ಜೈನ್ ವಿವಿ ವಿದ್ಯಾರ್ಥಿಗಳು 
ರಾಜ್ಯ

ಜೈನ್ ವಿವಿ ವಿದ್ಯಾರ್ಥಿಗಳಿಂದ ಹಸಿರು ಬೆಂಗಳೂರಿಗಾಗಿ ‘ಐಕ್ಯತೆಯ ನಡಿಗೆ’

ಜೈನ್ ವಿಶ್ವವಿದ್ಯಾಲಯದ (JU-CMS) ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿಗಳು ಸೋಮವಾರ...

ಬೆಂಗಳೂರು: ಜೈನ್ ವಿಶ್ವವಿದ್ಯಾಲಯದ (JU-CMS) ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿಗಳು ಸೋಮವಾರ  ‘ಹಸಿರು ಬೆಂಗಳೂರಿ’ನ ಪ್ರಾಮುಖ್ಯತೆಯನ್ನು ಪ್ರಚುರಪಡಿಸಲು ‘ಐಕ್ಯತೆಗಾಗಿ ನಡಿ’ಗೆ ಯನ್ನು ಹಮ್ಮಿಕೊಂಡಿದ್ದರು. 
ಸುಮಾರು 40 ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿಯರು ಲಾಲಬಾಗ್ ಪಶ್ಚಿಮ ಗೇಟ್ ನಿಂದ ಜೈನ್ ಸಿಎಂಎಸ್  (ಸೆಂಟರ್ ಫಾರ್ ಮ್ಯಾನೇಜ್ಮೆಂಟ್ ಸ್ಟಡೀಸ್) ಕ್ಯಾಂಪಸ್, ಪ್ಯಾಲೆಸ್ ರಸ್ತೆಯವರೆಗೂ ಜಾಥಾ ನಡೆಸಿದರು.
ಬೆಳಗ್ಗೆ 6.30ಕ್ಕೆ ಆರಂಭವಾದ ಈ ನಡಿಗೆಯು ಬೆಂಗಳೂರಿನಲ್ಲಿ ಹಸಿರು ಕಡಿಮೆಯಾಗುತ್ತಿರುವ ಬಗ್ಗೆ ಜನ-ಜಾಗೃತಿ ಮೂಡಿಸುವಂತಹ ಅನೇಕ ಘೋಷಣೆಗಳನ್ನು ಕೂಗುತ್ತಾ ಸಾಗಿತು. ಇದೇ ಸಮಯದಲ್ಲಿ ವಿದ್ಯಾರ್ಥಿಗಳು ಏಪ್ರಿಲ್ 1 ರಂದು ಜನರಿಗೆ ಉಚಿತವಾಗಿ ಕೊಡುವ ಸಸಿಗಳನ್ನು ಖರೀದಿಸುವುದಕ್ಕೆ ಸಾರ್ವಜನಿಕರಿಂದ ಹಣವನ್ನು ಸಂಗ್ರಹಿಸಿದರು.
ಜೆಯುಸಿಎಂಎಸ್(JU-CMS)ನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ, ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳು ‘ಸಂಸ್ಕೃತಿ – ಕನಸಿಗೊಂದು ಮುನ್ನುಡಿ’ ಎಂಬ ಸಾಂಸ್ಕೃತಿಕ ಕಾರ್ಯಕ್ರಮವನ್ನು ಏಪ್ರಿಲ್ 6 ರಂದು ಕುನ್ನಿಂಗಹ್ಯಾಮ್ ರಸ್ತೆಯಲ್ಲಿರುವ ಅಲಯಾನ್ಸ್ ಫ್ರಾಂಸ್ಯೆ ಡಿಯಲ್ಲಿ ಹಮ್ಮಿಕೊಂಡಿದ್ದಾರೆ. ಫೋಟೋಗ್ರಫಿ, ನೃತ್ಯ, ಸಂಗೀತ ಮತ್ತು ನಾಟಕಗಳ ಮೂಲಕ ಕಲಾ ಸಂಸ್ಕೃತಿಯನ್ನು ಎತ್ತಿ ಹಿಡಿಯುವುದೇ ಈ ಕಾರ್ಯಕ್ರಮದ ಉದ್ದೇಶವಾಗಿದೆ. ಕಾರ್ಯಕ್ರಮದಿಂದ ಸಂಗ್ರಹವಾಗುವ ಎಲ್ಲ ಹಣವು ಅನಾಥಾಶ್ರಮಕ್ಕೆ ಸೇರಲಿದೆ. ಅಂದು ಪರಿಸರವಾದಿ ‘ಸಾಲುಮರದ ತಿಮ್ಮಕ್ಕ’ರವರನ್ನು ಸನ್ಮಾನಿಸಲಾಗುವುದು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT