ಸಾಂದರ್ಭಿಕ ಚಿತ್ರ 
ರಾಜ್ಯ

ತಪಾಸಣೆಗೆ ಸ್ಕ್ವಾಡ್ ಗಳಿಂದ ಪದೇ ಪದೇ ಭೇಟಿ; ಪಿಯು ವಿದ್ಯಾರ್ಥಿಗಳಿಗೆ ಕಿರಿಕಿರಿ

ಪರೀಕ್ಷೆಗಳಲ್ಲಿ ಫ್ಲಾಯಿಂಗ್ ಸ್ಕ್ವಾಡ್ ವಿದ್ಯಾರ್ಥಿಗಳನ್ನು ತಪಾಸಣೆ ಮಾಡುವುದು ಸಾಮಾನ್ಯ. ಆದರೆ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳನ್ನು ಪರಿಶೀಲಿಸಲು ಕೆಲವು ನಿಮಿಷಗಳ ವರೆಗೆ...

ಬೆಂಗಳೂರು: ಪರೀಕ್ಷೆಗಳಲ್ಲಿ ಸ್ಕ್ವಾಡ್ ವಿದ್ಯಾರ್ಥಿಗಳನ್ನು ತಪಾಸಣೆ ಮಾಡುವುದು ಸಾಮಾನ್ಯ. ಆದರೆ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳನ್ನು ಪರಿಶೀಲಿಸಲು ಕೆಲವು ನಿಮಿಷಗಳ ವರೆಗೆ ಉತ್ತರ ಪತ್ರಿಕೆಯನ್ನೇ ಕೊಡದಿರುವುದನ್ನು ಎಲ್ಲಾದರೂ ಕೇಳಿದ್ದೀರಾ? ಪದವಿ ಪೂರ್ವ(ಪಿಯು) ಪರೀಕ್ಷೆಯಲ್ಲಿ ಇಂತಹ ಆರೋಪ ಕೇಳಿಬಂದಿದೆ. 
ಬೆಂಗಳೂರಿನ ಹಲವು ಕಾಲೇಜುಗಳಲ್ಲಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿಗಳಿಂದ ಇಂತಹ ಆರೋಪ ಕೇಳಿಬಂದಿದ್ದು, ರಾಸಾಯನ ಶಾಸ್ತ್ರ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿಗಳನ್ನು 
ಪ್ಲೈಯಿಂಗ್ ಸ್ಕ್ವಾಡ್  ತಪಾಸಣೆ ಮಾಡುವುದರೊಂದಿಗೆ  ಉತ್ತರ ಪತ್ರಿಕೆಗಳನ್ನು ಪಡೆದು ಪರೀಕ್ಷೆ ಬರೆಯುವುದಕ್ಕೆ ಕಿರಿಕಿರಿ ಉಂಟು ಮಾಡಿ, ಒತ್ತಡ ಹೆಚ್ಚಿಸಿದ್ದಾರೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ. 
"ಶೇಷಾದ್ರಿಪುರಂ ಕಾಲೇಜು ನನ್ನ ಪರೀಕ್ಷಾ ಕೇಂದ್ರವಾಗಿತ್ತು. ಎಕ್ಸಾಮ್ ಹಾಲ್ ನಲ್ಲಿ 25 ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದವು. ಸ್ಕ್ವಾಡ್ ನವರು ತಪಾಸಣೆ ನಡೆಸುವುದರೊಂದಿಗೆ, ನಮ್ಮ ಉತ್ತರ ಪತ್ರಿಕೆಗಳನ್ನು ಪಡೆದು ಅದನ್ನೂ ತಪಾಸಣೆ ಮಾಡಿದರು, 5 ನಿಮಿಷಗಳ ನಂತರ ಉತ್ತರ ಪತ್ರಿಕೆಗಳನ್ನು ವಾಪಸ್ ನೀಡಿದರು, ಇದರಿಂದ ನಮಗೆ ಒತ್ತಡ ಹೆಚ್ಚಾಯಿತು ಎಂದು ವಿದ್ಯಾರ್ಥಿಯೊಬ್ಬರು ಆರೋಪಿಸಿದ್ದಾರೆ. 
ನಮಗೆ 5 ನಿಮಿಷವೂ ಮುಖ್ಯವಾಗಿರುತ್ತದೆ. ಆದರೆ ಸ್ಕ್ವಾಡ್ ನವರು ಉತ್ತರ ಪತ್ರಿಕೆಯನ್ನು ಪಡೆದು 5 ನಿಮಿಷಗಳ ನಂತರ ವಾಪಸ್ ನೀಡಿದ್ದರಿಂದ ಕಿರಿಕಿರಿ ಉಂಟಾಗಿ ಏಕಾಗ್ರತೆಗೆ ಅಡ್ಡಿಯುಂಟಾಯಿತು ಎಂದು ಇನ್ನು ಕೆಲವು ವಿದ್ಯಾರ್ಥಿಗಳು ಹೇಳಿದ್ದಾರೆ. 
ಶೇಷಾದ್ರಿಪುರಂ ಕಾಲೇಜು ಪರೀಕ್ಷಾ ಕೇಂದ್ರ ಮಾತ್ರವಲ್ಲದೇ ಇನ್ನೂ ಕೆಲವು ಪರೀಕ್ಷಾ ಕೆಂದ್ರದಲ್ಲಿ ವಿದ್ಯಾರ್ಥಿಗಳಿಗೆ ಇಂಥದ್ದೇ ಅನುಭವವಾಗಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.  ಆದರೆ ಪದವಿ ಪೂರ್ವ ಶಿಕ್ಷಣ ಇಲಾಖೆ ಮಾತ್ರ  ಸ್ಕ್ವಾಡ್ ಗಳ ಕ್ರಮವನ್ನು ಸಮರ್ಥಿಸಿಕೊಂಡಿದ್ದು, ಸ್ಕ್ವಾಡ್ ಗಳು ಪರೀಕ್ಷಾ ಕೇಂದ್ರಕ್ಕೆ ಯಾವುದೇ ಕ್ಷಣದಲ್ಲಿ ಬೇಕಾದರೂ ಭೇಟಿ ನೀಡಬಹುದು ಎಂದು ಹೇಳಿದ್ದಾರೆ. ಆದರೆ  ಉತ್ತರ ಪತ್ರಿಕೆ ಪಡೆದು 5 ನಿಮಿಷಗಳ ನಂತರ ವಾಪಸ್ ಕೊಟ್ಟಿರುವುದಕ್ಕೆ ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದ್ದು ಈ ವಿಷಯವನ್ನು ಪಿಯು ಶಿಕ್ಷಣ  ಇಲಾಖೆಗೆ ಕೊಂಡೊಯ್ಯಲು ನಿರ್ಧರಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT