ಸಾಂದರ್ಭಿಕ ಚಿತ್ರ 
ರಾಜ್ಯ

ಭಾರತ-ಆಸ್ಟ್ರೇಲಿಯಾ ಮ್ಯಾಚ್ ನೋಡುವ ವೇಳೆ ನಾಯಿ ಬೊಗಳಿದ್ದಕ್ಕೆ ಯುವಕನ ಕೊಲೆ

ಭಾರತ- ಆಸ್ಟ್ರೇಲಿಯಾ ನಡುವೆ ನಡೆಯುತ್ತಿದ್ದ ಕ್ರಿಕೆಟ್ ಮ್ಯಾಚ್ ನೋಡುತ್ತಿದ್ದ ವೇಳೆ ನಾಯಿ ಬೊಗಳಿದ್ದಕ್ಕೆ ಯುವಕನನ್ನು ಬಿಯರ್ ಬಾಟಲ್ ನಿಂದ ಇರಿದು ಕೊಲೆ ಮಾಡಿರುವ ಘಟನೆ ...

ಬೆಂಗಳೂರು:  ಭಾರತ- ಆಸ್ಟ್ರೇಲಿಯಾ ನಡುವೆ ನಡೆಯುತ್ತಿದ್ದ ಕ್ರಿಕೆಟ್ ಮ್ಯಾಚ್ ನೋಡುತ್ತಿದ್ದ ವೇಳೆ ನಾಯಿ ಬೊಗಳಿದ್ದಕ್ಕೆ ಯುವಕನನ್ನು ಬಿಯರ್ ಬಾಟಲ್ ನಿಂದ ಇರಿದು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಜೆಸಿ ನಗರದಲ್ಲಿ ನಡೆದಿದೆ.

ಜೆಸಿ ನಗರದ ಎಸ್‍ಕೆ ಗಾರ್ಡನ್‍ನಲ್ಲಿ ಈ ದಾರುಣ ಘಟನೆ ನಡೆದಿದ್ದು, ಕೊಲೆಯಾದ ಯುವಕನನ್ನು ತೃತೀಯ ಬಿಕಾಂ ಓದುತ್ತಿದ್ದ ಅವಿನಾಶ್ ಎಂದು ಗುರುತಿಸಲಾಗಿದೆ.

ನಿನ್ನೆ ರಾತ್ರಿ ಜೆಸಿ ನಗರದಲ್ಲಿ ದೊಡ್ಡ ಪ್ರೊಜೆಕ್ಟರ್ ಅಳವಡಿಸಿಕೊಂಡು ಹಲವು ಮಂದಿ ಕ್ರಿಕೆಟ್ ಮ್ಯಾಚ್ ನೋಡುತ್ತಿದ್ದರು. ಈ ವೇಳೆ ಅವಿನಾಶ್ ಮನೆಯ ನಾಯಿ ಬೊಗಳಲು ಆರಂಭಿಸಿದೆ. ಪಂದ್ಯ ಸಾಕಷ್ಟು ಕುತೂಹಲ ಮೂಡಿಸಿದ್ದ ವೇಳೆಯೇ ನಾಯಿ ಬೊಗಳುತ್ತಿರುವುದು ಅಲ್ಲಿದ್ದ ಯುವಕರ ಆಕ್ರೋಶಕ್ಕೆ ಕಾರಣವಾಗಿ ನಾಯಿಯನ್ನು ಒಳಗೆ ಕೂಡಿ ಹಾಕಲು ಯುವಕರ ಗುಂಪೊಂದು ಹೇಳಿದೆ.

ಇದಕ್ಕೆ ಪ್ರತಿಕ್ರಿಯಿಸಿದ ಅವಿನಾಶ್ ಜೋರಾಗಿ ಸೌಂಡ್ ಇಟ್ಟು ಮ್ಯಾಚ್ ನೋಡುವಂತೆ ಹೇಳಿದ್ದಾನೆ. ಇದರಿಂದ ಕುಪಿತಗೊಂಡ ಕೆನಡಿ ಎಂಬಾತ  ತನ್ನ ಬಳಿಯಿದ್ದ ಬಿಯರ್ ಬಾಟಲ್ ನಿಂದ ಅವಿನಾಶ್ ಗೆ ಚುಚ್ಚಿದ್ದಾನೆ. ಈ ವೇಳೆ ಎರಡು ಗುಂಪುಗಳ ನಡುವೆ ಜಗಳ ನಡೆದಿದ್ದು ಹಲವರಿಗೆ ಗಾಯಗಳಾಗಿವೆ. ಇನ್ನು ಅವಿನಾಶ್ ಮೃತಪಟ್ಟಿದ್ದು, ಜೆ ಸಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೆನಡಿ ಮತ್ತು ಆತನ ಗೆಳೆಯನನ್ನು ಪೊಲೀಸರು ಬಂಧಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

SCROLL FOR NEXT