ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರಿನ 10 ಜಾಹೀರಾತು ಸಂಸ್ಥೆಗಳ ಮೇಲೆ ಲೋಕಾಯುಕ್ತ ದಾಳಿ

ಬಹಳ ದಿನಗಳ ನಂತರ ಮತ್ತೆ ಕಾರ್ಯಾಚರಣೆಗಿಳಿದಿರುವ ಲೋಕಾಯುಕ್ತ ಪೊಲೀಸರು, ಅಕ್ರಮ ಹೊರ್ಡಿಂಗ್ಸ್ ಪ್ರಕರಣ ಸಂಬಂಧ ಶನಿವಾರ 10...

ಬೆಂಗಳೂರು: ಬಹಳ ದಿನಗಳ ನಂತರ ಮತ್ತೆ ಕಾರ್ಯಾಚರಣೆಗಿಳಿದಿರುವ ಲೋಕಾಯುಕ್ತ ಪೊಲೀಸರು, ಅಕ್ರಮ ಹೊರ್ಡಿಂಗ್ಸ್ ಪ್ರಕರಣ ಸಂಬಂಧ ಶನಿವಾರ 10 ಜಾಹೀರಾತು ಸಂಸ್ಥೆಗಳ ಮೇಲೆ ದಾಳಿ ನಡೆಸಿದ್ದಾರೆ.
ಈ ಹಿಂದೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಜಾಹೀರಾತು ವಿಭಾಗದ ಸಹಾಯಕ ಆಯುಕ್ತ ಕೆ ಮಥಾಯಿ ಅವರು ನೀಡಿದ್ದ ವರದಿಯನ್ನು ಆಧರಿಸಿ ಕಳೆದ ವರ್ಷ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಸುಮಾರು 3 ಸಾವಿರಕ್ಕೂ ಹೆಚ್ಚು ಅಕ್ರಮ ಹೊರ್ಡಿಂಗ್ ಗಳಿಂದಾಗಿ ಬಿಬಿಎಂಪಿ ಸುಮಾರು 2 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ ಎಂದು ಮಥಾಯಿ ಅವರು ತಮ್ಮ ವರದಿಯಲ್ಲಿ ತಿಳಿಸಿದ್ದರು.
ಇನ್ ಫ್ಯಾಂಟ್ರಿ ರಸ್ತೆಯಲ್ಲಿರುವ ಪ್ರಕಾಶ್ ಆರ್ಟ್ಸ್ ಪ್ರೈವೆಟ್ ಲಿಮಿಟೆಡ್, ಫ್ರೇಸರ್ ಟೌನ್ ನಲ್ಲಿರುವ ಸ್ಪಾರ್ಕ್ ಅಡ್ವರ್ ಟೈಸಿಂಗ್, ಎಂ.ಜಿ.ರಸ್ತೆಯಲ್ಲಿರುವ ಔಟ್ ಡೂರ್ ಮೀಡಿಯಾ, ಸಿವಿ ರಾಮನ್ ನಗರದಲ್ಲಿರುವ ಪಿಆರ್ ಒ ಆಡ್ಸ್, ಲಾಲ್ಬಾಗ್ ರಸ್ತೆಯಲ್ಲಿರುವ ಪಾಪೂಲರ್ ಅಡ್ವರ್ಟೈಸರ್ಸ್ ಹಾಗೂ ಪೂರ್ವ ಆಡ್ವರ್ಟೈಸಿಂಗ್ ಸೇರಿದಂತೆ 10 ಜಾಹೀರಾತು ಸಂಸ್ಥೆಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.
ದಾಳಿಯ ವೇಳೆ ಹಲವು ದಾಖಲೆಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಸುಮಾರು 300 ಲೈಸನ್ಸ್ ಗಳನ್ನು ನಕಲಿ ಮಾಡಿದ್ದು, ಇದರಿಂದ ಬಿಬಿಎಂಪಿ 1,200 ಕೋಟಿ ರುಪಾಯಿ ನಷ್ಟವಾಗಿರುವುದು ಪತ್ತೆಯಾಗಿದೆ ಎಂದಿದ್ದಾರೆ. ಅಲ್ಲದೆ ಜಾಹೀರಾತು ಸಂಸ್ಥೆಗಳು ಅನುಮತಿ ಪಡೆದಿದ್ದಕ್ಕಿಂತಲೂ ಹೆಚ್ಚು ವಿಸ್ತಿರ್ಣದಲ್ಲಿ ಹೊರ್ಡಿಂಗ್ಸ್ ಹಾಕಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

SCROLL FOR NEXT