ನ್ಯಾ.ಸುಭಾಷ್ ಬಿ ಅಡಿ 
ರಾಜ್ಯ

ಉಪಲೋಕಾಯುಕ್ತ ಅಡಿ ಅಧಿಕಾರ ಕುರಿತು ಸ್ಪೀಕರ್ ಪ್ರಶ್ನಿಸುವಂತಿಲ್ಲ: ರಿಜಿಸ್ಟ್ರಾರ್

ಉಪ ಲೋಕಾಯುಕ್ತ ನ್ಯಾ.ಸುಭಾಷ್ ಬಿ.ಅಡಿ ಕರ್ತವ್ಯ ನಿರ್ವಹಿಸುವಂತಿಲ್ಲ ಎಂದು ಸೂಚಿಸುವ ಅಧಿಕಾರ ಸ್ಪೀಕರ್ ಕಾಗೋಡು...

ಬೆಂಗಳೂರು: ಉಪ ಲೋಕಾಯುಕ್ತ ನ್ಯಾ.ಸುಭಾಷ್ ಬಿ.ಅಡಿ ಕರ್ತವ್ಯ ನಿರ್ವಹಿಸುವಂತಿಲ್ಲ ಎಂದು ಸೂಚಿಸುವ ಅಧಿಕಾರ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ಇಲ್ಲ ಎಂದು ಲೋಕಾಯುಕ್ತ ರಿಜಿಸ್ಟ್ರಾರ್ ರವರು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ (ಡಿಪಿಎಆರ್‌) ಪತ್ರ ಬರೆದಿದ್ದಾರೆ.
ಲೋಕಾಯುಕ್ತ ಕಾಯ್ದೆ ಸೆಕ್ಷನ್ 6(14) ಪ್ರಕಾರ ಅಡಿ ಅವರು ರರ್ತ್ವ್ಯ ನಿರ್ವಹಿಸಲು ಅವಕಾಶ ಇಲ್ಲ. ಈ ಸಕ್ಷೆನ್ ಅನ್ನು ಉಲ್ಲೇಖಿಸಿ ಲೋಕಾಯುಕ್ತ ರಿಜಿಸ್ಟ್ರಾರ್ ಗೆ ಮತ್ತೊಮ್ಮೆ ಪತ್ರ ಬರೆಯುವಂತೆ ಡಿಪಿಎಆರ್ ಗೆ ಸೂಚಿಸಲಾಗುವುದು ಎಂದು ಪತ್ರಕರ್ತರಿಗೆ ತಿಳಿಸಿದ್ದರು.
ಆದರೆ, ಇದಕ್ಕೆ ಪ್ರತಿಕ್ರಯಿಸಿರುವ ಲೋಕಾಯುಕ್ತ ರಿಜಿಸ್ಟ್ರಾರ್ ಆರ್ ಎಸ್ ಪಾಟಿಲ್(ಇನ್ ಚಾರ್ಜ್) ಅವರು, ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ನ್ಯಾ.ಅಡಿ ಅವರು ಕಚೇರಿಗೆ ಹಾಜರಾಗಬಹುದು. ಅವರ ತಪ್ಪು ಸಾಬೀತಾಗೋವರೆಗೂ ಮತ್ತು ನಂತರ ವಿಧಾನಸಭೆ ಅಥವಾ ಸಂಸತ್ತಿನಲ್ಲಿ ಅವರನ್ನು ಪದಚ್ಯುತಿಗೊಳಿಸುವವರೆಗೂ ಅವರು ಕರ್ತವ್ಯ ನಿರ್ವಹಿಸಬಹುದು. ಹಾಗಾಗಿ, ನಾನು ಉಪ ಲೋಕಾಯುಕ್ತರನ್ನು ಕರ್ತವ್ಯ ನಿರ್ವಹಿಸಬೇಡಿ ಎಂದು ಹೇಳಲು ಸಾಧ್ಯವಿಲ್ಲ ಎಂದು ಡಿಪಿಎಆರ್ ಗೆ ತಿಳಿಸಿದ್ದಾರೆ. 
ಉಪ ಲೋಕುಯುಕ್ತ ನ್ಯಾ.ಸುಭಾಷ್ ಅಡಿ ವಿರುದ್ಧ ಹಲವು ಆರೋಪಗಳು ಇರುವುದರಿಂದ ಅವರ ಪದಚ್ಯುತಿ ಮಾಡಬೇಕು ಎಂದು ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ವಿಧಾನಸಭೆಯಲ್ಲಿ ಪ್ರಸ್ತಾಪ ಮಂಡಿಸಿದ್ದರು. ಈ ಕುರಿತು ನಿರ್ಣಯ ಕೈಗೊಳ್ಳಲಾಗಿತ್ತು. ಇದನ್ನು ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರು ಹೈಕೋರ್ಟ್ ನ್ಯಾಯಾಮೂರ್ತಿಗಳಿಗೆ ಕಳುಹಿಸಿದ್ದರು. 
ಲೋಕಾಯುಕ್ತ ಕಾಯ್ದೆ ಪ್ರಕಾರ, ಹೈಕೋರ್ಟ್ ಮುಖ್ಯ ನ್ಯಾಯಾಮೂರ್ತಿಗಳಿಗೆ ಪದಚ್ಯುತಿ ನಿರ್ಣಯ ಸಲ್ಲಿಕೆಯಾದ ನಂತರ ಹುದ್ದೆಯಲ್ಲಿ ಕಾರ್ಯ ನಿರ್ವಹಿಸುವಂತಿಲ್ಲ ಎಂದು ಸರ್ಕಾರದ ವಾದ ಮಾಡುತ್ತಿದೆ. ಆದರೆ, ನ್ಯಾ.ಸುಭಾಷ್ ಬಿ ಅಡಿ ಅವರು, ಸುಪ್ರೀಂಕೋರ್ಟ್ ತೀರ್ಪೊಂದರ ಪ್ರಕಾರ ಪ್ರಸ್ತಾಪ ಕುರಿತು ತೀರ್ಮಾನವಾಗುವವರೆಗೂ ಕಾರ್ಯನಿರ್ವಹಿಸಬಹುದು ಎಂದು ವಾದಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT