ಸಿಎಂ ಮಾಧ್ಯಮ ಸಲಹೆಗಾರ ದಿನೇಶ್ ಅಮಿನ್ ಮಟ್ಟು 
ರಾಜ್ಯ

ಯೋಧರ ದೇಶಪ್ರೇಮದ ಬಗ್ಗೆ ವಿವಾದಾತ್ಮಕ ಹೇಳಿಕೆ: ಸಿಎಂ ಮಾಧ್ಯಮ ಸಲಹೆಗಾರರ ವಿರುದ್ಧ ತನಿಖೆ

ಸೈನಿಕರ ದೇಶಪ್ರೇಮದ ಬಗ್ಗೆ ಅನುಚಿತ ಹೇಳಿಕೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರ ದಿನೇಶ್ ಅಮಿನ್ ಮಟ್ಟು ಅವರ ವಿರುದ್ಧ ತನಿಖೆ ನಡೆಸಲಾಗುವುದು

ಬೆಂಗಳೂರು: ಸೈನಿಕರ ದೇಶಪ್ರೇಮದ ಬಗ್ಗೆ ಅನುಚಿತ ಹೇಳಿಕೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರ ದಿನೇಶ್ ಅಮಿನ್ ಮಟ್ಟು ಅವರ ವಿರುದ್ಧ ತನಿಖೆ ನಡೆಸಲಾಗುವುದು ಸಚಿವ ಎಸ್ ಆರ್ ಪಾಟಿಲ್ ಭರವಸೆ ನೀಡಿದ್ದಾರೆ.
ಸೈನಿಕರು ಸೇನೆಗೆ ಸೇರುವುದು ದೇಶಪ್ರೇಮದಿಂದ ಅಲ್ಲ ಬಡತನದಿಂದಾಗಿ ಎಂದು ದಿನೇಶ್ ಅಮಿನ್ ಮಟ್ಟು ಕಾರ್ಯಕ್ರಮವೊಂದರಲ್ಲಿ ಅನುಚಿತ ಹೇಳಿಕೆ ನೀಡಿದ್ದರು. ಈ ಹೇಳಿಕೆ ವಿವಾದಕ್ಕೀಡಾಗಿ ಸಾಮಾಜಿಕ ಜಾಲತಾಣಗಳಲ್ಲಿ ದಿನೇಶ್ ಅಮಿನ್ ಮಟ್ಟು ಅವರ ಹೇಳಿಕೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. 

ವಿಧಾನ ಪರಿಷತ್ ನ ಬಿಜೆಪಿ ಸದಸ್ಯ  ಕ್ಯಾ. ಗಣೇಶ್ ಕಾರ್ಣೀಕ್  ಯೋಧರ ಬಗ್ಗೆ ದಿನೇಶ್ ಅಮಿನ್ ಮಟ್ಟು ಅವರ ವಿವಾದಾತ್ಮಕ ಹೇಳಿಕೆಯನ್ನು ಪ್ರಸ್ತಾಪಿಸುತ್ತಿದ್ದಂತೆಯೇ ಸಿಎಂ ಮಾಧ್ಯಮ ಸಲಹೆಗಾರರ ವಿರುದ್ಧ ಸದನದಲ್ಲಿ ಪ್ರತಿಪಕ್ಷ ಸದಸ್ಯರಿಂದ ಆಕ್ರೋಶ ವ್ಯಕ್ತವಾಯಿತು. ತಕ್ಷಣವೇ ಮುಖ್ಯಮಂತ್ರಿಗಳು ತಮ್ಮ ಸಲಹೆಗಾರರನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದರು. ಪ್ರತಿಪಕ್ಷ ಸದಸ್ಯರಿಗೆ ಉತ್ತರಿಸಿದ ವಿಧಾನಪರಿಷತ್ ಸಭಾ ನಾಯಕ ಎಸ್ ಆರ್ ಪಾಟೀಲ್, ಮುಖ್ಯಮಂತ್ರಿ ಅವರ ಮಾಧ್ಯಮ ಸಲಹೆಗಾರರ ಹೇಳಿಕೆ ಬಗ್ಗೆ ತನಿಖೆ ನಡೆಸಲು ಸರ್ಕಾರ ಸಿದ್ಧವಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT