ಗಿರೀಶ್ ಮಟ್ಟೆಣ್ಣನವರ್ 
ರಾಜ್ಯ

ಶಾಸಕರ ಭವನದಲ್ಲಿ ಬಾಂಬ್ ಪ್ರಕರಣ: ಗಿರೀಶ್ ಮಟ್ಟೆಣ್ಣನವರ್ ಖುಲಾಸೆ

2003ರ ಶಾಸಕರ ಭವನದಲ್ಲಿ ನೆಲೆಸಿರುವ 'ಭ್ರಷ್ಟ ರಾಜಕಾರಣಿ'ಗಳನ್ನು ಬೆದರಿಸಲು ಬಾಂಬ್‌ ಇಟ್ಟ ಪ್ರಕರಣದ ಪ್ರಮುಖ ಆರೋಪಿ ಗಿರೀಶ್‌ ಮಟ್ಟಣ್ಣನವರ್‌ ಹಾಗೂ...

ಬೆಂಗಳೂರು: 2003ರ ಶಾಸಕರ ಭವನದಲ್ಲಿ ನೆಲೆಸಿರುವ 'ಭ್ರಷ್ಟ ರಾಜಕಾರಣಿ'ಗಳನ್ನು ಬೆದರಿಸಲು ಬಾಂಬ್‌ ಇಟ್ಟ ಪ್ರಕರಣದ ಪ್ರಮುಖ ಆರೋಪಿ ಗಿರೀಶ್‌ ಮಟ್ಟಣ್ಣನವರ್‌ ಹಾಗೂ ಇತರೆ ಇಬ್ಬರು ಆರೋಪಿಗಳನ್ನು ಸೋಮವಾರ ಕೋರ್ಟ್ ಖುಲಾಸೆಗೊಳಿಸಿ ತೀರ್ಪು ನೀಡಿದೆ.
ಸುಮಾರು 13 ವರ್ಷಗಳ ನಂತರ ಇಂದು ಪ್ರಕರಣದ ಅಂತಿಮ ತೀರ್ಪು ಪ್ರಕಟಿಸಿದ ನಗರದ 66ನೇ ಸಿವಿಲ್ ಹಾಗೂ ಸೆಷೆನ್ಸ್ ಕೋರ್ಟ್, ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ಮೊದಲ ಆರೋಪಿ ಗಿರೀಶ್ ಮಟ್ಟೆಣ್ಣನವರ್ ಹಾಗೂ ಇತರೆ ಇಬ್ಬರು ಆರೋಪಿಗಳನ್ನು ಖುಲಾಸೆಗೊಳಿಸಿದೆ.
ಶಾಸಕರ ಭವನದಲ್ಲಿ ಜಿಲೆಟಿನ್ ಕಡ್ಡಿ ಇಟ್ಟು ಹುಸಿ ಬಾಂಬ್ ಕರೆ ಮಾಡಿದ್ದ ಘಟನೆಯಲ್ಲಿ ಸಾಕ್ಷ್ಯಾಧಾರದ ಕೊರತೆಯ ಹಿನ್ನೆಲೆಯಲ್ಲಿ ಖುಲಾಸೆಗೊಳಿಸಿರುವುದಾಗಿ ನ್ಯಾಯಾಲಯ ಹೇಳಿದೆ.
ಶಾಸಕರ ಭವನದಲ್ಲಿ ನೆಲೆಸಿರುವ ಭ್ರಷ್ಟ ರಾಜಕಾರಣಿಗಳನ್ನು ಬೆದರಿಸುವ ನಿಟ್ಟಿನಲ್ಲಿ ಅಂದು (2003) ಎಸ್ ಐ ಆಗಿದ್ದ ಮಟ್ಟಣ್ಣನವರ್ ಬಾಂಬ್ ಇಟ್ಟಿರುವುದಾಗಿ ಹುಸಿ ಕರೆ ಮಾಡಿ ರಾಜ್ಯಾದ್ಯಂತ ಸುದ್ದಿಯಾಗಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

India-Japan Annual Summit 2025: ಟೋಕಿಯೋ ತಲುಪಿದ ಪ್ರಧಾನಿ ಮೋದಿ, ಅದ್ಧೂರಿ ಸ್ವಾಗತ

BJP, RSS ನಡುವೆ ಭಿನ್ನಾಭಿಪ್ರಾಯ ಇರಬಹುದು, ಆದರೆ ಸಂಘರ್ಷ ಇಲ್ಲ: ಮೋಹನ್ ಭಾಗವತ್

ಹೋಟೆಲ್‌ನಲ್ಲಿ ಮದ್ಯಪಾನಕ್ಕೆ ಅವಕಾಶ: ಪ್ರಶ್ನಿಸಿದ ಇನ್‌ಸ್ಪೆಕ್ಟರ್ ಮೇಲೆ ಹಲ್ಲೆ; ಕಾನ್‌ಸ್ಟೆಬಲ್ ಅಮಾನತು

Nation survey: ಇಂದೇ ಲೋಕಸಭೆ ಚುನಾವಣೆ ನಡೆದರೆ NDA ಎಷ್ಟು ಸ್ಥಾನ ಗೆಲ್ಲುತ್ತೆ ಗೊತ್ತಾ?

SCO summit: ಟ್ರಂಪ್ ಗೆ ಸೆಡ್ಡು; ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

SCROLL FOR NEXT