಕರಣದ ಬಗ್ಗೆ ವಿವರಣೆ ನೀಡುವ ಸಾಧ್ಯತೆ ಇದೆ.

ಇನ್ನೂ ಪಿ.ಟಿ ಪರಮೇಶ್ವರ್ ನಾಯಕ್ ಅವರ ಪ್ರಣಯ ಪ್ರಸಂಗದ ಸಿಡಿ ಮತ್ತು ಆಡಿಯೋ ಎರಡು ಇದೆ, ಸಂದರ್ಭ ಬಂದಾಗ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. ಚಿತ್ರದುರ್ಗದ ಹಾನಗಲ್ ಐಬಿಯಲ್ಲಿ ಮಹಿಳೆಯೋರ್ವಳ ಜೊತೆ ಪರಮೇಶ್ವರ ನಾಯಕ್ ಇದ್ದ ವಿಡಿಯೋ ನನ್ನ ಬಳಿ ಇದೆ ಎಂದು ಹೇಳಿದ್ದಾರೆ.



Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT