ಗಿರೀಶ್ ಮಟ್ಟೆಣ್ಣನವರ್ 
ರಾಜ್ಯ

ಶಾಸಕರ ಭವನದಲ್ಲಿ ಬಾಂಬ್ ಪ್ರಕರಣ: ಗಿರೀಶ್ ಮಟ್ಟೆಣ್ಣನವರ್ ಖುಲಾಸೆ

2003ರ ಶಾಸಕರ ಭವನದಲ್ಲಿ ನೆಲೆಸಿರುವ 'ಭ್ರಷ್ಟ ರಾಜಕಾರಣಿ'ಗಳನ್ನು ಬೆದರಿಸಲು ಬಾಂಬ್‌ ಇಟ್ಟ ಪ್ರಕರಣದ ಪ್ರಮುಖ ಆರೋಪಿ ಗಿರೀಶ್‌ ಮಟ್ಟಣ್ಣನವರ್‌ ಹಾಗೂ...

ಬೆಂಗಳೂರು: 2003ರ ಶಾಸಕರ ಭವನದಲ್ಲಿ ನೆಲೆಸಿರುವ 'ಭ್ರಷ್ಟ ರಾಜಕಾರಣಿ'ಗಳನ್ನು ಬೆದರಿಸಲು ಬಾಂಬ್‌ ಇಟ್ಟ ಪ್ರಕರಣದ ಪ್ರಮುಖ ಆರೋಪಿ ಗಿರೀಶ್‌ ಮಟ್ಟಣ್ಣನವರ್‌ ಹಾಗೂ ಇತರೆ ಇಬ್ಬರು ಆರೋಪಿಗಳನ್ನು ಸೋಮವಾರ ಕೋರ್ಟ್ ಖುಲಾಸೆಗೊಳಿಸಿ ತೀರ್ಪು ನೀಡಿದೆ.
ಸುಮಾರು 13 ವರ್ಷಗಳ ನಂತರ ಇಂದು ಪ್ರಕರಣದ ಅಂತಿಮ ತೀರ್ಪು ಪ್ರಕಟಿಸಿದ ನಗರದ 66ನೇ ಸಿವಿಲ್ ಹಾಗೂ ಸೆಷೆನ್ಸ್ ಕೋರ್ಟ್, ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ಮೊದಲ ಆರೋಪಿ ಗಿರೀಶ್ ಮಟ್ಟೆಣ್ಣನವರ್ ಹಾಗೂ ಇತರೆ ಇಬ್ಬರು ಆರೋಪಿಗಳನ್ನು ಖುಲಾಸೆಗೊಳಿಸಿದೆ.
ಶಾಸಕರ ಭವನದಲ್ಲಿ ಜಿಲೆಟಿನ್ ಕಡ್ಡಿ ಇಟ್ಟು ಹುಸಿ ಬಾಂಬ್ ಕರೆ ಮಾಡಿದ್ದ ಘಟನೆಯಲ್ಲಿ ಸಾಕ್ಷ್ಯಾಧಾರದ ಕೊರತೆಯ ಹಿನ್ನೆಲೆಯಲ್ಲಿ ಖುಲಾಸೆಗೊಳಿಸಿರುವುದಾಗಿ ನ್ಯಾಯಾಲಯ ಹೇಳಿದೆ.
ಶಾಸಕರ ಭವನದಲ್ಲಿ ನೆಲೆಸಿರುವ ಭ್ರಷ್ಟ ರಾಜಕಾರಣಿಗಳನ್ನು ಬೆದರಿಸುವ ನಿಟ್ಟಿನಲ್ಲಿ ಅಂದು (2003) ಎಸ್ ಐ ಆಗಿದ್ದ ಮಟ್ಟಣ್ಣನವರ್ ಬಾಂಬ್ ಇಟ್ಟಿರುವುದಾಗಿ ಹುಸಿ ಕರೆ ಮಾಡಿ ರಾಜ್ಯಾದ್ಯಂತ ಸುದ್ದಿಯಾಗಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಕ್ಷಣಾ, ಭದ್ರತಾ ಒಪ್ಪಂದ ಬಲವರ್ಧನೆ: ಭಾರತ- ಜರ್ಮನಿ ಮಹತ್ವದ ಕ್ರಮಗಳ ಘೋಷಣೆ!

ಸ್ವಾತಂತ್ರ್ಯ ಬಳಿಕ ಇದೇ ಮೊದಲು: ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!

'ಅಜ್ಮೀರ್' ದರ್ಗಾ ಶಿವ ದೇಗುಲವಾಗಿತ್ತು: ಕೋರ್ಟ್ ಮೆಟ್ಟಿಲೇರಿದ ವಿವಾದ!

'ವಿಬಿ-ಜಿ-ರಾಮ್' ಕಾಯ್ದೆ ವಿರುದ್ಧ ಕಾನೂನು ಸಮರ: ವಿಶೇಷ ಅಧಿವೇಶನ ಕರೆದು ಚರ್ಚೆ- ಸಿಎಂ ಸಿದ್ದರಾಮಯ್ಯ

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಇರಾನ್ ಸಂಸತ್ ಸ್ಪೀಕರ್ ಖಡಕ್ ವಾರ್ನಿಂಗ್!

SCROLL FOR NEXT