ಡಿ.ಕೆ.ಶಿವಕುಮಾರ್-ಹೆಚ್.ಡಿ.ರೇವಣ್ಣ 
ರಾಜ್ಯ

ರಾಜ್ಯಸಭಾ ಚುನಾವಣೆ: ಡಿಕೆಶಿ, ಎಚ್.ಡಿ.ರೇವಣ್ಣ ಮಧ್ಯೆ ವಾಗ್ವಾದ

ಕರ್ನಾಟಕದಿಂದ ರಾಜ್ಯಸಭೆಯ 4 ಸ್ಥಾನಗಳಿಗೆ ಚುನಾವಣೆ ಮತದಾನ ವಿಧಾನಸೌಧದ ಮತಕೇಂದ್ರದಲ್ಲಿ ನಡೆಯುತ್ತಿದ್ದ...

ಬೆಂಗಳೂರು: ಕರ್ನಾಟಕದಿಂದ ರಾಜ್ಯಸಭೆಯ 4 ಸ್ಥಾನಗಳಿಗೆ ಚುನಾವಣೆ ಮತದಾನ ವಿಧಾನಸೌಧದ ಮತಕೇಂದ್ರದಲ್ಲಿ ನಡೆಯುತ್ತಿದ್ದ ಸಂದರ್ಭದಲ್ಲಿ ಇಂಧನ ಸಚಿವ ಡಿ.ಕೆ.ಶಿವಕುಮಾರ್‌ ಮತ್ತು ಚುನಾವಣಾಧಿಕಾರಿ ಮೂರ್ತಿ ಅವರೊಂದಿಗೆ ಜೆಡಿಎಸ್‌ ಶಾಸಕ ಎಚ್‌.ಡಿ.ರೇವಣ್ಣ ವಾಗ್ವಾದ ನಡೆಸಿದ ಪ್ರಸಂಗ ನಡೆದಿದೆ.

ಕಾಂಗ್ರೆಸ್‌ ಶಾಸಕ ಜಿ.ರಾಮಕೃಷ್ಣ ತಮ್ಮ ಸಹಾಯಕರೊಂದಿಗೆ ಮತಕೇಂದ್ರಕ್ಕೆ ಬಂದರು. ಈ ವೇಳೆ ಜೆಡಿಎಸ್‌ ಪಕ್ಷದ ವೀಕ್ಷಕರಾಗಿ ಮತಕೇಂದ್ರದಲ್ಲಿ ಕುಳಿತಿದ್ದ ಎಚ್‌.ಡಿ.ರೇವಣ್ಣ ಅವರು ರಾಮಕೃಷ್ಣ ಅವರು ಸಹಾಯಕರೊಂದಿಗೆ ಬಂದಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು.

ರಾಮಕೃಷ್ಣ ಅವರು ಅನಾರೋಗ್ಯದ ಕಾರಣದಿಂದ ಸಹಾಯಕರೊಂದಿಗೆ ಬಂದಿದ್ದಾರೆ ಎಂದು ಚುನಾವಣಾಧಿಕಾರಿಗಳು ಹೇಳಿದರೂ ಸಮಾಧಾನಗೊಳ್ಳದ ರೇವಣ್ಣ, ‘ರಾಮಕೃಷ್ಣ ಅವರಿಗೆ ಅನಾರೋಗ್ಯವೇನಿಲ್ಲ. ಅವರು ಚೆನ್ನಾಗಿಯೇ ಇದ್ದಾರೆ. ಅವರು ಮತದಾನ ಮಾಡಲು ಸಹಾಯಕರ ಅಗತ್ಯ ಇಲ್ಲ’ಎಂದರು.

ಈ ವೇಳೆ ಚುನಾವಣಾಧಿಕಾರಿ ಮೂರ್ತಿ ರೇವಣ್ಣ ಅವರಿಗೆ ಸಮಾಧಾನ ಹೇಳಲು ಮುಂದಾದರು. ಆದರೆ ರೇವಣ್ಣ ಸಮಾಧಾನಕ್ಕೊಳಗಾಗಲಿಲ್ಲ, ಮತ್ತಷ್ಟು ಕುಪಿತರಾದರು. ಮತಕೇಂದ್ರದಲ್ಲಿ ಉಂಟಾದ ಗದ್ದಲದಿಂದ ಅಲ್ಲಿಗೆ ಬಂದ ಇಂಧನ ಸಚಿವ ಡಿ.ಕೆ.ಶಿವಕುಮಾರ್‌ ಅವರ ಜತೆಗೂ ರೇವಣ್ಣ ವಾಗ್ವಾದ ನಡೆಸಿದರು.

ಈ ರೀತಿ ಚುನಾವಣೆ ನಡೆಸುವುದಾದರೆ ನಾನು ಹೊರಹೋಗುತ್ತೇನೆ’ ಎಂದು ರೇವಣ್ಣ ಹೇಳಿದರು. ಆಗ ಸಚಿವ ಡಿ.ಕೆ.ಶಿವಕುಮಾರ್‌, ಹೊರಹೋಗುವುದಾದರೆ ಹೋಗಿ ಎಂದರು. ಈ ವೇಳೆ ಇಬ್ಬರ ಮಧ್ಯೆ ಕೆಲಕಾಲ ಮಾತಿನ ಚಕಮಕಿ ನಡೆಯಿತು.

ಕರ್ನಾಟಕದ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳ ಮತದಾನ ವಿಧಾನಸೌಧದ ಮೊದಲ ಮಹಡಿಯಲ್ಲಿರುವ ಸಮಿತಿಯ ಕೊಠಡಿ ಸಂಖ್ಯೆ 106ರಲ್ಲಿ ಬಿರುಸಿನ ಮತದಾನ ನಡೆಯುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವಿಶ್ವಸಂಸ್ಥೆ ನಿರ್ಣಯಗಳ ಆಧಾರದ ಮೇಲೆ ಕಾಶ್ಮೀರ ಸಮಸ್ಯೆ ಪರಿಹರಿಸಬೇಕು: ಭಾರತದ ವಿರುದ್ಧ ಮತ್ತೆ ಕ್ಯಾತೆ ತೆಗೆದ ಟರ್ಕಿ ಅಧ್ಯಕ್ಷ..!

ಗಾಝಾ ಯುದ್ಧ ನಿಲ್ಲಿಸಿದ್ರೆ ಮಾತ್ರ ಟ್ರಂಪ್'ಗೆ ನೊಬೆಲ್ ಪ್ರಶಸ್ತಿ; ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್

ಜಾತಿಗಳಿದ್ದ ಮಾತ್ರಕ್ಕೆ ಧರ್ಮ ಒಡೆಯುತ್ತದೆಯೇ? ಸಿದ್ದರಾಮಯ್ಯ ಹಿಂದೂ ವಿರೋಧಿ ಎಂದು ಬಿಂಬಿಸುವುದು ಬಿಜೆಪಿಯ ಏಕೈಕ ಅಜೆಂಡಾ!

"ನನ್ನನ್ನು ರಸ್ತೆಯಲ್ಲಿ ತಡೆದಿದ್ದಾರೆ": ಟ್ರಂಪ್‌ಗೇ ಮ್ಯಾಕ್ರನ್ ಫೋನ್ ಕಾಲ್, ನ್ಯೂಯಾರ್ಕ್‌ ಬೀದಿಯಲ್ಲಿ ಹೈಡ್ರಾಮಾ...!

ತೈವಾನ್‌ನಲ್ಲಿ ʻರಾಗಸʼ ಚಂಡಮಾರುತದ ಅಬ್ಬರ: 14 ಬಲಿ, 124 ಮಂದಿ ನಾಪತ್ತೆ

SCROLL FOR NEXT