ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು : ಪ್ರತಿದಿನ ಸರಿಸುಮಾರು 60 ಡ್ರೈವಿಂಗ್ ಲೈಸೆನ್ಸ್ ಅಮಾನತು

ವರ್ಷದಿಂದ ವರ್ಷಕ್ಕೆ ಡ್ರೈವಿಂಗ್ ಲೈಸೆನ್ಸ್ ಅಮಾನತು ಪ್ರಮಾಣ ಹೆಚ್ಚುತ್ತಿದ್ದು, ಸಾವಿರಾರು ಚಾಲಕರು ತಮ್ಮ ಚಾಲನ ಪರವಾನಗಿ ಕಳೆದು ಕೊಳ್ಳುತ್ತಿದ್ದಾರೆ. 2012 ರಲ್ಲಿ 5,587 ಇದ್ದದ್ದು ...

ಬೆಂಗಳೂರು: ಮುಂದಿನ ಬಾರಿ ನಿವೇನಾದ್ರೂ ಸಂಚಾರ ನಿಯಮ ಉಲ್ಲಂಘನೆ, ವೇಗದ ಚಾಲನೆ, ಅಥವಾ ಕುಡಿದು ವಾಹನ ಚಲಾಯಿಸಿ ಪೊಲೀಸರ ಕೈಗೆ ಸಿಕ್ಕರೇ ನೀವು ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ, ಕ್ಷಮೆಯಂತೂ ಸಿಗೋದೆ ಇಲ್ಲ. ಜಾಮೀನಿಗಾಗಿ ತೆರಳಬೇಕಾದೀತು.

ವರ್ಷದಿಂದ ವರ್ಷಕ್ಕೆ ಡ್ರೈವಿಂಗ್ ಲೈಸೆನ್ಸ್ ಅಮಾನತು ಪ್ರಮಾಣ ಹೆಚ್ಚುತ್ತಿದ್ದು, ಸಾವಿರಾರು ಚಾಲಕರು ತಮ್ಮ ಚಾಲನ ಪರವಾನಗಿ ಕಳೆದು ಕೊಳ್ಳುತ್ತಿದ್ದಾರೆ. 2012 ರಲ್ಲಿ 5,587 ಇದ್ದದ್ದು 2015ರಲ್ಲಿ 21,758 ರಷ್ಟು ಏರಿಕೆಯಾಗಿದೆ, ಅಂದರೆ ಪ್ರತಿದಿನ ಸುಮಾರು 60 ಚಾಲಕರ ಪರವಾನಗಿ ರದ್ದಾಗುತ್ತಿದೆ ಎಂದು ಅಂಕಿ ಅಂಶಗಳು ತಿಳಿಸಿವೆ.

ಡ್ರೈವಿಂಗ್ ಲೈಸೆನ್ಸ್ ಅಮಾನತು ಗೊಳ್ಳುವವರ ಪೈಕಿ ಕುಡಿದು ವಾಹನ ಚಾಲನೆ ಮಾಡಿ ಸಿಕ್ಕಿ ಹಾಕಿಕೊಂಡವರೇ ಹೆಚ್ಚು, ಪದೇ ಪದೇ ಕುಡಿದು ಚಾಲನೆ ಮಾಡುವ ಡ್ರೈವರ್ ಗಳ ಲೈಸೆನ್ಸ್ ರದ್ದು ಪಡಿಸಲಾಗುತ್ತಿದೆ ಎಂದು ಹೆಚ್ಚುವರಿ ಸಂಚಾರಿ ಪೊಲೀಸ್ ಆಯುಕ್ತ ಆರ್ ಹಿತೇಂದ್ರ  ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.

ಇದೇ ವೇಳೆ ಬೆಂಗಳೂರಿನಲ್ಲಿ ಅಪಘಾತದ ಪ್ರಮಾಣ ಕೂಡ ಗಣನೀಯವಾಗಿ ಕಡಿಮೆಯಾಗಿರುವುದು ತಿಳಿದು ಬಂದಿದೆ.

ಚಾಲನಾ ಪರವಾನಗಿ ಅಮಾನತು ಆಗುತ್ತದೆ ಹಾಗೂ ಹಲವು ಕಾನೂನು ಕ್ರಮ ಎದುರಿಸಬೇಕು ಎಂಬ ಭಯದಲ್ಲಿ ಚಾಲಕರು ಕುಡಿದು ವಾಹನ ಚಾಲನೆ ಮಾಡುವುದನ್ನು ತಪ್ಪಿಸಿದ್ದಾರೆ  ಹೀಗಾಗಿ ಅಪಘಾತಗಳ ಸಂಖ್ಯೆ ಇಲಿಮುಖವಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಡ್ರಂಕ್ ಅಂಡ್ ಡ್ರೈವ್, ಡ್ರೈವಿಂಗ್ ಮಾಡುವಾಗ ಮೊಬೈಲ್ ಬಳಕೆ, ಸರಕು ಸಾಗಣೆ ಮಾಡುವಾಗ ಹೆಚ್ಚಿನ ಹಣದ ಬೇಡಿಕೆ, ಹಿಟ್ ಅಂಡ್ ರನ್ ಕೇಸ್, ಫುಟ್ ಪಾತ್ ನಲ್ಲಿ ಚಾಲನೆ, ಮತ್ತು ವೇಗವಾಗಿ ಚಾಲನೆ ಕಾರಣಗಳಿಗಾಗಿ ಡೈವಿಂಗ್ ಲೈಸೆನ್ಸ್ ಹೆಚ್ಚಿನ ಪ್ರಮಾಣದಲ್ಲಿ ಅಮಾನತುಗೊಂಡಿದೆ.

ಭಾರತೀಯ ಮೋಟಾರು ವಾಹನ ಕಾಯಿದೆ 19 ಹಾಗೂ 21ರ ನಿಯಮದಂತೆ 6 ತಿಂಗಳುಗಳ ಕಾಲ ವಾಹನ ಪರವಾನಗಿ ರದ್ದು ಪಡಿಸುವಂತೆ ಕೋರಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಶಿಫಾರಸ್ಸು ಮಾಡಿರುವುದಾಗಿ ಹಿರಿಯ ಸಂಚಾರಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT