ಎಚ್.ಡಿ ಕುಮಾರಸ್ವಾಮಿ ಮತ್ತು ಎಚ್.ಸಿ ಬಾಲಕೃಷ್ಣ 
ರಾಜ್ಯ

ಕೈಕೈ ಮಿಲಾಯಿಸಿದ ಎಚ್ಡಿಕೆ, ಬಾಲಕೃಷ್ಣ ಬೆಂಬಲಿಗರು: ಪೊಲೀಸರಿಂದ ಲಾಠಿ ಚಾರ್ಜ್

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ ಬೆಂಬಲಿಗರು ಕೈ ಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ತಲುಪಿ, ಬಳಿಕ ..

ರಾಮನಗರ: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ ಬೆಂಬಲಿಗರು ಕೈ ಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ತಲುಪಿ, ಬಳಿಕ ಪೊಲೀಸರು ಲಾಠಿ ಚಾರ್ಜ್ ಮಾಡಿರುವ ಘಟನೆ ರಾಮನಗರದಲ್ಲಿ ನಡೆದಿದೆ.

ಜೆಡಿಎಸ್ ಎಂಟು ಮಂದಿ ಶಾಸಕರ ಅಮಾನತು ನಿರ್ಧಾರ ಕಾರ್ಯಕರ್ತರ ಘರ್ಷಣೆ ಹಲವೆಡೆ ಘರ್ಷಣೆಗೆ ಕಾರಣವಾಗಿದೆ.  ಕುಮಾರಸ್ವಾಮಿ ಬೆಂಬಲಿಗರು ಅಮಾನತುಗೊಂಡ ಎಂಟು ಮಂದಿ ಶಾಸಕರ ಅಣಕು ಶವ ಯಾತ್ರೆ ನಡೆಸುತ್ತಿದ್ದರು.

ಈ ವೇಳೆ ಶಾಸಕ ಬಾಲಕೃಷ್ಣ ಬೆಂಬಲಿಗರು ಮಧ್ಯ ಪ್ರವೇಶಿಸಿ, ಬಾಲಕೃಷ್ಣ ಅವರಿಗೆ ಅನ್ಯಾಯವಾಗಿದೆ. ಅಮಾನತು ಅದೇಶವನ್ನು ಕೂಡಲೇ ಹಿಂಪಡೆಯಬೇಕು. ಬಾಲಕೃಷ್ಣ ಅವರು ಮುಜುಗರ ಉಂಟುಮಾಡಿದ್ದರೆ ಅವರನ್ನು ಒಂದು ಕರೆಸಿ ಮಾತನಾಡಬಹುದಿತ್ತು. ಈಗ ಏಕಾಏಕಿ ಅಮಾನತು ಎಷ್ಟು ಸರಿ ಎಂದು ಪ್ರಶ್ನಿಸಿ ಜೆಡಿಎಸ್ ವರಿಷ್ಠರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಬಾಲಕೃಷ್ಣ ಪರ ತಾ.ಪ. ಅಧ್ಯಕ್ಷ ಸುರೇಶ್ ಹಾಗೂ ಅವರ ಬೆಂಬಲಿಗರಿಂದ ಪ್ರತಿಭಟನಾಕಾರರನ್ನು ಕೆಣಕುವ ಪ್ರಯತ್ನ ನಡೆಯಿತು ಎಂದು ಕುಮಾರಸ್ವಾಮಿ ಬೆಂಬಲಿಗರೂ ಆರೋಪಿಸಿದ್ದಾರೆ. ಇದರಿಂದಾಗಿ ಇಬ್ಬರು ನಾಯಕರ ನಡುವೆ ಮಾತಿನ ಚಕಮಕಿ ತಾರಕಕ್ಕೇರಿತು. ಆಗ ಪರಿಸ್ಥಿತಿ ಕೈಮೀರುವ ಸಾಧ್ಯತೆ ಹಿನ್ನೆಲೆಯಲ್ಲಿ ಪೊಲೀಸರು ಲಾಠಿ ಚಾರ್ಜ್ ಮಾಡಿ ಗುಂಪನ್ನು ಚದುರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT