ಯದುವೀರ್ ಒಡೆಯರ್ ಮತ್ತು ರಿಷಿಕಾ ಕುಮಾರಿ 
ರಾಜ್ಯ

ಯದುವೀರ್ ಒಡೆಯರ್ ವಿವಾಹಕ್ಕೆ ಸಿದ್ಧತೆ: ಅರಮನೆ ಪ್ರವೇಶಕ್ಕೆ ನಿರ್ಬಂಧ

ಬಹು ಕುತೂಹಲ ಮೂಡಿಸಿರುವ ಮೈಸೂರು ರಾಜಮನೆತನದ ಉತ್ತರಾಧಿಕಾರಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರ ಅದ್ದೂರಿ ವಿವಾಹ ...

ಮೈಸೂರು: ಬಹು ಕುತೂಹಲ ಮೂಡಿಸಿರುವ ಮೈಸೂರು ರಾಜಮನೆತನದ ಉತ್ತರಾಧಿಕಾರಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರ ಅದ್ದೂರಿ ವಿವಾಹ ಮಹೋತ್ಸವಕ್ಕೆ ಅರಮನೆ ಸಜ್ಜಾಗುತ್ತಿದೆ.

ಅರಮನೆಯಲ್ಲಿ ವಿವಾಹ ಸಂಬಂಧ ಕಾರ್ಯಕ್ರಮಗಳು ನಡೆಯುತ್ತಿರುವ ಹಿನ್ನಲೆಯಲ್ಲಿ ಜೂನ್‌ 23 ರಿಂದ 28 ರ ವರೆಗೆ ಮೈಸೂರು ಅರಮನೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗುತ್ತದೆ.

ರಾಜಮಾತೆ ಪ್ರಮೋದಾ ದೇವಿ ಅವರು ಮೈಸೂರು ಜಿಲ್ಲಾಧಿಕಾರಿ  ಶಿಖಾ ಅವರಿಗೆ ಪತ್ರ ಬರೆದು ಜೂನ್ 23 ರಿಂದ 28 ವರೆಗೆ ಅರಮನೆಗೆ ಸಾರ್ವಜನಿಕ ಪ್ರವೇಶ ನಿರ್ಬಂಧಿಸಲು ಮನವಿ ಮಾಡಿದ್ದಾರೆ.

ರಾಜಸ್ಥಾನದ ದುಂಗರ್ಪುರ್‌ ರಾಜಮನೆತನದ ರಿಶಿಕಾಕುಮಾರಿ ಮನವಿ ಅವರನ್ನು ಯದುವೀರ್‌ ಅವರು ಜೂನ್‌ 27 ರಂದು ವಿವಾಹವಾಗಲಿದ್ದಾರೆ. 28 ರಂದು ಅರಮನೆಯಲ್ಲಿ ಅರತಕ್ಷತೆ ನಡೆಯಲಿದೆ.

ವಿಶ್ವ ವಿಖ್ಯಾತ ಅಂಬಾವಿಲಾಸ ಅರಮನೆ ಕಲ್ಯಾಣ ಮಂಟಪದಲ್ಲಿ ಐದು ದಿನಗಳ ಕಾಲ ವಿವಾಹ ಮಹೋತ್ಸವ ನಡೆಸಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT