ಸಾಂದರ್ಭಿಕ ಚಿತ್ರ 
ರಾಜ್ಯ

ಮೇ ತಿಂಗಳವರೆಗೂ ಕುಡಿವ ನೀರಿನ ಸಮಸ್ಯೆಯಿಲ್ಲ: ಬಿಡಬ್ಲ್ಯೂ ಎಸ್ ಎಸ್ ಬಿ

ಮೇ ತಿಂಗಳವರೆಗೂ ಪೂರೈಸುವಷ್ಟು ಅಗತ್ಯವಾದ ನೀರಿದ್ದು, ಅಲ್ಲಿಯವರೆಗೂ ಕುಡಿವ ನೀರಿನ ಸಮಸ್ಯೆ ಇಲ್ಲ ಎಂದು ಬಿಡಬ್ಲ್ಯೂ ಎಸ್ ಎಸ್ ಬಿ ಅಧ್ಯಕ್ಷ ಟಿಎಂ ವಿಜಯ ಭಾಸ್ಕರ್ ಹೇಳಿದ್ದಾರೆ.

ಬೆಂಗಳೂರು: ಮೇ ತಿಂಗಳವರೆಗೂ ಪೂರೈಸುವಷ್ಟು ಅಗತ್ಯವಾದ ನೀರಿದ್ದು, ಅಲ್ಲಿಯವರೆಗೂ ಕುಡಿವ ನೀರಿನ ಸಮಸ್ಯೆ ಇಲ್ಲ ಎಂದು ಬಿಡಬ್ಲ್ಯೂ ಎಸ್ ಎಸ್ ಬಿ ಅಧ್ಯಕ್ಷ ಟಿಎಂ ವಿಜಯ ಭಾಸ್ಕರ್ ಹೇಳಿದ್ದಾರೆ.

ವಿಶ್ವಜಲದಿನದ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಪ್ರತಿ ದಿನ ಪ್ರತಿ ವ್ಯಕ್ತಿಗೆ ಜಲಮಂಡಳಿ 135 ಲೀಟರ್ ನೀರನ್ನು ಪೂರೈಸಲು ಶಕ್ತವಿದೆ. ಆದರೆ ಹಲವು ಕಾರಣಗಳಿಂದಾಗಿ ಕೇವಲ 70 ಲೀ. ನೀರು ಮಾತ್ರ ಪೂರೈಕೆಯಾಗುತ್ತಿದೆ. ಉಳಿದ 65 ಲೀಟರ್ ನೀರು ಸೋರಿಕೆಯಿಂದ ಹಾಗೂ ಕಳ್ಳತನದಿಂದ ವ್ಯರ್ಥವಾಗುತ್ತಿದೆ ಎಂದು ಹೇಳಿದ್ದಾರೆ.

ಕೆಲ ಪ್ರದೇಶಗಳಲ್ಲಿ ಹೊಲಸು ಮತ್ತು ಕಸ, ಕುಡಿಯುವ ನೀರಿಗೆ ಮಿಶ್ರಣವಾಗುತ್ತಿದ್ದೂ, ಅಂಥ ಸಮಸ್ಯೆಗಳನ್ನು ಶೀಘ್ರವೇ ಇತ್ಯರ್ಥ ಪಡಿಸಬೇಕು ಎಂದು ವಿಜಯ್ ಭಾಸ್ಕರ್ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಪ್ರತಿದಿನ ಕನಿಷ್ಠ ನೂರು ನೀರಿನ ಮಾದರಿಗಳನ್ನು ತೆಗೆದುಕೊಂಡು ಪರೀಕ್ಷೆ ನಡೆಸುತ್ತಿದ್ದು, ಕ್ಲೋರಿನ್ ಪ್ರಮಾಣ ಕಡಿಮೆ ಇರುವ ಕಡೆ ಅದನ್ನು ಪೂರೈಸಲು ಅಗತ್ಯ ಕ್ರಮ ಕೈಗೊಳ್ಳುತ್ತಿರುವುದಾಗಿ ತಿಳಿಸಿದರು.

ಇನ್ನೂ ನಗರ ಪ್ರದೇಶದ ಮನೆಗಳಿಗೆ ವಾಟರ್ ಮೀಟರ್ ಅಳವಡಿಸುವಲ್ಲಿ ಜಲಮಂಡಳಿ ಶೇ.98 ರಷ್ಟು ಯಶಸ್ವಿಯಾಗಿದೆ. 1.5 ಲಕ್ಷ ಹಳೇಯ ಮೀಟರ್ ಗಳ ಬದಲಾಗಿ ಹೊಸ ಮೀಟರ್ ಅಳವಡಿಸಿದ್ದೇವೆ, ಜೊತೆಗೆ ಅಕ್ರಮ ಸಂಪರ್ಕಗಳನ್ನು ರದ್ದುಗೊಳಿಸಲಾಗಿದೆ ಎಂದು ವಿವರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!