ರಾಜ್ಯಪಾಲ ವಜುಬಾಯ್ ರೂಢಾಬಾಯ್ ವಾಲಾ 
ರಾಜ್ಯ

ಮೌಲ್ಯ ಕಳೆದುಕೊಳ್ಳುತ್ತಿರುವ ಗೌರವ ಡಾಕ್ಟರೇಟ್ ಪದವಿ: ರಾಜ್ಯಪಾಲರ ಅಸಮಾಧಾನ

ವಿಶ್ವವಿದ್ಯಾಲಯಗಳು ನೀಡುತ್ತಿರುವ ಗೌರವ ಡಾಕ್ಟರೇಟ್ ಗಳು ತನ್ನ ಮೌಲ್ಯ ಕಳೆದುಕೊಳ್ಳುತ್ತಿವೆ. ಸಿಕ್ಕಸಿಕ್ಕವರಿಗೆ ಬೇಕಾಬಿಟ್ಟಿಯಾಗಿ...

ಬೆಂಗಳೂರು: ವಿಶ್ವವಿದ್ಯಾಲಯಗಳು ನೀಡುತ್ತಿರುವ ಗೌರವ ಡಾಕ್ಟರೇಟ್ ಗಳು ತನ್ನ ಮೌಲ್ಯ ಕಳೆದುಕೊಳ್ಳುತ್ತಿವೆ. ಸಿಕ್ಕಸಿಕ್ಕವರಿಗೆ ಬೇಕಾಬಿಟ್ಟಿಯಾಗಿ ಪದವಿ ಪ್ರದಾನ ಮಾಡಲಾಗುತ್ತಿವೆ.  ಎಂದು ರಾಜ್ಯಪಾಲ ವಜೂಭಾಯಿ ರೂಢಾಬಾಯಿ ವಾಲಾ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹಣ, ಜಾತಿ, ರಾಜಕೀಯ, ಪ್ರಭಾವಗಳಿಂದ ಲಾಬಿ ನಡೆಸಿ ಗೌರವ ಡಾಕ್ಟರೇಟ್ ಪಡೆದುಕೊಳ್ಳುತ್ತಾರೆ. ಇದಕ್ಕೆ ವಿಶ್ವವಿದ್ಯಾಲಯವೂ ಕಾರಣವಾಗುತ್ತದೆ ಎಂದರು.
  ವಿಶ್ವ ವಿದ್ಯಾಲಯಗಳು ಗೌರವ ಡಾಕ್ಟರೇಟ್ ಪ್ರದಾನ ಮಾಡುವಾಗ ಯಾವ ಮಾನದಂಡ ಅನುಸರಿಸುತ್ತೀರಿ? ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ಗಣ್ಯರಿಗೆ ಡಾಕ್ಟರೇಟ್ ಪ್ರದಾನ ಮಾಡಿದ್ದೀರಿ. ಅವರ ಸೇವೆಯಿಂದ ಸಮಾಜಕ್ಕೆ ಏನು ಉಪಯೋಗ, ಯಾವ ಆಧಾರದಲ್ಲಿ ನೀವು ಅವರಿಗೆ ಡಾಕ್ಟರೇಟ್ ನೀಡಿದ್ದೀರಿ ಎಂದು ರಾಜ್ಯಪಾಲರು ತರಾಟೆಗೆ ತೆಗೆದುಕೊಂಡರು.

ಇದೇ ಸಂದರ್ಭದಲ್ಲಿ ಅವರು ಒಬ್ಬ ವ್ಯಕ್ತಿಗೆ ಗೌರವ ಡಾಕ್ಟರೇಟ್ ನೀಡಲು 8 ಅಂಶಗಳ ಮಾನದಂಡವನ್ನು ಸೂಚಿಸಿದ್ದಾರೆ. ಅವುಗಳೆಂದರೆ ವಿವಿ ಸಿಂಡಿಕೇಟ್ ನಿಂದ ಹೆಸರುಗಳ ಶಿಫಾರಸು ಆಗಬೇಕು, ರಾಜ್ಯಪಾಲರಿಂದಲೇ ನೂತನ ಪರಿಶೀಲನಾ ಸಮಿತಿ ರಚಿಸಬೇಕು. ಡಾಕ್ಟರೇಟ್ ಪಟ್ಟಿ ಅಂತಿಮಗೊಳಿಸಲು ಪರಿಶೀಲನಾ ಸಮಿತಿ ನೇಮಕ ಮಾಡಬೇಕು. ಮೂರಕ್ಕಿಂತ ಹೆಚ್ಚು ಸಲ ಗಣ್ಯರ ಶಿಫಾರಸ್ಸು ಮಾಡಬಾರದು ಹಾಗೂ ಘಟಿಕೋತ್ಸವಕ್ಕೆ 45 ದಿನ ಬಾಕಿ ಇರುವಾಗಲೇ ಪಟ್ಟಿ ಅಂತಿಮಗೊಳಿಸಿಯಾಗಬೇಕೆಂಬುದೇ ರಾಜ್ಯಪಾಲರ ನಿಯಮವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT