ಸಾಂದರ್ಭಿಕ ಚಿತ್ರ 
ರಾಜ್ಯ

ರ‍್ಯಾಗಿಂಗ್ ಪ್ರಕರಣಕ್ಕೆ ಹೊಸ ಟ್ವಿಸ್ಟ್: ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ್ದಳು ಎಂದ ವಾರ್ಡನ್

ನಗರದ ಖಾಸಗಿ ನರ್ಸಿಂಗ್ ಕಾಲೇಜಿನ ವಸತಿ ನಿಲಯದಲ್ಲಿ ಕೇರಳ ವಿದ್ಯಾರ್ಥಿನಿಯೊಬ್ಬಳ ಮೇಲೆ ನಡೆದಿದೆ ಎನ್ನಲಾಗುತ್ತಿದ್ದ ರ‍್ಯಾಗಿಂಗ್ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿನಿ ಮೇಲೆ ಯಾವುದೇ...

ಕಲಬುರಗಿ: ನಗರದ ಖಾಸಗಿ ನರ್ಸಿಂಗ್ ಕಾಲೇಜಿನ ವಸತಿ ನಿಲಯದಲ್ಲಿ ಕೇರಳ ವಿದ್ಯಾರ್ಥಿನಿಯೊಬ್ಬಳ ಮೇಲೆ ನಡೆದಿದೆ ಎನ್ನಲಾಗುತ್ತಿದ್ದ ರ‍್ಯಾಗಿಂಗ್ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿನಿ ಮೇಲೆ ಯಾವುದೇ ರ‍್ಯಾಗಿಂಗ್ ನಡೆದಿರಲಿಲ್ಲ, ಬದಲಿಗೆ ಆಕೆ ಆತ್ಮಹತ್ಯೆಗೆ ಯತ್ನಿಸಿದ್ದಳು ಎಂದು ವಸತಿ ನಿಲಯದ ಅಧಿಕಾರಿಗಳು ಬುಧವಾರ ಸ್ಪಷ್ಟಪಡಿಸಿದ್ದಾರೆ.

ಈ ಕುರಿತಂತೆ ಮಾತನಾಡಿರುವ ವಸತಿ ನಿಲಯದ ವಾರ್ಡನ್ ಎಸ್ಥಾರ್, ಕೇರಳ ವಿದ್ಯಾರ್ಥಿನಿ ಮೇಲೆ ಹಿರಿಯ ವಿದ್ಯಾರ್ಥಿಗಳು ಯಾವುದೇ ರ‍್ಯಾಗಿಂಗ್ ಮಾಡಿರಲಿಲ್ಲ. ಆಕೆ, ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಳು ಎಂದು ಹೇಳಿಕೊಂಡಿದ್ದಾರೆ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಎಶ್ ಶಶಿಕುಮಾರ್ ಅವರು ಪ್ರಕರಣ ಸಂಬಂಧ ಶೀಘ್ರಗತಿಯಲ್ಲಿ ತನಿಖೆ ನಡೆಸುವ ಸಲುವಾಗಿ ವಿಶೇಷ ತನಿಖಾಧಿಕಾರಿಯಾಗಿ ಡಿವೈಎಸ್ ಪಿ ಜಾನ್ಹವಿಯವರನ್ನು ನೇಮಿಸಿದ್ದಾರೆ.

ಘಟನೆ ಕುರಿತಂತೆ ಮಾತನಾಡಿರುವ ಎಸ್ ಪಿ. ಶಶಿಕುಮಾರ್ ಅವರು, ಪ್ರಸ್ತುತ ನಮಗೆ ಬಂದಿರುವ ಮಾಹಿತಿ ಪ್ರಕಾರ, ವಿದ್ಯಾರ್ಥಿನಿ ಕೇರಳದ ಕೋಝಿಕೋಡ್ ಮೂಲದವಳಾಗಿದ್ದಾಳೆಂದು ತಿಳಿದುಬಂದಿದೆ. ಸಂತ್ರಸ್ತೆ ಮೇಲೆ 8 ಹಿರಿಯ ವಿದ್ಯಾರ್ಥಿನಿಯರಿಂದ ರ‍್ಯಾಗಿಂಗ್ ನಡೆದಿದ್ದು, ಜಾತಿ ಕುರಿತಂತೆ ವಿದ್ಯಾರ್ಥಿನಿಗೆ ನಿಂದಿಸಲಾಗಿದೆ. ಅಲ್ಲದೆ, ವಿದ್ಯಾರ್ಥಿನಿಗೆ ಬಲವಂತವಾಗಿ ಟಾಯ್ಲೆಟ್ ಕ್ಲೀನರ್ ಕುಡಿಯುವಂತೆ ಮಾಡಲಾಗಿದೆ ಎಂದು ವಿದ್ಯಾರ್ಥಿನಿ ಎಫ್ಐಆರ್ ನಲ್ಲಿ ದಾಖಲಿಸಿದ್ದಾಳೆಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಉಕ್ರೇನ್ ವಿರುದ್ಧ ರಷ್ಯಾದ ದೀರ್ಘಕಾಲ ಸಂಘರ್ಷಕ್ಕೆ ಭಾರತವೇ ಕಾರಣ, ಇದು 'ಮೋದಿ ಯುದ್ಧ': White House ವ್ಯಾಪಾರ ಸಲಹೆಗಾರ ಪೀಟರ್ ನವರೊ

ಅಮೆರಿಕದ ಸುಂಕ: ಜವಳಿ ವಲಯದ ಒತ್ತಡ ಕಡಿಮೆ ಮಾಡಲು 40 ಪ್ರಮುಖ ಆಮದು ದೇಶ ಗುರುತು

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

SCROLL FOR NEXT