ಡಿ.ಕೆ.ಶಿವಕುಮಾರ್ 
ರಾಜ್ಯ

ಎಲ್ ಇಡಿ ಬಲ್ಬುಗಳಿಂದ ಯಾವುದೇ ಹಾನಿಯಿಲ್ಲ: ಡಿಕೆಶಿ

ಎಲ್ ಇಡಿ ಬಲ್ಬು ಬಳಸುವುದರಿಂದ ಕಣ್ಣಿಗೆ ಯಾವುದೇ ರೀತಿಯ ಹಾನಿಯಿಲ್ಲ ಎಂದು ಇಂಧನ ಸಚಿವ...

ಬೆಂಗಳೂರು: ಎಲ್ ಇಡಿ ಬಲ್ಬು ಬಳಸುವುದರಿಂದ ಕಣ್ಣಿಗೆ ಯಾವುದೇ ರೀತಿಯ ಹಾನಿಯಿಲ್ಲ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ನಿನ್ನೆ ವಿಧಾನಪರಿಷತ್ತಿನಲ್ಲಿ ಬಿಜೆಪಿ ಸದಸ್ಯೆ ವಿಮಲಾ ಗೌಡ, ಎಲ್ ಇಡಿ ಬಲ್ಬ್ ನಿಂದ ಕಣ್ಣಿನ ರೆಟಿನಾದ ಮೇಲೆ ದುಷ್ಟರಿಣಾಮ ಬೀರುತ್ತದೆ ಎಂದು ನೇತ್ರಶಾಸ್ತ್ರ ಸೊಸೈಟಿಯೊಂದು ವಿಷಯವೆತ್ತಿದೆ. ಬಲ್ಬ್ ನಲ್ಲಿ ಉಪಯೋಗಿಸುವ ರಾಸಾಯನಿಕಗಳು ಶರೀರದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂದು ಅದು ಹೇಳಿದೆ ಎಂದರು.

ಅದಕ್ಕೆ ಉತ್ತರಿಸಿದ ಸಚಿವರು, ಎಲ್ ಇಡಿ ಬಲ್ಬ್ ಗಳನ್ನು ಉಪಯೋಗಿಸುವುದರಿಂದ ನಾವು ಶೇಕಡಾ 40ರಷ್ಟು ವಿದ್ಯುತ್ ನ್ನು ಉಳಿತಾಯ ಮಾಡಬಹುದು. ಹೊಸ ಬೆಳಕು ಯೋಜನೆಯಡಿ, ರಾಜ್ಯ ಸರ್ಕಾರ 6.5 ಕೋಟಿ ಬಲ್ಬ್ ಗಳಿಗೆ ಟೆಂಡರ್ ಕರೆದಿದೆ. ಅವುಗಳಲ್ಲಿ 2 ಕೋಟಿ ಸ್ಥಳೀಯ ಉತ್ಪಾದಕರಿಂದ ಪೂರೈಕೆಯಾಗಿದೆ. ಆದರೆ ಕೆಲವು ಉತ್ಪಾದಕರು ರಾಜ್ಯ ಸರ್ಕಾರ ನಿಗದಿಪಡಿಸಿರುವ ಸಬ್ಸಿಡಿ ದರ ಕಡಿಮೆಯಾಗಿದೆ ಎನ್ನುತ್ತಿದ್ದಾರೆ. ಅಂತವರು ಇಂತಹ ಸುಳ್ಳು ಸುದ್ದಿಗಳನ್ನ ಹಬ್ಬಿಸುತ್ತಿದ್ದಾರೆ. ಎಲ್ ಇಡಿ ಬಲ್ಬ್ ಗಳನ್ನು ಬಳಸುವುದರಿಂದ ಯಾವುದೇ ರೀತಿಯಲ್ಲಿ ತೊಂದರೆಯಿಲ್ಲ ಎಂದು ಅವರು ಸಂದೇಹಗಳಿಗೆ ತೆರೆ ಎಳೆದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT