ಉಡುಪಿ: ಮಾಜಿ ಡಿವೈಎಸ್ ಪಿ ಅನುಪಮಾ ಶೆಣೈ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಭೇಟಿ ಮಾಡಲು ತೀರ್ಮಾನಿಸಿದ್ದು, ಸಚಿವರೊಬ್ಬ ನೀಡಿದ್ದ ಕಿರುಕುಳುದ ಕುರಿತು ವರದಿ ಸಲ್ಲಿಸಲಿದ್ದಾರೆಂದು ತಿಳಿದುಬಂದಿದೆ.
ಈ ಕುರಿತಂತೆ ಮಾತನಾಡಿರುವ ಅನುಪಮಾ ಶೆಣೈ ಸಹೋದರ ಅಚ್ಯುತ್ ಶೆಣೈ ಅವರು, ಅನುಪಮಾ ಪ್ರಸ್ತುತ ಬೆಂಗಳೂರಿನಲ್ಲಿಯೇ ಇದ್ದು, ಸೋನಿಯಾ sಗಾಂಧಿಯವರನ್ನು ಭೇಟಿಯಾಗಲು ದೆಹಲಿಗೆ ಹೋಗಲು ನಿರ್ಧರಿಸಿದ್ದಾರೆ. ಭೇಟಿ ವೇಳೆ ಬಳ್ಳಾರಿ ಜಿಲ್ಲಾ ಸಚಿವ ಪಿ.ಟಿ. ಪರಮೇಶ್ವರ್ ನಾಯಕ್ ಅವರು ಕೆಲಸದ ವೇಳೆ ಮಧ್ಯಸ್ಥಿಕೆ ವಹಿಸಿ ಕಿರುಕುಳ ನೀಡಿದ್ದರ ಕುರಿತಂತೆ ವರದಿ ಸಲ್ಲಿಸಲಿದ್ದಾರೆಂದು ಹೇಳಿದ್ದಾರೆ.
ಪ್ರಸ್ತುತ ಸೋನಿಯಾ ಗಾಂಧಿಯವರು ದೆಹಲಿಯಲ್ಲಿಲ್ಲ ಎಂಬುದಾಗಿ ತಿಳಿದುಬಂದಿದ್ದು, ಇನ್ನು 2-3 ದಿನಗಳನ್ನು ಬಿಟ್ಟು ಅನುಪಮಾ ದೆಹಲಿಗೆ ತೆರಳಲಿದ್ದಾರೆ. ಅಲ್ಲದೆ, ಪರಮೇಶ್ವರ್ ನಾಯಕ್ ವಿರುದ್ಧ ದೂರು ನೀಡಲು ರಾಜ್ಯಪಾಲರನ್ನು ಭೇಟಿಯಾಗಲು ಅನುಪಮಾ ನಿರ್ಧರಿಸಿದ್ದಾರೆಂದು ಹೇಳಿದ್ದಾರೆ.