ಟ್ಯಾಬ್ ಬಳಕೆ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಪೋಷಕರು 
ರಾಜ್ಯ

ಟ್ಯಾಬ್ ಬಳಕೆಗೆ ಪೋಷಕರ ವಿರೋಧ: ನಿರ್ಧಾರದಿಂದ ಹಿಂದೆ ಸರಿದ ಶಾಲೆ

ಶಾಲೆಗೆ ಹೋಗುವ ಮಕ್ಕಳ ಚೀಲದ ಹೊರೆಯನ್ನು ಕಡಿಮೆ ಮಾಡುವ ಸಲುವಾಗಿ ಪುಸ್ತಕ ಬದಲು ಟ್ಯಾಬ್ ಬಳಕೆ ಮಾಡುವ ಶಾಲೆ ನಿರ್ಧಾರಕ್ಕೆ ಮಕ್ಕಳ ಪೋಷಕರು ವಿರೋಧ ವ್ಯಕ್ತಪಡಿಸಿದ್ದು...

ಬೆಂಗಳೂರು: ಶಾಲೆಗೆ ಹೋಗುವ ಮಕ್ಕಳ ಚೀಲದ ಹೊರೆಯನ್ನು ಕಡಿಮೆ ಮಾಡುವ ಸಲುವಾಗಿ ಪುಸ್ತಕ ಬದಲು ಟ್ಯಾಬ್ ಬಳಕೆ ಮಾಡುವ ಶಾಲೆ ನಿರ್ಧಾರಕ್ಕೆ ಮಕ್ಕಳ ಪೋಷಕರು ವಿರೋಧ ವ್ಯಕ್ತಪಡಿಸಿದ್ದು, ಇದೀಗ ತನ್ನ ನಿರ್ಧಾರಿಂದ ಶಾಲೆ ಹಿಂದೆ ಸರಿದಿದೆ.

ಬನ್ನೇರುಘಟ್ಟ ರಸ್ತೆಯಲ್ಲಿರುವ ಶ್ರೀ ಚೈತನ್ಯ ಟೆಕ್ನೋ ಶಾಲೆ ಶಾಲಾ ಮಕ್ಕಳ ಪೋಷಕರನ್ನು ಸಂಪರ್ಕಿಸದೆಯೇ 3 ರಿಂದ 6ನೇ ತರಗತಿ ಮಕ್ಕಳಿಗೆ ಪುಸ್ತಕದ ಬದಲು ಟ್ಯಾಬ್ ಬಳಕೆ ಮಾಡುವ ನಿರ್ಧಾರವನ್ನು ಕೈಗೊಂಡಿತ್ತು. ಶಾಲೆಯ ನಿರ್ಧಾರಕ್ಕೆ ಮಕ್ಕಳ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ, ನೂರಕ್ಕೂ ಹೆಚ್ಚು ಪೋಷಕರು ನಿನ್ನೆ ಶಾಲೆಯ ಮುಂದೆ ಪ್ರತಿಭಟನೆ ನಡೆಸಿದ್ದರು.

ಪೋಷಕರೊಂದಿಗೆ ಸಭೆ ನಡೆಸಿ ಮಾತುಕತೆ ನಡೆಸದೆಯೇ ಶಾಲೆ ನಿರ್ಧಾರ ಕೈಗೊಂಡಿತ್ತು. ಪ್ರತೀ ಟ್ಯಾಬ್ ರು.9000 ಎಂದು ಹೇಳಲಾಗಿತ್ತು. ಪುಸ್ತಕದ ಬದಲಿಗೆ ಮಕ್ಕಳಿಗೆ ಟ್ಯಾಬ್ ಬಳಕೆ ನೀಡಿದರೆ ಮಕ್ಕಳ ಕಲಿಕೆಯ ಮೇಲೆ ಅದು ಪರಿಣಾಮ ಬೀರಲಿದೆ. ನಿಯಮ ಜಾರಿಗೆ ತಂದ ವೇಳೆ ಟ್ಯಾಬ್ ಬಳಕೆ ಕಡ್ಡಾಯವೆಂದು ತಿಳಿಸಿತ್ತು. ಇದೀಗ ನಮ್ಮ ಆಯ್ಕೆಗೆ ಬಿಟ್ಟದ್ದು ಎಂದು ಹೇಳುತ್ತಿದೆ ಎಂದು ಪೋಷಕ ಸತೀಶ್ ಹೆಚ್.ಪಿ ಅವರು ಹೇಳಿಕೊಂಡಿದ್ದಾರೆ.

ಇನ್ನು ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿರುವ ಶಾಲಾ ಆಡಳಿತ ಮಂಡಳಿಯವರು, ಸಿಬಿಎಸ್ ಸಿ ಮಾರ್ಗಸೂಚಿ ಪ್ರಕಾರ ನಾವು ನಿರ್ಧಾರ ಕೈಗೊಂಡಿದ್ದೇವೆ. ಶಾಲಾ ಮಕ್ಕಳ ಚೀಲಗಳ ಭಾರವನ್ನು ಇಳಿಸುವ ಸಲುವಾಗಿ ಪರ್ಯಾಯ ಮಾರ್ಗ ಹುಡುವಂತೆ ಶಿಕ್ಷಣ ಇಲಾಖೆ ಸೂಚಿಸಿತ್ತು. ಇದರಂತೆ ನಾವು ನಿರ್ಧಾರ ಕೈಗೊಂಡಿದ್ದೆವು ಎಂದು ಹೇಳಿಕೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT