ರಾಜ್ಯ

ವಿನಾಯಕ ಬಾಳಿಗ ಕೊಲೆ ಪ್ರಕರಣ: ನರೇಶ್ ಶೆಣೈ ಬಂಧನ

Manjula VN

ಮಂಗಳೂರು: ಮಾಹಿತಿ ಹಕ್ಕು ಕಾರ್ಯಕರ್ತ ವಿನಾಯಕ ಬಾಳಿಗ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಯುವ ಬ್ರಿಗೇಡ್ ಮುಖಂಡ ನರೇಶ್ ಶೆಣೈ ಅವರನ್ನು ಪೊಲೀಸರು ಭಾನುವಾರ ಬಂಧನಕ್ಕೊಳಪಡಿಸಿದ್ದಾರೆ.

ನಿನ್ನೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿರುವ ನಗರ ಪೊಲೀಸರ್ ಆಯುಕ್ತ ಎಂ.ಚಂದ್ರಶೇಖರ್ ಅವರು, ವಿನಾಯಕ ಬಾಳಿಕ ಕೊಲೆ ನಡೆದಿ ದಿನದಿಂದಲೂ ನರೇಶ್ ಶೆಣೈ ತಲೆಮರೆಸಿಕೊಂಡಿದ್ದ. ಕೊಲೆಯಾದ ದಿನದಿಂದಲೂ ನರೇಶ್ ಶೆಣೈ ಗಾಗಿ ಹುಡುಕಾಟ ಆರಂಭಿಸಲಾಗಿತ್ತು. ಇದರಂತೆ ಖಚಿ ಮಾಹಿತಿ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ್ದ ಸಿಸಿಬಿ ಇನ್ಸ್ ಪೆಕ್ಟರ್ ವೆಲೆಂಟೈನ್ ಡಿಸೋಜ ನೇತೃತ್ವದ ತಂಡ ಶೆಣೈ ಅವರನ್ನು ಬಂಧನಕ್ಕೊಳಪಡಿಸುವಲ್ಲಿ ಯಶಸ್ವಿಯಾಗಿದೆ ಎಂದು ಹೇಳಿದ್ದಾರೆ.

ಆರ್ ಟಿಐ ಕಾರ್ಯಕರ್ತನಾಗಿದ್ದ ವಿನಾಯಕ ಬಾಳಿಗ ಮೇಲೆ ಮಾ.21 ರಂದು ದುಷ್ಕರ್ಮಿಗಳು ಹಲ್ಲೆ ನಡೆಸಿ ಹತ್ಯೆ ಮಾಡಿದ್ದರು. ಈ ಸಂಬಂಧ ವಿನೀತ್ ಪೂಜಾರಿ, ನಿಶಾಂತ್ ದೇವಾಡಿಗ ಸೇರಿ ನಾಲ್ವರನ್ನು ಪೊಲೀಸರು ಈಗಾಗಲೇ ಬಂಧನಕ್ಕೊಳಪಡಿಸಿದ್ದಾರೆ. ಇದೀಗ ಪ್ರಕರಣ ಸಂಬಂಧ ಪ್ರಮುಖ ಆರೋಪಿ ಎಂದು ಹೇಳಲಾಗುತ್ತಿದ್ದ ನರೇಶ್ ಶೆಣೈ ಅವರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

SCROLL FOR NEXT