ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರದಾನ ಕಾರ್ಯದರ್ಶಿ ಅಜಯ್ ಸೆಥ್ 
ರಾಜ್ಯ

ಪರೀಕ್ಷಾ ಕೇಂದ್ರಗಳಿಂದ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ: ಅಧಿಕಾರಿಗಳು

ಪರೀಕ್ಷಾ ಕೇಂದ್ರಗಳಿಂದ ಪಿಯುಸಿ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ...

ಬೆಂಗಳೂರು: ಪರೀಕ್ಷಾ ಕೇಂದ್ರಗಳಿಂದ ಪಿಯುಸಿ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
975 ಪರೀಕ್ಷೆ ಕೇಂದ್ರಗಳಲ್ಲೂ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ ಎಂದು ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಜಯ್ ಸೆಥ್ ಹೇಳಿದ್ದು, ಈ ಸಂಬಂಧ ಎಲ್ಲಾ ಪರೀಕ್ಷಾ ಮುಖ್ಯಸ್ಥರನ್ನು ವಿಚಾರಣೆ ನಡೆಸಲಾಗಿದೆ. ಎಲ್ಲಿಯೂ ಪತ್ರಿಕೆಯ ಬಂಡಲ್ ಗಳನ್ನು ತೆಗೆದು ನೋಡಲಾಗಿಲ್ಲ ಎಂದು ತಿಳಿದು ಬಂದಿದೆ ಎಂದು ಹೇಳಿದ್ದಾರೆ. 
ಪ್ರಶ್ನೆ ಪತ್ರಿಕೆ ಎಲ್ಲಿಂದ ಸೋರಿಕೆಯಾಗಿದೆ ಅಥವಾ ಇಲ್ಲ ಎಂಬುದರ ಬಗ್ಗೆ ನಾನು ಅಂತಿಮ ನಿರ್ಧಾರ ಹೇಳಲಾಗುವುದಿಲ್ಲ. ಏಕೆಂದರೆ, ಪ್ರಶ್ನೆ ಪತ್ರಿಕೆ ಸಿದ್ಧ ಮಾಡುವುದು, ಮುದ್ರಿತ ಹಾಗೂ ವರ್ಗಾವಣೆಯ ಹಂತಗಳಿರುತ್ತವೆ. ಹಾಗಾಗಿ, ಪರೀಕ್ಷಾ ಕೇಂದ್ರಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ ಎಂದು ಸ್ಪಷ್ಟಪಡಿಸುತ್ತೇನೆ. ಇನ್ನುಳಿದಿರುವುದರ ಬಗ್ಗೆ ತನಿಖೆ ಹೇಳುತ್ತದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

Udaipur: ನಿಜಕ್ಕೂ ಅಚ್ಚರಿ, 55ನೇ ವಯಸ್ಸಿನಲ್ಲಿ 17ನೇ ಮಗುವಿಗೆ ತಾಯಿಯಾದ ಮಹಿಳೆ!

SCROLL FOR NEXT