ವಿದ್ಯುತ್ ಕಡಿತದಿಂದ ನೀರಿನ ಕೊರತೆ: ಬೆಂಗಳೂರು ಜಲಮಂಡಳಿ 
ರಾಜ್ಯ

ವಿದ್ಯುತ್ ಕಡಿತದಿಂದ ನೀರಿನ ಕೊರತೆ: ಬೆಂಗಳೂರು ಜಲಮಂಡಳಿ

ಕೆಆರ್ ಎಸ್ ಜಲಾಶಯದಲ್ಲಿ ನೀರಿನ ಸಂಗ್ರಹದ ಕೊರತೆ ಇಲ್ಲದಿರುವುದರಿಂದ ನೀರಿನ ಕೊರತೆ ಎದುರಾಗುವುದಿಲ್ಲ ಎಂಬ ಹೊರತಾಗಿಯೂ ನೀರಿನ ಕೊರತೆ ಎದುರಾಗಿದೆ.

ಬೆಂಗಳೂರು: ಸದ್ಯದಲ್ಲೇ ಬೆಂಗಳೂರಿಗೆ ನೀರಿನ ಕೊರತೆ ಎದುರಾಗಲಿದೆ ಎಂಬ ಒಂದು ವಾರದ ಅಹಿಂದೆಯೇ ಅಂದಾಜಿಸಲಾಗಿತ್ತು. ಆದರೆ ಕೆಆರ್ ಎಸ್ ಜಲಾಶಯದಲ್ಲಿ ನೀರಿನ ಸಂಗ್ರಹದ ಇಲ್ಲದಿರುವುದರಿಂದ ನೀರಿನ ಕೊರತೆ ಎದುರಾಗುವುದಿಲ್ಲ  ಎಂಬ ಬೆಂಗಳೂರು ಜಲಮಂಡಳಿ ಸ್ಪಷ್ಟನೆಯ ಹೊರತಾಗಿಯೂ ನಗರದಲ್ಲಿ  ನೀರಿನ ಕೊರತೆ ಎದುರಾಗಿದೆ. 
ನೀರಿನ ಕೊರತೆ ಎದುರಾಗಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬೆಂಗಳೂರು ಜಲಮಂಡಳಿ ಅಧ್ಯಕ್ಷ ವಿಜಯ್ ಭಾಸ್ಕರ್, ವಿದ್ಯುತ್ ಕೊರತೆಯಿಂದ ನೀರಿನ ಪೂರೈಕೆಗೆ ಅಡ್ಡಿ ಉಂಟಾಗಿದೆ ಎಂದು ಹೇಳಿದ್ದಾರೆ. ವಿದ್ಯುತ್ ಪೂರೈಕೆ ಕೊರತೆಯಿಂದ ನೀರಿನ ಪೂರೈಕೆಗೂ ಕೆಲವು ಪ್ರದೇಶಗಳಲ್ಲಿ ಅಡ್ಡಿ ಉಂಟಾಗಿದೆ, ನಗರದ ನೀರುಪೂರೈಕೆಯ ಶೇ.3 ರಷ್ಟು ಮಾತ್ರ ಪರಿಣಾಮ ಎದುರಿಸಿದೆ ಎಂದು ತಿಳಿಸಿದ್ದಾರೆ. 
ಕೆಆರ್ ಎಸ್ ಜಲಾಶಯದಲ್ಲಿ ಪ್ರಸ್ತುತ 84 ಅಡಿ ನೀರಿದೆ. ಬೆಂಗಳೂರು, ಮೈಸೂರು, ಮಂಡ್ಯ ಹಾಗು ಸುತ್ತಮುತ್ತಲಿನ ಪ್ರದೇಶಗಳಿಗೆ ನೀರು ಪೂರೈಕೆ ಮಾಡಲು 75 ಅಡಿ ನೀರಿದ್ದರೆ ಸಾಕು ಎನ್ನುತ್ತಾರೆ ಬೆಂಗಳೂರು ಜಲಮಂಡಳಿಯ ಮುಖ್ಯ ಇಂಜಿನಿಯರ್ ಎಸ್ ಕೃಷ್ಣಪ್ಪ. 
ಬಸವೇಶ್ವರ ನಗರ, ಕಮಲಾ ನಗರ, ರಾಜಾಜಿನಗರದ ಕೆಲವು ಪ್ರದೇಶಗಳು, ಮಹಾಲಕ್ಷ್ಮಿ ಲೇಔಟ್, ವಿಜಯನಗರ, ನಾಗರಬಾವಿ, ಕೆಂಗೇರಿಯ ಕೆಲವು ಪ್ರದೇಶಗಳು ನೀರಿನ ಕೊರತೆ ಎದುರಿಸುತ್ತಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT