ಮೈಸೂರು ವಿವಿ ಪತ್ರಿಕೋದ್ಯಮ ವಿಭಾಗದ ಪ್ರಾಧ್ಯಾಪಕ ಪ್ರೊ.ಮಹೇಶ್ ಚಂದ್ರಗುರು 
ರಾಜ್ಯ

ಶ್ರೀರಾಮನ ವಿರುದ್ಧ ಅವಹೇಳನಕಾರಿ ಹೇಳಿಕೆ: ಪ್ರೊ.ಮಹೇಶ್ ಚಂದ್ರಗುರು ಅಮಾನತು

ಶ್ರೀರಾಮಚಂದ್ರನ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆಂದು ಆರೋಪಿಸಿ ಮೈಸೂರು ವಿವಿ ಪತ್ರಿಕೋದ್ಯಮ ವಿಭಾಗದ ಪ್ರಾಧ್ಯಾಪಕ ಪ್ರೊ.ಮಹೇಶ್ ಚಂದ್ರಗುರು ಅವರನ್ನು...

ಮೈಸೂರು: ಶ್ರೀರಾಮಚಂದ್ರನ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆಂದು ಆರೋಪಿಸಿ ಮೈಸೂರು ವಿವಿ ಪತ್ರಿಕೋದ್ಯಮ ವಿಭಾಗದ ಪ್ರಾಧ್ಯಾಪಕ ಪ್ರೊ.ಮಹೇಶ್ ಚಂದ್ರಗುರು ಅವರನ್ನು ಮಂಗಳವಾರ ಅಮಾನತು ಮಾಡಲಾಗಿದೆ.

2015ರ ಆರಂಭಿಕ ತಿಂಗಳಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಮಹೇಶ್ ಚಂದ್ರಗುರು ಅವರು ಶ್ರೀರಾಮಚಂದ್ರನ ಕುರಿತು ಅವಹೇಳನಕಾರಿ ಮಾತುಗಳನ್ನಾಡಿ ಧಾರ್ಮಿ ಭಾವನೆಗಳಿಗೆ ಧಕ್ಕೆಯುಂಟು ಮಾಡಿದ್ದಾರೆಂದು ಆರೋಪಿಸಿ ಸ್ಥಳೀಯರಾದ ರವಿಶಂಕರ್ ನಗರದ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧ ಸೆಕ್ಷನ್ 285ಎ ಅನ್ವಯ ಪೊಲೀಸರು ದೂರು ದಾಖಲಿಸಿಕೊಂಡಿದ್ದರು. ಅಲ್ಲದೆ, ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಕೆಲವು ದಿನಗಳ ಹಿಂದಷ್ಟೇ ವಿಜಾರಣೆಗೆ ಹಾಜರಾಗುವಂತೆ ಸಮನ್ಸ್ ಇದ್ದುದರಿಂದ ಮಹೇಶ್ ಚಂದ್ರಗುರು ಅವರು ನ್ಯಾಯಾಲಯಕ್ಕೆ ಹಾಜರಾಗಿದ್ದರು. ವಿಚಾರಣೆ ನಡೆಸಿದ್ದ ನ್ಯಾಯಾಲಯವು, ಪ್ರಕರಣ ಜಾಮೀನು ರಹಿತವಾಗಿರುವುದರಿಂದ ಮಹೇಸ್ ಚಂದ್ರ ಅವರನ್ನು ಜೂ.20 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.

ಮಹೇಶ್ ಗುರು ಅವರು ಬಂಧನಕ್ಕೊಳಗಾಗಿ 48 ಗಂಟೆಗಳು ಕಳೆದರೂ ಈ ವರೆಗೂ ಅವರಿಗೆ ಜಾಮೀನು ದೊರಕಿಲ್ಲ. ಈ ಹಿನ್ನೆಲೆಯಲ್ಲಿ ಅವರನ್ನು ಅಮಾನತು ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

ಮಹೇಶ್ ಚಂದ್ರಗುರು ಅಮಾನತು ಹೊಸದಲ್ಲ
ಮಹೇಶ್ ಚಂದ್ರಗುರು ಅವರು ಅಮಾನತಾಗುತ್ತಿರುವುದು ಇದು ಹೊಸದೇನಲ್ಲ. ಈ ಹಿಂದೆಯೂ ವಿಶ್ವವಿದ್ಯಾಲಯದ ನಿಧಿಗಳ ದುರುಪಯೋಗ ಮಾಡಿಕೊಂಡ ಆರೋಪದ ಮೇಲೆ ಕೆಲವು ವರ್ಷಗಳ ಅಮಾನತು ಮಾಡಲಾಗಿತ್ತು. ಅಲ್ಲದೆ, ಈ ವರ್ಷದ ಜನವರಿ ತಿಂಗಳಿನಲ್ಲಿಯೂ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ವಿರುದ್ಧವೂ ಅವಹೇಳನಕಾರಿಯಾಗಿ ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿದ್ದರು.

ಮಾನಸಗಂಗೋತ್ರಿಯ ಮಾನವಿಕ ಸಭಾಂಗಣದಲ್ಲಿ ದಲಿತ ವಿದ್ಯಾರ್ಥಿ ಒಕ್ಕೂಟ ಏರ್ಪಡಿಸಿದ್ದ ವೇಮುಲಗೆ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಅವರು, ಮೋದಿ ಒಬ್ಬ ಬೇವರ್ಸಿ. ಇರಾನಿಯವರನ್ನು ಮೋದಿ ಮಾನವ ಸಂಪನ್ಮೂಲ ಸಚಿವೆಯಾಗಿ ಯಾಕೆ ಮಾಡಿದ್ದರು? ಸ್ಮೃತಿ ಇರಾನಿ ಓರ್ವ ಧರ್ಡ್ ರೇಡ್ ನಟಿ. ಮೋದಿಗೆ ಇರಾನಿ ಬಗ್ಗೆ ಹೆಚ್ಚು ಆಸಕ್ತಿ ಇದ್ದರೆ ಅವರನ್ನು ಗೃಹ ಸಚಿವೆಯಾಗಿ ಮಾಡಬೇಕಿತ್ತು. ಮಾನವ ಸಂಪನ್ಮೂಲ ಸಚಿವೆಯಾಗಿ ಮಾಡಿದ ದೇಶದ ಶಿಕ್ಷಣ ವ್ಯವಸ್ಥೆಯನ್ನು ಹಾಳು ಮಾಡಿದ್ದಾರೆಂದು ಬಾಯಿಗೆ ಬಂದಂತೆ ಮಾತನಾಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'Grok ರಚಿಸಿದ ಅಸಭ್ಯ, ಕಾನೂನುಬಾಹಿರ ವಿಷಯಗಳ ತೆಗೆದುಹಾಕಿ': Elon Musk ಎಕ್ಸ್‌ಗೆ ಕೇಂದ್ರ ಸರ್ಕಾರ ಖಡಕ್ ಎಚ್ಚರಿಕೆ!

Ramnath Goenka Sahithya Samman 2025: ಸಾಹಿತಿ ಚಂದ್ರಶೇಖರ ಕಂಬಾರರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ

ಬಳ್ಳಾರಿ ಫೈರಿಂಗ್: ನಿನ್ನೆಯಷ್ಟೇ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಪವನ್ ನೆಜ್ಜೂರ್ ಅಮಾನತು

ಭಾರತ ತಂಡಕ್ಕೆ ಭಾರಿ ಆಘಾತ; ಸ್ಟಾರ್ ಆಟಗಾರನ ಮೂಳೆ ಮುರಿತ, ದೀರ್ಘಕಾಲ ಕ್ರಿಕೆಟ್‌ನಿಂದ ದೂರ!

EVM Survey: ಹಳೆಯ ಸಮೀಕ್ಷೆ ಬಳಸಿಕೊಂಡು ಜನರ ದಾರಿತಪ್ಪಿಸುತ್ತಿರುವುದು ವಿಷಾದನೀಯ - ಸಿಎಂ ಸಿದ್ದರಾಮಯ್ಯ

SCROLL FOR NEXT