ಪ್ರತಿಭಟನಾನಿರತ ಕಾರ್ಯಕರ್ತರು 
ರಾಜ್ಯ

ಮೈಸೂರಿನಲ್ಲಿ ಉದ್ವಿಗ್ನ ವಾತಾವರಣ: ಕಲ್ಲು ತೂರಾಟ, 3 ಬಸ್ ಜಖಂ

ಶ್ರೀ ರಾಮಸೇನೆ ಕಾರ್ಯಕರ್ತ ರಾಜು ಹತ್ಯೆ ಖಂಡಿಸಿ ನಗರದಲ್ಲಿ ಇದೀಗ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಪ್ರತಿಭಟನಾಕಾರರ ಆಕ್ರೋಶಕ್ಕೆ...

ಮೈಸೂರು: ಶ್ರೀ ರಾಮಸೇನೆ ಕಾರ್ಯಕರ್ತ ರಾಜು ಹತ್ಯೆ ಖಂಡಿಸಿ ನಗರದಲ್ಲಿ ಇದೀಗ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಪ್ರತಿಭಟನಾಕಾರರ ಆಕ್ರೋಶಕ್ಕೆ 3 ಬಸ್ ಗಳು ಜಖಂಗೊಂಡಿರುವುದಾಗಿ ಸೋಮವಾರ ತಿಳಿದುಬಂದಿದೆ.

ನಿನ್ನೆ ಶ್ರೀ ರಾಮಸೇನೆ ಕಾರ್ಯಕರ್ತ ರಾಜು ಎಂಬುವವರನ್ನು ದುಷ್ಕರ್ಮಿಗಳ ಗುಂಪೊಂದು ಬರ್ಬರವಾಗಿ ಹತ್ಯೆ ಮಾಡಿತ್ತು. ಈ ಹತ್ಯೆಯನ್ನು ಬಿಜೆಪಿ ಖಂಡಿಸಿತ್ತು. ಅಲ್ಲದೆ ಬಂದ್ ಗೆ ಕರೆ ನೀಡಿತ್ತು. ಇದೀಗ ಮೈಸೂರಿನಾದ್ಯಂತ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಮೈಸೂರು ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಬಸ್ ಗಳ ಮೇಲೆ ಕಲ್ಲೂ ತೂರಾಟ ನಡೆದಿದೆ. ಇದರ ಪರಿಣಾಮ 3 ಬಸ್ ಗಳು ಜಖಂ ಗೊಂಡಿವೆ ಎಂದು ಹೇಳಲಾಗುತ್ತಿದೆ.

ಬಂದ್ ಹಿನ್ನೆಲೆಯಲ್ಲಿ ಪೊಲೀಸರು ನಗರದಾದ್ಯಂತ ಬೆಳಿಗ್ಗೆ 6ರಿಂದ ಮಧ್ಯರಾತ್ರಿ 12ರವರೆಗೆ ನಿಷೇಧಾಜ್ಞೆಯನ್ನು ಜಾರಿ ಮಾಡಿದ್ದರು. ಇದರಂತೆ ಪ್ರತಿಭಟನೆ, ಸಭೆ, ಮೆರವಣಿಗೆ ಹಾಗೂ ಧರಣಿಯನ್ನು ನಡೆಸುವಂತಿಲ್ಲ ಎಂದು ಹೇಳಲಾಗಿತ್ತು. ಆದೇಶದ ನಡುವೆಯೂ ಕಾರ್ಯಕರ್ತರು ಎಲ್ಲಡೆ ಪ್ರತಿಭಟನೆ ನಡೆಸುತ್ತಿದೆ. ಅಲ್ಲದೆ ಬ್ಯಾರಿಕೇಡ್ ಗಳನ್ನು ತಳ್ಳಿ ರಾಜು ಶವಾಗಾರದತ್ತ ಕಾರ್ಯಕರ್ತರು ನುಗ್ಗಿದ್ದಾರೆಂದು ತಿಳಿದುಬಂದಿದೆ. ಇದರಂತೆ ಮೈಸೂರಿನಾದ್ಯಂತ ಭಯಭೀತಿ ವಾತಾವರಣ ನಿರ್ಮಾಣವಾಗಿದ್ದು, ಉದ್ವಿಗ್ನ ವಾತಾರಣ ನಿರ್ಮಾಣವಾಗಿದೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

GBA ಆಯ್ತು.. ಈಗ ಗ್ರೇಟರ್ ಮೈಸೂರು ಸಿಟಿ ಕಾರ್ಪೋರೇಷನ್ ಗೆ ಸಂಪುಟ ಅನುಮೋದನೆ!

'ಮಾತು' ಜಗತ್ತಿಗೆ ಉತ್ತಮವಾಗದ ಹೊರತು ಅದು ಶಕ್ತಿಯಲ್ಲ; ಡಿಕೆಶಿ ಪೋಸ್ಟ್​​ಗೆ CM ಸಿದ್ದರಾಮಯ್ಯ ಕೌಂಟರ್

ಸಂಸತ್ತಿನಲ್ಲಿ 'ವಂದೇ ಮಾತರಂ', 'ಜೈ ಹಿಂದ್' ಘೋಷಣೆಗಳಿಗೆ ಆಕ್ಷೇಪಣೆ ಯಾಕೆ?: ಬಿಜೆಪಿ ಪ್ರಶ್ನಿಸಿದ ಕಾಂಗ್ರೆಸ್

ಯುದ್ಧ ಸಾರಿದ ನ್ಯೂಜಿಲೆಂಡ್, 25 ಲಕ್ಷ Stone Cold Killers ನಿರ್ಮೂಲನೆ ಮಾಡುವ ಶಪಥ!

ಸಿದ್ದರಾಮಯ್ಯ ಹೈಕಮಾಂಡ್ ಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ: CM ಪುತ್ರ ಯತೀಂದ್ರ ಸ್ಫೋಟಕ ಹೇಳಿಕೆ; Video

SCROLL FOR NEXT