ಕಾಮಗಾರಿ ಪರಿಶೀಲಿಸುತ್ತಿರುವ ಸಿಎಂ 
ರಾಜ್ಯ

ಮಾನ ಮರ್ಯಾದೆ ಇಲ್ವಾ ಇಂಥಾ ಕೆಲ್ಸ ಮಾಡೋಕೆ: ಬಿಡಿಎ ಅಧಿಕಾರಿಗೆ ಸಿಎಂ ತರಾಟೆ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ)ದ ಅಧಿಕಾರಿಯೊಬ್ಬರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ತೀವ್ರ ತರಾಟೆಗೆ...

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ)ದ ಅಧಿಕಾರಿಯೊಬ್ಬರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ತೀವ್ರ ತರಾಟೆಗೆ ತೆಗೆದುಕೊಂಡರು. 
ಇಂದು ಬೆಳಗ್ಗೆ ಬೆಂಗಳೂರು ನಗರ ಪ್ರದಕ್ಷಿಣೆ ನಡೆಸಿದ ಸಿದ್ದರಾಮಯ್ಯ, ಹೆಣ್ಣೂರು ಓವರ್‌ ಬ್ರಿಡ್ಜ್ ಕಾಮಗಾರಿ ವಿಳಂಬವನ್ನು ಪ್ರಶ್ನಿಸಿ ಬಿಡಿಎ ಭೂಸ್ವಾಧೀನ ಅಧಿಕಾರಿ ವಸಂತ್‌ ಕುಮಾರ್‌ ಅವರನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. 
ಕಾಮಗಾರಿ ವಿಳಂಬದ ಕುರಿತಾಗಿ ವಸಂತ್‌ ಅವರನ್ನು ಪ್ರಶ್ನಿಸಿದ ಸಿಎಂ 'ಎನೋ ಇದು.. ಮಾನ ಮಾರ್ಯಾದೆ ಇಲ್ವಾ ಇಂಥಾ ಕೆಲ್ಸ ಮಾಡೋಕೆ. ಇನ್ನು ಒಂದು ತಿಂಗಳ ಒಳಗೆ ಭೂಸ್ವಾಧೀನ ನಡೆಸಬೇಕು, ಇಲ್ಲದಿದ್ದರೆ ಸಂಸ್ಪೆಂಡ್‌ ಮಾಡಿ ಬಿಡ್ತೇನೆ ಎಂದು ಗದರಿದರು. ಅಲ್ಲದೆ ನಂಜಪ್ಪ ಸಂಬಂಧಿ ಆದ್ರೂ ತೊಂದ್ರೆ ಇಲ್ಲ, ಸಂಸ್ಪೆಂಡ್‌ ಮಾಡಿ ಬಿಡ್ತಿನಿ ಎಂದು ಎಚ್ಚರಿಸಿದರು.
ವಸಂತ್‌ ಅವರು ತೆಂಗು ನಾರು ನಿಗಮ ಮಂಡಳಿ ಅಧಕ್ಷ, ಕಾಂಗ್ರೆಸ್‌ ನಾಯಕ  ನಂಜಪ್ಪ ಅವರ ಸಂಬಂಧಿ ಎಂದು ಹೇಳಿಕೊಂಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

Encounter: ಮಹಾರಾಷ್ಟ್ರ-ಛತ್ತೀಸ್‌ಗಢ ಗಡಿಯಲ್ಲಿ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ನಕ್ಸಲೀಯರ ಹತ್ಯೆ!

SCROLL FOR NEXT