ಕಲಬುರಗಿ ಸೆಂಟ್ರಲ್ ಜೈಲ್ 
ರಾಜ್ಯ

ಸೆಂಟ್ರಲ್ ಜೈಲಿನಿಂದ 4 ವಿಚಾರಣಾಧೀನ ಕೈದಿಗಳು ಎಸ್ಕೇಪ್

ಕಲಬುರಗಿ ಸೆಂಟ್ರಲ್ ಜೈಲಿನಿಂದ ನಾಲ್ಕು ಜನ ವಿಚಾರಣಾಧೀನ ಕೈದಿಗಳು ಪರಾರಿಯಾದ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ...

ಕಲಬುರಗಿ:  ಕಲಬುರಗಿ ಸೆಂಟ್ರಲ್ ಜೈಲಿನಿಂದ ನಾಲ್ಕು ಜನ ವಿಚಾರಣಾಧೀನ ಕೈದಿಗಳು ಪರಾರಿಯಾದ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.

ಮಧ್ಯರಾತ್ರಿ 1 ಗಂಟೆಯ ಸಮಯದಲ್ಲಿ ಶಿವಕುಮಾರ್, ಸುನೀಲಕುಮಾರ್, ತಾಜುದ್ದೀನ್, ಲಕ್ಷ್ಮಣ ಎಂಬ ಕೈದಿಗಳು ಜೈಲಿನ ಬ್ಯಾರಕ್‌ನ ಗೋಡೆ ಕೊರೆದು ನಂತರ ಜೈಲಿನ ಗೋಡೆ ಹಾರಿ ಕೈದಿಗಳು ಪರಾರಿಯಾಗಿದ್ದಾರೆ.

ಇವರರಲ್ಲಿ ಓರ್ವ ಕೊಲೆ ಅಪರಾಧಿ ಹಾಗೂ ಉಳಿದ ಮೂರು ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ್ದರು ಎನ್ನಲಾಗಿದೆ. ಪರಾರಿಯಾದ ಕೈದಿಗಳ ಬಂಧನಕ್ಕೆ ಪೊಲೀಸರು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಇನ್ನು ಪ್ರಕರಣದಲ್ಲಿ ಸಿಬ್ಬಂದಿಯ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ, ಕೈದಿಗಳು ಪರಾರಿಯಾಗಲು ಅಲ್ಲಿದ್ದ ಸಹ ಕೈದಿಗಳು ಸಹಾಯ ಮಾಡಿದ್ದಾರೆ ಎಂದು ಶಂಕಿಸಲಾಗಿದೆ. ಮಧ್ಯರಾತ್ರಿ 1 ಗಂಟೆಯಿಂದ 3ಗಂಟೆಯ ಒಳಗೆ ಪರಾರಿಯಾಗಿದ್ದು, ತಡವಾಗಿ ಪೊಲೀಸರ ಗಮನಕ್ಕೆ ಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Hormuz ಜಲಸಂಧಿಯಲ್ಲಿ ಕ್ಷಿಪಣಿ ದಾಳಿ: ಭಾರತೀಯ ನಾವಿಕ ಸಾವು, Iran ರಾಯಭಾರಿಗೆ ಭಾರತ summons..!

New Yorkನಲ್ಲಿ Jaishankar-Guterres ಹೈ-ಲೆವೆಲ್ ಮೀಟಿಂಗ್: ಮಧ್ಯಪ್ರಾಚ್ಯ-ಉಕ್ರೇನ್ ಸಂಘರ್ಷ, ಕಡಲ ಭದ್ರತೆ ಕುರಿತು ಮಹತ್ವದ ಚರ್ಚೆ..!

'Navigation systems' ಸ್ಥಗಿತಗೊಳಿಸಿ ನಿಷೇಧಿತ ಮಾರ್ಗದಲ್ಲಿ ಸಂಚರಿಸಿದ್ದರು', ಎಚ್ಚರಿಕೆ ನೀಡಿದರೂ ನಿರ್ಲಕ್ಷಿಸಿದ್ದರು: UAE ಹಡಗುಗಳ ಮೇಲಿನ ದಾಳಿಗೆ Iran ಸಮರ್ಥನೆ..!

ಗೃಹ ಸಚಿವರ ತವರು ಜಿಲ್ಲೆ ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಸಜಾ ಕೈದಿಗಳು ಪರಾರಿ ‌!

ಕಡಲ ಭದ್ರತೆ, ನಾವಿಕರ ಸುರಕ್ಷತೆಗೆ ಬದ್ಧ: ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತದ ನಿಲುವು ಸ್ಪಷ್ಟಪಡಿಸಿದ ಜೈಶಂಕರ್