ಸಾಂದರ್ಭಿಕ ಚಿತ್ರ 
ರಾಜ್ಯ

ಎಸ್ ಎಸ್ ಎಲ್ ಸಿ ಪರೀಕ್ಷೆ ಬುಧವಾರ ಆರಂಭ: ಸಿಬ್ಬಂದಿಗಳಿಗೂ ಮೊಬೈಲ್ ಬಳಕೆ ನಿಷೇಧ

ರಾಜ್ಯಾದ್ಯಂತ ಎಸ್ಎಸ್ಎಲ್ ಸಿ ಪರೀಕ್ಷೆ ನಾಳೆ(ಬುಧವಾರ) ಆರಂಭವಾಗಲಿದ್ದು, ಪರೀಕ್ಷಾ ಸಮಯದಲ್ಲಿ ಮೊಬೈಲ್...

ಬೆಂಗಳೂರು: ರಾಜ್ಯಾದ್ಯಂತ ಎಸ್ಎಸ್ಎಲ್ ಸಿ ಪರೀಕ್ಷೆ ನಾಳೆ(ಬುಧವಾರ) ಆರಂಭವಾಗಲಿದ್ದು, ಪರೀಕ್ಷಾ ಸಮಯದಲ್ಲಿ ಮೊಬೈಲ್ ಫೋನ್ ತೆಗೆದುಕೊಂಡು ಹೋಗಲು ಬಿಡುವುದಿಲ್ಲ.

ಇಲ್ಲಿಯವರೆಗೆ ಮೊಬೈಲ್ ಫೋನ್ ನಿಷೇಧ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯವಾಗುತ್ತಿತ್ತು. ಆದರೆ ಈ ವರ್ಷದಿಂದ ಸಿಬ್ಬಂದಿಗಳು ಕೂಡ ಪರೀಕ್ಷಾ ಕೊಠಡಿಯೊಳಗೆ ಮೊಬೈಲ್ ಫೋನನ್ನು ತೆಗೆದುಕೊಂಡು ಹೋಗುವಂತಿಲ್ಲ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಆದೇಶ ತಂದಿದೆ. ಇದು ಪರೀಕ್ಷಾ ಕೊಠಡಿಗೆ ವಿದ್ಯಾರ್ಥಿಗಳಿಗೆ ನೀರು ಪೂರೈಸುವವರಿಂದ ಹಿಡಿದು ಕೊಠಡಿ ಮೇಲ್ವಿಚಾರಕರವರೆಗೆ ಎಲ್ಲರಿಗೂ ಅನ್ವಯವಾಗಲಿದೆ.

ಈ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿದ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಕೆ.ಎಸ್.ಸತ್ಯಮೂರ್ತಿ, ಪರೀಕ್ಷೆ ನಡೆಯುವ ಕೇಂದ್ರದ ಮುಖ್ಯ ಮೇಲ್ವಿಚಾರಕರ ಬಳಿ ಮೊಬೈಲ್ ಫೋನುಗಳನ್ನು ಕೊಟ್ಟು ಪರೀಕ್ಷೆ ಕೊಠಡಿಯೊಳಗೆ ಪ್ರವೇಶಿಸಬೇಕು ಎಂದು ಹೇಳಿದರು.

ಪರೀಕ್ಷೆ ವೇಳೆ ಅವ್ಯವಹಾರಗಳನ್ನು ತಡೆಗಟ್ಟಲು ಮತ್ತು ಕೊಠಡಿಯಲ್ಲಿ ಮೇಲ್ವಿಚಾರಕರ ಮೊಬೈಲ್  ರಿಂಗಾದಾಗ ವಿದ್ಯಾರ್ಥಿಗಳ ಏಕಾಗ್ರತೆಗೆ ತೊಂದರೆಯಾಗದಿರಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಖಾತೆ ಹಂಚಿಕೆ ಕಸರತ್ತು: ವರಿಷ್ಠರಿಗೆ ಪಟ್ಟಿ ನೀಡಿ ಬೆಂಗಳೂರಿಗೆ CM ಡಿಕೆ ಶಿವಕುಮಾರ್ ವಾಪಸ್; ಹೇಳಿದ್ದೇನು?

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್ ಶಾಕ್: ಪ್ರದೋಷ್‌ ಮಾಫಿ ಸಾಕ್ಷಿಗೆ ಕೋರ್ಟ್‌ ಅಸ್ತು

'ಸತ್ಯವನ್ನು ಎದುರಿಸುವ ಧೈರ್ಯವಿಲ್ಲ': ಭಾರತದ ಕಮ್ಯುನಿಸ್ಟರು ಸಂಪೂರ್ಣ ಹೇಡಿಗಳು; ನಿರ್ಮಲಾ ಸೀತಾರಾಮನ್ ವಾಗ್ದಾಳಿ

ರಾಸಾಯನಿಕ ತ್ಯಾಜ್ಯ ಬಿಡುಗಡೆ ಆರೋಪ: ಬೀದರ್‌ನ 3 ಕೈಗಾರಿಕೆಗಳ ಬಂದ್ ಗೆ ಸಚಿವ ಈಶ್ವರ್ ಖಂಡ್ರೆ ನಿರ್ದೇಶನ

ರಾಮ ಮಂದಿರ ಟ್ರಸ್ಟ್‌ CEO ಹುದ್ದೆಗೆ ಬರೋಬ್ಬರಿ 5,200 ಅರ್ಜಿ; ಸಂದರ್ಶನಕ್ಕೆ ಕೇವಲ 20 ಅಭ್ಯರ್ಥಿಗಳು ಆಯ್ಕೆ!