ಮಹಾಮಸ್ತಕಾಭಿಷೇಕ (ಸಂಗ್ರಹ ಚಿತ್ರ) 
ರಾಜ್ಯ

ಅಂತರಾಷ್ಟ್ರೀಯ ಮಟ್ಟದಲ್ಲಿ ಮಹಾಮಸ್ತಕಾಭಿಷೇಕ 2018 ಅಚರಣೆಗೆ ಸರ್ಕಾರ ನಿರ್ಧಾರ

ಶ್ರವಣಬೆಳಗೊಳದಲ್ಲಿ 2018ರಲ್ಲಿ ನಡೆಯಲಿರುವ ಮಹಾಮಸ್ತಕಾಭಿಷೇಕ ಮಹೋತ್ಸವವನ್ನು ವಿಜೃಂಭಣೆಯಿಂದ ನಡೆಸಲು ಸರ್ಕಾರ ತೀರ್ಮಾನಿಸಿದ್ದು, ಮಹೋತ್ವಸಕ್ಕೆ ರು.575 ಕೋಟಿ ಅಂದಾಜು ಯೋಜನೆ ತಯಾರಿ ನಡೆಸಲು...

ಬೆಂಗಳೂರು: ಶ್ರವಣಬೆಳಗೊಳದಲ್ಲಿ 2018ರಲ್ಲಿ ನಡೆಯಲಿರುವ ಮಹಾಮಸ್ತಕಾಭಿಷೇಕ ಮಹೋತ್ಸವವನ್ನು ವಿಜೃಂಭಣೆಯಿಂದ ನಡೆಸಲು ಸರ್ಕಾರ ತೀರ್ಮಾನಿಸಿದ್ದು, ಮಹೋತ್ವಸಕ್ಕೆ ರು.575 ಕೋಟಿ ಅಂದಾಜು ಯೋಜನೆ ತಯಾರಿ ನಡೆಸಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ.

ಮಹಾಮಸ್ತಕಾಭಿಷೇಕ 2018 ಮಹೋತ್ಸವ ಕುರಿತಂತೆ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮಹಾಮಸ್ತಕಾಭಿಷೇಕ ಮಹೋತ್ಸವವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಆಚರಿಸಲು ಚಿಂತನೆ ನಡೆಸಲಾಗಿದ್ದು, ಇದಕ್ಕಾಗಿ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಕಲ್ಪಿಸಲು ರು. 575 ಕೋಟಿ ಹಣವನ್ನು ಮೀಸಲಿಡಲಾಗಿದೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿಯವರೊಂದಿಗಿನ ಸಭೆ ಬಳಿಕ ಮಾಹಿತಿ ನೀಡಿರುವ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಎ. ಮಂಜು ಅವರು, ಮಹೋತ್ಸವಕ್ಕೆ 40 ಲಕ್ಷಕ್ಕೂ ಹೆಚ್ಚು ಜನರು ಬರುವ ನಿರೀಕ್ಷೆ ಇದೆ. ಹೀಗಾಗಿ ರು. 400 ಕೋಟಿ ಹಣವನ್ನು ಮೂಲಭೂತ ಸೌಕರ್ಯಗಳಿಗೆ ಖರ್ಚು ಮಾಡಲಾಗುತ್ತದೆ. ರು. 22 ಕೋಟಿ ಹಣವನ್ನು ಪ್ರವಾಸೋದ್ಯಮ ಇಲಾಖೆ ಹಾಗೂ ಪ್ರಚಾರಕ್ಕಾಗಿ ವಿನಿಯೋಗ ಮಾಡಿಕೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

ಅಲ್ಲದೆ, ಪ್ರವಾಸಿಗರಿಗೆ ಸೌಕರ್ಯಗಳು ಒದಗಿಸುವ ಸಲುವಾಗಿ ಇತರೆ ರಾಜ್ಯಗಳಿಗೂ ಪತ್ರ ಬರೆಯಲು ತೀರ್ಮಾನಿಸಿದ್ದು, ಇತರೆ ರಾಜ್ಯಗಳಿಗೆ ಭೂಮಿ ಪಡೆಯಲು ಅವಕಾಶ ಒದಗಿಸಲಾಗುತ್ತದೆ ಎಂದಿದ್ದಾರೆ.

ಸುಮಾರು 1035 ವರ್ಷಗಳ ಹಿಂದೆ ಸ್ಥಾಪನೆಯಾದ ಗೊಮ್ಮಟೇಶ್ವರ ಮೂರ್ತಿಗೆ 12 ವರ್ಷಗಳಿಗೊಮ್ಮೆ ಮಹಾಮಸ್ತಕಾಭಿಷೇಕ ನಡೆಸಲಾಗುತ್ತಿದ್ದು, 2018ಕ್ಕೆ 89ನೇ ಮಹಾಮಸ್ತಕಾಭಿಷೇಕವನ್ನು ಜರುಗಿಸಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT