ಅನುಪಮಾ ಶೆಣೈ 
ರಾಜ್ಯ

ಅನುಪಮಾ ಶೆಣೈ ರಾಜಿನಾಮೆ ಪ್ರಕರಣಕ್ಕೆ ಟ್ವಿಸ್ಟ್: ಎಸ್ ಪಿ ವಿರುದ್ದ ಮಹಿಳಾ ಆಯೋಗಕ್ಕೆ ದೂರು

ಮಾಜಿ ಡಿವೈಎಸ್ ಪಿ ಅನುಪಮಾ ಶೆಣೈ ರಾಜಿನಾಮೆ ಪ್ರಕರಣ ಹೊಸ ತಿರುವು ಪಡೆದಿದ್ದು, ಅವರು ರಾಜಿನಾಮೆ ನೀಡಿದ ಜೂನ್‌ 4ರ ದಿನಾಂಕವನ್ನೇ ಉಲ್ಲೇಖಿಸಿರುವ ಏಳು ...

ಬಳ್ಳಾರಿ:  ಮಾಜಿ ಡಿವೈಎಸ್ ಪಿ ಅನುಪಮಾ ಶೆಣೈ ರಾಜಿನಾಮೆ ಪ್ರಕರಣ ಹೊಸ ತಿರುವು ಪಡೆದಿದ್ದು, ಅವರು ರಾಜಿನಾಮೆ ನೀಡಿದ ಜೂನ್‌ 4ರ ದಿನಾಂಕವನ್ನೇ ಉಲ್ಲೇಖಿಸಿರುವ ಏಳು ಪುಟದ ದೂರು, ಅವರ ಆಪ್ತರೊಬ್ಬರ ಮೂಲಕ ರಾಜ್ಯ ಮಹಿಳಾ ಆಯೋಗಕ್ಕೆ ತಲುಪಿದೆ.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಆರ್‌.ಚೇತನ್‌ ನನಗೆ ಕಿರುಕುಳ ನೀಡುತ್ತಿದ್ದರು. ಕೆಲಸದಲ್ಲಿ ನನ್ನ ಅಧೀನ ಅಧಿಕಾರಿಗಳು ಸಹಕರಿಸುತ್ತಿರಲಿಲ್ಲ ಎಂದು ಅವರು ಆರೋಪಿಸಿದ್ದಾರೆ. ನಾನು ರಾಜೀನಾಮೆ ನೀಡಲು ಚೇತನ್‌ ಅವರೇ ಕಾರಣರಾಗಿರುತ್ತಾರೆ ಎಂದು ಆರೋಪಿಸಿದ್ದಾರೆ.

ಜನವರಿಯಲ್ಲಿ ಅನ್ಯಕಾರ್ಯ ನಿಮಿತ್ತ ನನ್ನನ್ನು ಇಂಡಿಗೆ ನಿಯೋಜಿಸಿದಾಗ ಮಾನಸಿಕ ಒತ್ತಡಕ್ಕೆ ಒಳಗಾಗಿ 19 ದಿನ ಕಾಯಿಲೆ ರಜೆ  ಹಾಕಿ ಊರಿಗೆ ತೆರಳಿದ್ದೆ. ಈ ಸಮಯದಲ್ಲಿ ಪೊಲೀಸ್ ಠಾಣೆಯ ಗೌಪ್ಯ ದಾಖಲೆಗಳನ್ನು ಎಸ್ಪಿ ಮಾಧ್ಯಮಕ್ಕೆ ಬಿಡುಗಡೆ ಮಾಡಿದ್ದರು ಎಂದು ದೂರವಾಗಿದೆ.

ನನ್ನ ಪರವಾಗಿ ಜನ ಪ್ರತಿಭಟನೆ ನಡೆಸುತ್ತಿದ್ದಾಗಲೇ, ಒಒಡಿ ಚಾಲನಾ ಆದೇಶವನ್ನು ಡಿವೈಎಸ್ಪಿ ಮೂಲಕ ಮನೆಗೆ ಕಳಿಸಿದ್ದರು. ಆ ಆದೇಶ ರದ್ದಾಗಿ ಕೂಡ್ಲಿಗಿಗೆ ಬಂದ ಬಳಿಕ ಕ್ಷುಲ್ಲಕ ಕಾರಣಗಳಿಗೆ ಮೆಮೊ ನೀಡುತ್ತಿದ್ದರು. ಜೂನ್‌ 4ರಂದು ಕೂಡ್ಲಿಗಿ ಡಿವೈಎಸ್ಪಿ ಕಚೇರಿ ಮುಂದೆ ನಡೆದ ಪ್ರತಿಭಟನೆಗೂ ಅವರೇ ಕುಮ್ಮಕ್ಕು ನೀಡಿದ್ದರು ಎಂದು ಅನುಪಮಾ ಆರೋಪಿಸಿದ್ದಾರೆ.

ಕಾಯಿಲೆಗಾಗಿ ಪಡೆದಿದ್ದ ರಜೆಯ ಹಿನ್ನೆಲೆಯಲ್ಲಿ ಸಲ್ಲಿಸಿದ್ದ ರಜೆ ಚೀಟಿಯನ್ನು ವೈದ್ಯಕೀಯ ಮಂಡಳಿ ಪರಿಶೀಲನೆಗೆ ಮೇ ತಿಂಗಳಲ್ಲಿ ರವಾನಿಸಿದ್ದಾರೆ ಎಂದು ದೂರಿರುವ ಅವರು, ದೂರು ಅರ್ಜಿ ವಿಚಾರಣೆಯನ್ನು ಪೊಲೀಸರಿಗೆ ನೀಡದೇ, ಆಯೋಗವೇ ನಡೆಸಬೇಕು ಎಂದು  ಕೋರಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಎಸ್ಪಿ ಆರ್‌. ಚೇತನ್, ಅನುಪಮಾ ವಿಚಾರದಲ್ಲಿ, ಇತರ ಅಧೀನ ಅಧಿಕಾರಿಗಳೊಂದಿಗೆ ವರ್ತಿಸುವಂತೆ ಕಾನೂನು ಪ್ರಕಾರವೇ ನಡೆದುಕೊಂಡಿದ್ದೇನೆ  ಎಂದು ತಿಳಿಸಿದ್ದಾರೆ. ಅನುಪಮಾ ಅವರಿಗೆ ಕಿರುಕುಳ ನೀಡಲೇಬೇಕೆಂದಿದ್ದರೆ, ಅವರ ವಿರುದ್ಧ ಹಿರಿಯ ಅಧಿಕಾರಿಗಳಿಗೆ ವಿನಾಕಾರಣ ವರದಿ ಬರೆಯಬಹುದಿತ್ತು. ಸಹೋದ್ಯೋಗಿಗಳ ಮುಂದೆ ಅವರನ್ನು ಅವಮಾನಿಸಬಹುದಿತ್ತು. ಆದರೆ ಹಾಗೆ ಎಂದಿಗೂ ವರ್ತಿಸಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮೋದಿ@75: ದೇಶಾದ್ಯಂತ ಬಿಜೆಪಿಯಿಂದ ಅ.2ರವರೆಗೆ ವಿವಿಧ ಸಮಾಜಮುಖಿ ಕಾರ್ಯಕ್ರಮಗಳು

PM Modi 75th birthday: ಶುಭಾಶಯ ತಿಳಿಸಿದ ಡೊನಾಲ್ಡ್ ಟ್ರಂಪ್: ಭಾರತ-ಯುಎಸ್ ಸಂಬಂಧ ವೃದ್ಧಿ ಬಗ್ಗೆ ಉಭಯ ನಾಯಕರು ಚರ್ಚೆ

ಡೆಹ್ರಾಡೂನ್ ನೆರೆಹೊರೆ ಪ್ರದೇಶಗಳಲ್ಲಿ ಭಾರೀ ಪ್ರವಾಹ, ಭೂಕುಸಿತ: 17 ಸಾವು, 20ಕ್ಕೂ ಹೆಚ್ಚು ಮಂದಿ ನಾಪತ್ತೆ

ಖರ್ಗೆಗೂ ಮೀಸಲಾತಿ, ಖರ್ಗೆ ಮಗನಿಗೂ ಮೀಸಲಾತಿ: ಸಿದ್ದರಾಮಯ್ಯ ಪರ ಬೀದಿಗೆ ಇಳಿದರೆ ಕಾಗಿನೆಲೆ ಶ್ರೀಗಳ ತಲೆದಂಡ; ವಿಶ್ವನಾಥ್

ಕೊಲೆ ಪ್ರಕರಣದಲ್ಲಿ ಜಾಮೀನು ಪಡೆಯಲು ಅಧಿಕಾರಿಯ ಮನೆಯಲ್ಲಿ ದರೋಡೆ: ಇಬ್ಬರು ರೌಡಿಶೀಟರ್‌ ಸೇರಿ ಮೂವರ ಬಂಧನ

SCROLL FOR NEXT