ಹತ್ಯೆಯಾದ ಬಿಜೆಪಿ ಕಾರ್ಯಕರ್ತ ರಾಜು 
ರಾಜ್ಯ

ಬಿಜೆಪಿ ಕಾರ್ಯಕರ್ತ ರಾಜು ಕೊಲೆ ಪ್ರಕರಣ: ಹಂತಕರ ಸುಳಿವು ನೀಡಿದವರಿಗೆ ಬಹುಮಾನ

ಸಾಕಷ್ಟು ಗಲಭೆ ಹಾಗೂ ಸುದ್ದಿಗೆ ಗ್ರಾಸವಾಗಿದ್ದ ಬಿಜೆಪಿ ಕಾರ್ಯಕರ್ತ ರಾಜು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಷ್ಟೇ ತನಿಖೆ ನಡೆಸಿದರೂ ಈವರೆಗೂ ಯಾವುದೇ ಸುಳಿವು...

ಮೈಸೂರು: ಸಾಕಷ್ಟು ಗಲಭೆ ಹಾಗೂ ಸುದ್ದಿಗೆ ಗ್ರಾಸವಾಗಿದ್ದ ಬಿಜೆಪಿ ಕಾರ್ಯಕರ್ತ ರಾಜು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಷ್ಟೇ ತನಿಖೆ ನಡೆಸಿದರೂ ಈವರೆಗೂ ಯಾವುದೇ ಸುಳಿವು ದೊರಕದ ಹಿನ್ನೆಲೆಯಲ್ಲಿ ಇದೀಗ ಹಂತಕರ ಸುಳಿವು ನೀಡಿದವರಿಗೆ ಸೂಕ್ತ ಬಹುಮಾನ ನೀಡುವುದಾಗಿ ಪೊಲೀಸ್ ಇಲಾಖೆ ಶುಕ್ರವಾರ ಘೋಷಣೆ ಮಾಡಿದೆ.

ರಾಜು ಹತ್ಯೆ ನಡೆದ 6 ದಿನಗಳು ಕಳೆದರೂ ಈ ವರೆಗೂ ಯಾವುದೇ ಸುಳಿವುಗಳು ಪತ್ತೆಯಾಗಿಲ್ಲ. ಶಂಕಿತ ವ್ಯಕ್ತಿಗಳನ್ನು ಬಂಧಿಸಿ ವಿಚಾರಣೆ ನಡೆಸಿದ್ದರು ಸಹಿತ ಹತ್ಯೆಯ ರಹಸ್ಯ ಭೇದಿಸಲು ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಹಂತಕರ ಸುಳಿವು ನೀಡಿದವರಿಗೆ ಬಹುಮಾನ ನೀಡುವುದಾಗಿ ಘೋಷಣೆ ಮಾಡಿದೆ ಎಂದು ತಿಳಿದುಬಂದಿದೆ.

ರಾಜು ಹತ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ಈಗಾಗಲೇ ಮಾ.22 ರಂದು ಪ್ರಕರಣಕ್ಕೆ ಸಂಬಂಧಿಸಿ ವಿಧಾನಸೌಧವನ್ನು ಮುತ್ತಿಗೆ ಹಾಕಲು ನಿರ್ಧಾರ ಕೈಗೊಂಡಿದೆ. ಹೀಗಾಗಿ ಪ್ರಕರಣವೀಗ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದ್ದು, ಹಂತಕರನ್ನು ಹಿಡಿಯಲು ಇಲಾಖೆ ಸಾಕಷ್ಟು ಹರಸಾಹಸ ಪಡುತ್ತಿದೆ ಎನ್ನಲಾಗಿದೆ.

ಇಲಾಖೆ ನೀಡಿರುವ ಮಾಹಿತಿ ಪ್ರಕಾರ ಸಾರ್ವಜನಿಕರು ಆರೋಪಿಗಳ ಕುರಿತಂತೆ ಅಥವಾ ಅವರು ಬಳಸಿದೆ ವಾಹನಗಳ ಬಗ್ಗೆ ಮಾಹಿತಿ ನೀಡಬಹುದಾಗಿದೆ. ಸಾರ್ವಜನಿಕರು ನೀಡಿದ ಮಾಹಿತಿಯನ್ನು ಗೌಪ್ಯವಾಗಿ ಇಡಲಾಗುವುದು ಎಂದು ಹೇಳಿರುವ ಪೊಲೀಸರು, ಮಾಹಿತಿ ನೀಡಿದ ವ್ಯಕ್ತಿಯ ಸುಳಿವನ್ನು ಎಲ್ಲಿಯೂ ಬಿಟ್ಟುಕೊಡುವುದಿಲ್ಲ ಎಂದು ತಿಳಿಸಿದೆ.

ಮಾಹಿತಿ ನೀಡುವವರು ಪೊಲೀಸ್ ಅಧಿಕಾರಿಯನ್ನು ಖುದ್ದಾಗಿ ಭೇಟಿಯಾಗಿ ಅಥವಾ 948080 2201 ಮೊಬೈಲ್ ಸಂಖ್ಯೆ ಮೂಲಕ ಸಂಪರ್ಕಿಸಬಹುದು ಅಲ್ಲದೆ, 9481100100 ಸಂಖ್ಯೆಗೆ ಎಸ್ಎಂಎಸ್ ಅಥವಾ ವಾಟ್ಸ್ ಅಪ್ ಮೂಲಕ ಸಂದೇಶ ಕಳುಹಿಸಬಹುದಾಗಿದೆ. ಮಾಹಿತಿ ನೀಡಿದವರಿಗೆ ಇಲಾಖೆಯ ವತಿಯಿಂದ ಸೂಕ್ತ ರೀತಿಯ ಬಹುಮಾನವನ್ನು ನೀಡಲಾಗುತ್ತದೆ ಎಂದು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

Maharashtra: ಶಾಲಾ ಹಾಸ್ಟೆಲ್‌ನಲ್ಲಿ ಭೀಕರ ದುರಂತ: ಮಲಗಿದ್ದ 6 ಬಾಲಕಿಯರಿಗೆ ಹಾವು ಕಡಿತ, ಮೂವರ ಸಾವು!

ಶಾಲೆಗಳಿಗೆ ಯೂಟ್ಯೂಬರ್‌ಗಳು, ಸೋಷಿಯಲ್ ಮೀಡಿಯಾ ಮಂದಿಗೆ ನೋ ಎಂಟ್ರಿ: ಉತ್ತರ ಪ್ರದೇಶ ಸರ್ಕಾರದ ಖಡಕ್ ಆದೇಶ

'ಬಿಜೆಪಿಗೆ ಖುಷಿ ಕೊಡುವ ಹೇಳಿಕೆ ನೀಡಬೇಡಿ': Rahul Gandhi ಕುರಿತ ಕಾಂಗ್ರೆಸ್ ಸಂಸದ ಶಶಿತರೂರ್ ಹೇಳಿಕೆಗೆ KC ವೇಣುಗೋಪಾಲ್ ಖಡಕ್ ವಾರ್ನಿಂಗ್