ಯೋಗೇಶಗೌಡ 
ರಾಜ್ಯ

ಧಾರವಾಡ ಜಿಪಂ ಸದಸ್ಯನ ಕೊಲೆ ಕೇಸ್ ಗೆ ಹೊಸ ಟ್ವಿಸ್ಟ್, ಅನಾಮಧೇಯ ಪತ್ರದಲ್ಲಿ ಇಬ್ಬರು ಸಚಿವರ ಹೆಸರು ಉಲ್ಲೇಖ

ಧಾರವಾಡ ಜಿಲ್ಲಾ ಪಂಚಾಯತ್ ಬಿಜೆಪಿ ಸದಸ್ಯ ಯೋಗೇಶಗೌಡ ಗೌಡರ್ ಕೊಲೆ ಪ್ರಕರಣಕ್ಕೆ ಹೊಸ ತಿರುವು ಪಡೆದುಕೊಂಡಿದ್ದು, ಕೊಲೆಗೂ...

ಧಾರವಾಡ: ಧಾರವಾಡ ಜಿಲ್ಲಾ ಪಂಚಾಯತ್ ಬಿಜೆಪಿ ಸದಸ್ಯ ಯೋಗೇಶಗೌಡ ಗೌಡರ್ ಕೊಲೆ ಪ್ರಕರಣಕ್ಕೆ ಹೊಸ ತಿರುವು ಪಡೆದುಕೊಂಡಿದ್ದು, ಕೊಲೆಗೂ ಮುನ್ನ ಯೋಗೀಶಗೌಡರ ಮನೆಗೆ ಅನಾಮಧೇಯ ಪತ್ರವೊಂದು ಬಂದಿದ್ದು, ಆ ಪತ್ರದಲ್ಲಿ ರಾಜ್ಯದ ಪ್ರಭಾವಿ ಸಚಿವರಿಬ್ಬರ ಹೆಸರನ್ನು ಉಲ್ಲೇಖಿಸಲಾಗಿದೆ.
ಪತ್ರದ ಸಾರಾಂಶ ಹೀಗಿದೆ...
ನಮಸ್ಕಾರ ಯೋಗೇಶ ಗೌಡ್ರುಗೆ,
ನಿಮ್ಮ ಅಣ್ಣ ಉದಯಗೌಡ ಅವರನ್ನು ಕೊಲೆ ಮಾಡಿಸಿದವರು ವಿನಯ್ ಕುಲಕರ್ಣಿ ಹಾಗೂ ಎಚ್..ಕೆ.ಪಾಟೀಲ್. ಅವರು ಮತ್ತೆ ಸಮಯ ನೋಡಿ ನಿಮ್ಮನ್ನೂ ಕೊಲೆ ಮಾಡಿಸಬೇಕೆಂದು ಕೆಲ ದಿನಗಳಿಂದ ಕಾಯುತ್ತಿದ್ದಾರೆ. ನಾನು ಯಾರು ಅಂತ ತಿಳಿದುಕೊಳ್ಳುವ ಪ್ರಯತ್ನ ಮಾಡಬೇಡಿ. ಮುಂದೆ ನಿಮಗೆ ಎಲ್ಲಾ ರೀತಿಯ ಮಾಹಿತಿಯನ್ನು ಪತ್ರದ ಮೂಲಕ ತಿಳಿಸುತ್ತೇನೆ. ನಿಮ್ಮ ಸಹಾಯ ನನಗೆ ಬೇಕಾಗುತ್ತದೆ. ಆಗ ನಾನೇ ನಿಮ್ಮ ಹತ್ತಿರ ಬರುತ್ತೇನೆ. ಸಹಾಯ ಮಾಡಿ ಎಂದು ಬರೆದು, ಸಹಿ ಮಾಡಿ ಧನ್ಯವಾದ ಎಂದಿದ್ದಾರೆ. 
ಈ ಪತ್ರ ಯೋಗೀಶಗೌಡ ಅವರ ಹತ್ಯೆಯ ಮೊದಲ ದಿನ ಅವರ ಮನೆಗೆ ಬಂದಿತ್ತು. ಹಾಳೆಯ ತ್ರಿಕೋನ ಆಕಾರದಲ್ಲಿ ಪತ್ರವನ್ನು ಬರೆದು ಕೊಟ್ಟು ಹೋಗಲಾಗಿದೆ. ಆದರೆ ಈ ಪತ್ರವನ್ನು ಬರೆದವರ್ಯಾರು?  ಇವರಿಗೆ ಕೊಲೆ ಮಾಡುವ ಸಂಚು ರೂಪಿಸುತ್ತಿದ್ದಾರೆ ಎಂಬ ಸುಳಿವು ಕೊಟ್ಟವರು ಯಾರು? ಈ ಅನಾಮಧೇಯ ವ್ಯಕ್ತಿ ಯಾರು ಎಂಬ ಅನುಮಾನ ಸ್ಥಳೀಯರಲ್ಲಿ ಹಾಗೂ ಪೊಲೀಸರನ್ನು ಕಾಡುತ್ತಿದೆ. ಅಲ್ಲದೇ ಪತ್ರದಲ್ಲಿ ಇಬ್ಬರು ರಾಜಕಾರಣಿಗಳ ಹೆಸರನ್ನು ಬರೆಯಲಾಗಿದ್ದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
ಈ ಅನಾಮಧೇಯ ಪತ್ರವನ್ನು ಯೋಗೇಶ ಗೌಡ ಕುಟುಂಬಸ್ಥರು ಧಾರವಾಡ ಉಪನಗರ ಪೊಲೀಸರಿಗೆ ನೀಡಿದ್ದು, ಪೊಲೀಸರು ಈ ಬಗ್ಗೆ ಗಂಭೀರವಾಗಿ ತನಿಖೆ ನಡೆಸುತ್ತಿದ್ದಾರೆ.
ನಿನ್ನೆ ಬೆಳಗ್ಗೆ 7.30ರ ಸುಮಾರಿಗೆ ಯೋಗೀಶಗೌಡ ಅವರನ್ನು ಸಪ್ತಾಪುರದಲ್ಲಿರುವ ಅವರ ಜಿಮ್ ನಲ್ಲಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದರು. ಕೆಲವು ವರ್ಷಗಳ ಹಿಂದೆ ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ ಅವರ ಹಿರಿಯ ಸಹೋದರ ಉಯಗೌಡ ಅವರನ್ನು ಸಹ ಹತ್ಯೆ ಮಾಡಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT