ವೈರಮುಡಿ ಉತ್ಸವ 
ರಾಜ್ಯ

ಮಾ. 19ರಂದು ಮೇಲುಕೋಟೆ ಚೆಲುವನಾರಾಯಣ ಸ್ವಾಮಿ ವೈರಮುಡಿ ಉತ್ಸವ: ನಡೆದಿದೆ ಸಕಲ ಸಿದ್ಧತೆ

ಮೇಲುಕೋಟೆ ಶ್ರೀ ಚೆಲುವ ನಾರಾಯಣಸ್ವಾಮಿ ವೈರಮುಡಿ ಕಿರೀಟ ಧಾರಣೆ ಮಹೋತ್ಸವ ಮಾ.19ರಂದು ನಡೆಯಲಿದ್ದು, ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ...

ಮಂಡ್ಯ: ಮೇಲುಕೋಟೆ ಶ್ರೀ ಚೆಲುವ ನಾರಾಯಣಸ್ವಾಮಿ ವೈರಮುಡಿ ಕಿರೀಟ ಧಾರಣೆ ಮಹೋತ್ಸವ ಮಾ.19ರಂದು ನಡೆಯಲಿದ್ದು, ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.

ಮಂಡ್ಯ ಜಿಲ್ಲಾ ಖಜಾನೆಯಲ್ಲಿ ವಜ್ರ ಖಚಿತ ವಾದ ವೈರಮುಡಿ-ರಾಜಮುಡಿ ಕಿರೀಟಗಳನ್ನು ಮೇಲುಕೋಟೆಗೆ ತಂದು ಜಿಲ್ಲಾಧಿಕಾರಿಗಳು ಮತ್ತು ಸ್ಥಾನಿಕರು, ಅರ್ಚಕರ ಸಮಕ್ಷಮ ಪರಿಶೀಲಿಸಿದ ನಂತರ ವೈರಮುಡಿ ಕಿರೀಟವನ್ನು ರಾತ್ರಿ 8 ಗಂಟೆಗೆ ಗರುಡಾರೂಢನಾದ ಚೆಲುವನಾರಾಯಣನಿಗೆ ತೊಡಿಸಲಾಗುತ್ತದೆ.

ಬೆಳಗಿನ 4 ಗಂಟೆಯವರೆಗೆ ಉತ್ಸವ ನೆರವೇರಿಸಲಾಗುತ್ತದೆ. ವೈರಮುಡಿ ಉತ್ಸವ ನಂತರ ರಾಜಮುಡಿ ಉತ್ಸವ ಸಹ ನೆರವೇರಲಿದೆ.

ವೈರಮುಡಿ ಜಾತ್ರಾ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಿದ್ದು  ಮಾ-26ರವರೆಗೆ ನಡೆಯಲಿದೆ. ಜಾತ್ರಾ ಮಹೋತ್ಸವದ ಏಳನೇಯ ದಿನವಾದ ಮಾ.22ರ ಬೆಳಗ್ಗೆ ಮಹಾರಥೋತ್ಸವ  ಅದ್ದೂರಿಯಾಗಿ ನಡೆಯಲಿದೆ. ರಾತ್ರಿ  ರಾಮಾನುಜಾಚಾರ್ಯರ ಕಾಲದಿಂದ ನಡೆದುಕೊಂಡು ಬಂದ ಪದ್ಧತಿಯಂತೆ ಹರಿಜನರ ಬಂಗಾರದ ಪಲ್ಲಕ್ಕಿ ಉತ್ಸವ ನೆರವೇರಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT