ಸಾಂದರ್ಭಿಕ ಚಿತ್ರ 
ರಾಜ್ಯ

ಹರಪ್ಪನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: 5 ಬಂಧನ

ಹರಪ್ಪನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದೀಗ ಐವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ...

ದಾವಣಗೆರೆ: ಹರಪ್ಪನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದೀಗ ಐವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ.

ಅತ್ಯಾಚಾರಕ್ಕೊಳಗಾದ ಸಂತ್ರಸ್ತ ಮಹಿಳೆ ಕೂಡ್ಲಗಿ ತಾಲೂಕಿನ ಹರಳು ಗ್ರಾಮದವರಾಗಿದ್ದು, ಕಳೆದ ಭಾನುವಾರ ಗೋಣಿಬಸವೇಶ್ವರ ಜಾತ್ರೆಗೆ ಹೋಗಿ ತನ್ನ ಸಂಬಂಧಿಕರೊಂದಿಗೆ ಮನೆಗೆ ಹೋಗಲು ಹರಪ್ಪನಹಳ್ಳಿ ಹೊರವಲಯದಲ್ಲಿ ನಿಂತಿದ್ದರು.

ಈ ವೇಳೆ ಮಹಿಳೆ ನಿಂತಿದ್ದ ಸ್ಥಳಕ್ಕೆ ಬಂದ ವ್ಯಕ್ತಿಗಳ ಗುಂಪೊಂದು ಮಹಿಳೆಯ ಸಂಬಂಧಿಕರನ್ನು ಹೆದರಿಸಿ ಓಡಿಸಿದ್ದಾರೆ. ನಂತರ ಮಹಿಳೆ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಮಾಡಿದ್ದಾರೆಂದುದ ಹೇಳಲಾಗುತ್ತಿತ್ತು.

ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಇದೀಗ ಪ್ರಕರಣ ಸಂಬಂಧ ಹರಪ್ಪನಹಳ್ಳಿಯ ಇಸ್ಲಾಮಾಪುರದ ತಿರುಪತಿ, ಹನುಮಂತಪ್ಪ, ಬಸವರಾಜ ಅಲಿಯಾಸ್ ಬುಟ್ಟ್ಯಾ, ಕುಲಹಳ್ಳಿಯ ಬಸವರಾಜ ಮತ್ತು ದ್ಯಾಮಾ ಎಂಬುವವರನ್ನು ಬಂಧಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT