ಸಾಂದರ್ಭಿಕ ಚಿತ್ರ 
ರಾಜ್ಯ

ಬಳಸಿದ ವಾಹನಗಳನ್ನು ಕೊಳ್ಳುವುದಕ್ಕೂ ಮುನ್ನ ಎಚ್ಚರ

ಬಳಸಿದ ವಾಹನಗಳನ್ನು ಕೊಳ್ಳುವುದಕ್ಕೂ ಮುನ್ನ ಗ್ರಾಹಕರು ಆನ್ ಲೈನ್ ನಲ್ಲಿ ಆ ವಾಹನಗಳ ಕುರಿತಂತೆ ಪರಿಶೀಲನೆ ನಡೆಸುವಂತೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ...

ಬೆಂಗಳೂರು: ಬಳಸಿದ ವಾಹನಗಳನ್ನು ಕೊಳ್ಳುವುದಕ್ಕೂ ಮುನ್ನ ಗ್ರಾಹಕರು ಆನ್ ಲೈನ್ ನಲ್ಲಿ ಆ ವಾಹನಗಳ ಕುರಿತಂತೆ ಪರಿಶೀಲನೆ ನಡೆಸುವಂತೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಸಂಚಾರಿ ನಿಯಮಗಳನ್ನು ಉಲ್ಲಂಘಿಸುವ ಪ್ರಕರಣಗಳು ಹೆಚ್ಚಾಗುತ್ತಿದೆ. ಬಳಸಿದ ವಾಹನಗಳು ಕಡಿಮೆ ಬೆಲೆಗೆ ಸಿಗುತ್ತಿದ್ದಂತೆ ಗ್ರಾಹಕರು ಆ ವಾಹನ ಹಿನ್ನೆಲೆ ಹಾಗೂ ಆ ವಾಹನದ ಮೇಲೆ ಪ್ರಕರಣಗಳೇನಾದರೂ ದಾಖಲಾಗಿದೆಯೇ ಎಂಬುದನ್ನು ಪರಿಶೀಲಿಸದೆಯೇ ಕೊಂಡುಕೊಳ್ಳುತ್ತಿದ್ದಾರೆ.

ಇದರಿಂದ ನಿಜವಾದ ಕಳ್ಳರು ತಪ್ಪಿಸಿಕೊಳ್ಳುತ್ತಿದ್ದು, ತಪ್ಪು ಮಾಡದವರು ಸಿಕ್ಕಿಹಾಕಿಕೊಳ್ಳುತ್ತಿರುವ ಪ್ರಸಂಗಗಳು ಹೆಚ್ಚಾಗುತ್ತಿವೆ. ಎಂ.ಎಸ್. ರಘುನಾಥ್ ಎಂಬ ವ್ಯಕ್ತಿ 39ಕ್ಕೂ ಹೆಚ್ಚು ಸಂಚಾರಿ ನಿಯಮ ಉಲ್ಲಂಘಿಸಿದ್ದು, ಇದೀಗ ವ್ಯಕ್ತಿ ಪೊಲೀಸರ ಅತಿಥಿಯಾಗಿದ್ದಾನೆ. ಹೀಗಾಗಿ ಅಧಿಕಾರಿಗಳು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದು, ಬಳಸಿದ ವಾಹನ ಕೊಳ್ಳುವುದಕ್ಕೂ ಮುನ್ನ ವಾಹನ ಸಂಖ್ಯೆಯನ್ನು ಆನ್ ಲೈನ್ ನಲ್ಲಿ ಹಾಕಿ ಅದರ ಪೂರ್ವಾಪರ ತಿಳಿದುಕೊಳ್ಳುವಂತೆ ತಿಳಿಸಿದ್ದಾರೆ.

ನಗರದಲ್ಲಿ ಸಂಚಾರಿ ನಿಯಮ ಉಲ್ಲಂಘಿಸುವವರ ಮೇಲೆ 179 ಕ್ಯಾಮೆರಾಗಳು ಕಣ್ಗಾವಲಿಸಿದೆ. ಇದರಿಂದ ಸಂಚಾರಿ ನಿಯಮ ಉಲ್ಲಂಘಿಸುವ ಕಳ್ಳರು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ವಾಹನ ಸವಾರರನ್ನು ಹಿಡಿಯಲು ಪೊಲೀಸರಿಗೆ ಬ್ಲೂಟೂತ್ ಪ್ರಿಂಟರ್ಸ್ ಜೊತೆಗೆ 350 ಬ್ಲ್ಯಾಕ್ ಬೆರಿ ಮೊಬೈಲ್ ಫೋನ್ ಗಳನ್ನು ನೀಡಲಾಗಿದೆ. ವಾಹನ ಸವಾರರು ಪ್ರತೀನಿತ್ಯ ನಮ್ಮ ವೆಬ್ ಸೈಟ್ ಗೆ ಭೇಟಿ ನೀಡಿದ ಸಂಚಾರಿ ನಿಯಮ ಉಲ್ಲಂಘನೆ ಬಗ್ಗೆ ಪರಿಶೀಲನೆ ನಡೆಸಬೇಕು. ಒಂದು ವೇಳೆ ನಿಯಮ ಉಲ್ಲಂಘಿಸಿದ್ದೇ ಆದರೆ, ದಂಡವನ್ನು ಕಟ್ಟಬೇಕು ಎಂದು ಹಿರಿಯ ಸಂಚಾರಿ ಪೊಲೀಸ್ ಅಧಿಕಾರಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT