ಸಾಂದರ್ಭಿಕ ಚಿತ್ರ 
ರಾಜ್ಯ

ಕಿರುತೆರೆ ನಟಿಯ ಗರ್ಭಿಣಿ ಮಾಡಿ ಕೈಕೊಟ್ಟ ನಟ ಜೈಲು ಪಾಲು

ಖ್ಯಾತ ಕಿರುತೆರೆ ಧಾರಾವಾಹಿ ಮೊಗ್ಗಿನ ಮನಸ್ಸು ಖ್ಯಾತಿಯ ನಟ ಮಿಥುನ್ ವಂಚನೆ ಆರೋಪದ ಮೇರೆಗೆ ಬಂಧನಕ್ಕೊಳಗಾಗಿದ್ದಾರೆ...

ಬೆಂಗಳೂರು: ಖ್ಯಾತ ಕಿರುತೆರೆ ಧಾರಾವಾಹಿ ಮೊಗ್ಗಿನ ಮನಸ್ಸು ಖ್ಯಾತಿಯ ನಟ ಮಿಥುನ್ ವಂಚನೆ ಆರೋಪದ ಮೇರೆಗೆ ಬಂಧನಕ್ಕೊಳಗಾಗಿದ್ದಾರೆ.

ಮೂಲಗಳ ಪ್ರಕಾರ ಕಿರುತೆರೆ ನಟಿಯೋರ್ವರನ್ನು ಮಿಥುನ್ ಮದುವೆಯಾಗುವುದಾಗಿ ನಂಬಿಸಿ ಅವರು ಗರ್ಭಿಣಿಯಾಗುವಂತೆ ಮಾಡಿ ಇದೀಗ ಅವರಿಗೆ ವಂಚನೆ ಮಾಡಿದ್ದಾರೆ ಎಂದು ನಟಿ  ಆರೋಪಿಸಿದ್ದಾರೆ. ಪ್ರಸ್ತುತ ನಟ ಮಿಥುನ್ ವಿರುದ್ಧ ಕಾಮಾಕ್ಷಿಪಾಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆತನನ್ನು ಬಂಧಿಸಿದ್ದಾರೆ. ಪ್ರಸ್ತುತ ನಟ ಮಿಥನ್ ನನ್ನು ಪೊಲೀಸರು  ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದು, ನ್ಯಾಯಾಲಯ ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಂಗ ವಶಕ್ಕೆ ನೀಡಿದೆ.

ಏನಿದು ಘಟನೆ?

ಮೂಲತಃ ಬೆಂಗಳೂರಿನ ನಾಗರಬಾವಿ ಸಮೀಪದ ಮೂಡಲಪಾಳ್ಯ ನಿವಾಸಿಯಾಗಿರುವ ಮಿಥುನ್ ದಾವಣಗೆರೆ ಮೂಲದ ಮತ್ತು ಪ್ರಸ್ತುತ ಅಗ್ರಹಾರ ದಾಸರಹಳ್ಳಿಯಲ್ಲಿ ವಾಸಿಸುತ್ತಿರುವ ಕಿರುತೆರೆ  ನಟಿಯನ್ನು 2015ರಲ್ಲಿ ಮದುವೆ ಸಮಾರಂಭದಲ್ಲಿ ಪರಿಚಯ ಮಾಡಿಕೊಂಡಿದ್ದರು. ಸ್ನೇಹಿತರ ಸಹಾಯದಿಂದ "ಮೊಗ್ಗಿನ ಮನಸ್ಸು" ಎಂಬ ಕಿರುತೆರೆ ಧಾರಾವಾಹಿಯಲ್ಲಿ ಇಬ್ಬರೂ ನಟಿಸಿದ್ದರು. ಈ  ಇದನ್ನೇ ಬಂಡವಾಳವಾಗಿಸಿಕೊಂಡ ಮಿಥುನ್ ಹುಡುಗಿ ಮನೆಗೆ ಆಗಾಗ ಹೋಗಿ ಬರುತ್ತಿದ್ದು, ಕ್ರಮೇಣ ಇಬ್ಬರ ಪರಿಚಯ ಪ್ರೀತಿಗೆ ತಿರುಗಿ ದೈಹಿಕ ಸಂಬಂಧದರೆಗೂ ಸಾಗಿದೆ.

ಇದೀಗ ಹುಡುಗಿ ಗರ್ಭಿಣಿ ಎಂದು ತಿಳಿದ ಮೇಲೆ ಮದುವೆಯಾಗಲು ಮಿಥುನ್ ನಿರಾಕರಿಸಿದ್ದು, ಇದರಿಂದ ಕುಪಿತಗೊಂಡ ಸಂತ್ರಸ್ತ ಹುಡುಗಿ ಹಾಗೂ ಆಕೆ ಪಾಲಕರು ರಾಜಿ ಸಂಧಾನ ನಡೆಸಿದ್ದರು.  ಆಗ ಮದುವೆಗೆ ಒಪ್ಪಿಕೊಂಡಿದ್ದ ಆರೋಪಿ, ಪತ್ನಿಯನ್ನು ಮನೆಗೆ ಕರೆದುಕೊಂಡು ಹೋಗುವುದಿಲ್ಲ. ಆಕೆಯ ಮನೆಯಲ್ಲೇ ಇರಿಸುವುದಾಗಿ ಷರತ್ತು ವಿಧಿಸಿದ್ದ. ಇದಕ್ಕೆ ಒಪ್ಪದ ಸಂತ್ರಸ್ತೆ ಜೂನ್  22ರಂದು ಕಾಮಾಕ್ಷಿ ಪಾಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ 3 ತಿಂಗಳ ಗರ್ಭಿಣಿಯಾಗಿರುವುದು ಖಚಿತವಾಗಿತ್ತು. ವಿಚಾರಣೆ ವೇಳೆ ಆರೋಪಿ, ಸಂತ್ರಸ್ತೆ ಜತೆ  ಸಂಬಂಧ ಇಟ್ಟುಕೊಂಡಿರುವುದನ್ನು ಒಪ್ಪಿಕೊಂಡಿದ್ದ. ಹಾಗಾಗಿ ಜೂ. 23ರಂದು ಆರೋಪಿಯನ್ನು ಬಂಧಿಸಿ ಶುಕ್ರವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಟಿ ವಿರುದ್ಧ ಮಿಥುನ್ ಪಾಲಕರ ಕಿಡಿ
ಇದೇ ವೇಳೆ ಮಿಥುನ್ ವಿರುದ್ಧ ಅತ್ಯಾಚಾರ ಆರೋಪ ಮಾಡಿರುವ ನಟಿಯ ವಿರುದ್ಧ ಮಿಥುನ್ ಪೋಷಕರು ಕಿಡಿ ಕಾರಿದ್ದು, ಸಲುಗೆಯಿಂದಿರುವ ಫೋಟೋಗಳನ್ನು ತೆಗೆಸಿಕೊಂಡು ಕೊನೆಗೆ  ಅತ್ಯಾಚಾರ ಆರೋಪದ ಬೆದರಿಕೆ ಹಾಕಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾಳೆ ಎಂದು ಆರೋಪಿಸಿದ್ದಾರೆ. ಅಲ್ಲದೆ ಇದೇ ರೀತಿ ಹಲವರಿಗೆ ಈಕೆ ವಂಚನೆ ಮಾಡಿ ಹಣ ವಸೂಲಿ ಮಾಡಿದ್ದಾಳೆ. ಬೇರೆ  ಯುವಕರ ಜತೆ ಮಾತನಾಡಿರುವ ಮೊಬೈಲ್ ಸಂಭಾಷಣೆ ಬಹಿರಂಗವಾದ ಹಿನ್ನೆಲೆಯಲ್ಲಿ ಮದುವೆಗೆ ನಿರಾಕರಿಸಿರುವುದಾಗಿ ಮಿಥುನ್‌ನ ಪಾಲಕರು ಆರೋಪ ಮಾಡಿದ್ದಾರೆ.

ಪ್ರಸ್ತುತ ಉಭಯ ಪೋಷಕರೂ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT