ಡಿ.ಕೆ.ಶಿವಕುಮಾರ್ ಮತ್ತು ಟಿ.ಜೆ ಅಬ್ರಹಾಂ 
ರಾಜ್ಯ

ಬೆನ್ನಿಗಾನಹಳ್ಳಿ ಡಿನೋಟಿಫೈ ಪ್ರಕರಣ: ಡಿಕೆಶಿ ವಿರುದ್ಧ ಸುಪ್ರೀಂನಲ್ಲಿ ವಿಶೇಷ ಮೇಲ್ಮನವಿ

ಚಿವ ಡಿ.ಕೆ ಶಿವಕುಮಾರ್ ವಿರುದ್ಧದ ಬೆನ್ನಿಗಾನಹಳ್ಳಿ ಡಿನೋಟಿಫೈ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್ ಗೆ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಕೆಯಾಗಿದೆ....

ಬೆಂಗಳೂರು : ಕಾಂಗ್ರೆಸ್ ಮುಖಂಡ ಹಾಗೂ ಸಚಿವ ಡಿ.ಕೆ ಶಿವಕುಮಾರ್ ವಿರುದ್ಧದ ಬೆನ್ನಿಗಾನಹಳ್ಳಿ ಡಿನೋಟಿಫೈ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್ ಗೆ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಕೆಯಾಗಿದೆ.

ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಅವರು ಸುಪ್ರೀಂಕೋರ್ಟ್‌ನಲ್ಲಿ ಬುಧವಾರ ಮೇಲ್ಮನವಿ ಸಲ್ಲಿಸಿದ್ದು, ಪ್ರಕರಣವನ್ನು ಮರು ವಿಚಾರಣೆಗೆ ಒಳಪಡಿಸುವಂತೆ ಕೋರಿದ್ದಾರೆ. ಹೈಕೋರ್ಟ್ ತಡೆಯಾಜ್ಞೆ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್‌ನ ಪೀಠವು, ಹೈಕೋರ್ಟ್‌ನಲ್ಲಿಯೇ ಇತ್ಯರ್ಥಪಡಿಸಿಕೊಳ್ಳುವಂತೆ ಸೂಚಿಸಿತ್ತು. ನ್ಯಾ. ಆನಂದಬೈರಾರೆಡ್ಡಿ ಅವರಿದ್ದ ನ್ಯಾಯಪೀಠ ಕಳೆದ ಡಿ.18ರಂದು ಪ್ರಕರಣವನ್ನು ರದ್ದುಗೊಳಿಸಿ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಅಬ್ರಹಾಂ ಮೇಲ್ಮನವಿ ಸಲ್ಲಿಸಿದ್ದಾರೆ.

ಬಿ.ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಶಾಸಕರಾಗಿದ್ದ ಡಿ.ಕೆ. ಶಿವಕುಮಾರ್ ಅವರು ಇಂದಿರಾನಗರ ಸಮೀಪದ ಬೆನ್ನಿಗಾನಹಳ್ಳಿಯ ನಾಲ್ಕೂವರೆ ಎಕರೆ ಭೂಮಿಯನ್ನು ಅಕ್ರಮವಾಗಿ ಡಿನೋಟಿಫೈ ಮಾಡಿಸಿಕೊಂಡು, ಬೇರೆಯವರಿಗೆ ಮಾರಿದ್ದಾರೆ ಎಂದು ಟಿ.ಜೆ. ಅಬ್ರಹಾಂ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. ಪ್ರಕರ ಸಂಬಂಧ ಲೋಕಾಯುಕ್ತ ಅಧಿಕಾರಿಗಳು ಬಿ ರಿಪೋರ್ಟ್ ಹಾಕಿದ್ದನ್ನು ಪ್ರಶ್ನಿಸಿ, ಅಬ್ರಹಾಂ ಹೈಕೋರ್ಟ್ ಮೊರೆ ಹೋಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT