ಎಚ್.ಡಿ ಕುಮಾರಸ್ವಾಮಿ ಮತ್ತು ಎಚ್.ಸಿ ಬಾಲಕೃಷ್ಣ 
ರಾಜ್ಯ

ಕೈಕೈ ಮಿಲಾಯಿಸಿದ ಎಚ್ಡಿಕೆ, ಬಾಲಕೃಷ್ಣ ಬೆಂಬಲಿಗರು: ಪೊಲೀಸರಿಂದ ಲಾಠಿ ಚಾರ್ಜ್

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ ಬೆಂಬಲಿಗರು ಕೈ ಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ತಲುಪಿ, ಬಳಿಕ ..

ರಾಮನಗರ: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ ಬೆಂಬಲಿಗರು ಕೈ ಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ತಲುಪಿ, ಬಳಿಕ ಪೊಲೀಸರು ಲಾಠಿ ಚಾರ್ಜ್ ಮಾಡಿರುವ ಘಟನೆ ರಾಮನಗರದಲ್ಲಿ ನಡೆದಿದೆ.

ಜೆಡಿಎಸ್ ಎಂಟು ಮಂದಿ ಶಾಸಕರ ಅಮಾನತು ನಿರ್ಧಾರ ಕಾರ್ಯಕರ್ತರ ಘರ್ಷಣೆ ಹಲವೆಡೆ ಘರ್ಷಣೆಗೆ ಕಾರಣವಾಗಿದೆ.  ಕುಮಾರಸ್ವಾಮಿ ಬೆಂಬಲಿಗರು ಅಮಾನತುಗೊಂಡ ಎಂಟು ಮಂದಿ ಶಾಸಕರ ಅಣಕು ಶವ ಯಾತ್ರೆ ನಡೆಸುತ್ತಿದ್ದರು.

ಈ ವೇಳೆ ಶಾಸಕ ಬಾಲಕೃಷ್ಣ ಬೆಂಬಲಿಗರು ಮಧ್ಯ ಪ್ರವೇಶಿಸಿ, ಬಾಲಕೃಷ್ಣ ಅವರಿಗೆ ಅನ್ಯಾಯವಾಗಿದೆ. ಅಮಾನತು ಅದೇಶವನ್ನು ಕೂಡಲೇ ಹಿಂಪಡೆಯಬೇಕು. ಬಾಲಕೃಷ್ಣ ಅವರು ಮುಜುಗರ ಉಂಟುಮಾಡಿದ್ದರೆ ಅವರನ್ನು ಒಂದು ಕರೆಸಿ ಮಾತನಾಡಬಹುದಿತ್ತು. ಈಗ ಏಕಾಏಕಿ ಅಮಾನತು ಎಷ್ಟು ಸರಿ ಎಂದು ಪ್ರಶ್ನಿಸಿ ಜೆಡಿಎಸ್ ವರಿಷ್ಠರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಬಾಲಕೃಷ್ಣ ಪರ ತಾ.ಪ. ಅಧ್ಯಕ್ಷ ಸುರೇಶ್ ಹಾಗೂ ಅವರ ಬೆಂಬಲಿಗರಿಂದ ಪ್ರತಿಭಟನಾಕಾರರನ್ನು ಕೆಣಕುವ ಪ್ರಯತ್ನ ನಡೆಯಿತು ಎಂದು ಕುಮಾರಸ್ವಾಮಿ ಬೆಂಬಲಿಗರೂ ಆರೋಪಿಸಿದ್ದಾರೆ. ಇದರಿಂದಾಗಿ ಇಬ್ಬರು ನಾಯಕರ ನಡುವೆ ಮಾತಿನ ಚಕಮಕಿ ತಾರಕಕ್ಕೇರಿತು. ಆಗ ಪರಿಸ್ಥಿತಿ ಕೈಮೀರುವ ಸಾಧ್ಯತೆ ಹಿನ್ನೆಲೆಯಲ್ಲಿ ಪೊಲೀಸರು ಲಾಠಿ ಚಾರ್ಜ್ ಮಾಡಿ ಗುಂಪನ್ನು ಚದುರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತಮಿಳು ನಾಡು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ TVK ಪಕ್ಷ ಸೇರಿದ ಸೆಂಗೊಟ್ಟೈಯನ್ ವಿಜಯ್

CM ಪಟ್ಟಕ್ಕಾಗಿ ಕಿತ್ತಾಟ: ಡಿಕೆಶಿಗೆ 'ಹೈಕಮಾಂಡ್' ಒಲವು ತೋರಿದ್ರೆ, ಸಿದ್ದರಾಮಯ್ಯರ ಮುಂದಿನ ಪ್ಲಾನ್ ಏನು?

ಶಂಕಿತ ದಾಳಿಕೋರ 'ನರಕ ದೇಶ' ಆಫ್ಘಾನಿಸ್ತಾನದಿಂದ ಬಂದವನು, ಇದು ಭಯೋತ್ಪಾದಕ ಕೃತ್ಯ: ನ್ಯಾಷನಲ್ ಗಾರ್ಡ್ ಮೇಲೆ ದಾಳಿಗೆ Donald Trump ತೀವ್ರ ಖಂಡನೆ

450 ಕೋಟಿ ರೂ. ಮೌಲ್ಯದ ಧರ್ಮೇಂದ್ರ ಆಸ್ತಿ ಯಾರ ಪಾಲಾಗುತ್ತೆ? ಕುತೂಹಲ ಕೆರಳಿಸಿದ ಹೇಮಾ ಮಾಲಿನಿ ಪೋಸ್ಟ್!

ಇದು ಜೈಲಲ್ಲ, ಮದ್ಯದ ಫ್ಯಾಕ್ಟರಿ: ಕೈದಿಗಳಿಂದ ಮದ್ಯ ತಯಾರಿಕೆ? ಏನಾಗುತ್ತಿದೆ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ?

SCROLL FOR NEXT