ರಾಘವೇಶ್ವರ ಶ್ರೀಗಳು 
ರಾಜ್ಯ

ರಾಘವೇಶ್ವರ ಶ್ರೀಗಳ ವಿರುದ್ಧ ಅತ್ಯಾಚಾರ ಪ್ರಕರಣ: ಆರೋಪ ಕೈ ಬಿಟ್ಟ ನ್ಯಾಯಾಲಯ

ರಾಮಕಥಾ ಗಾಯಕಿ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳಿಗೆ...

ಬೆಂಗಳೂರು: ರಾಮಕಥಾ ಗಾಯಕಿ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳಿಗೆ ದೊಡ್ಡ ಮುಕ್ತಿ ಸಿಕ್ಕಿದೆ. ಅವರ ವಿರುದ್ಧದ ಆರೋಪವನ್ನು ಬೆಂಗಳೂರಿನ ಸೆಷನ್ಸ್ ನ್ಯಾಯಾಲಯ ಗುರುವಾರ ಕೈಬಿಟ್ಟಿದೆ. ಇದರಿಂದ  ಸುಮಾರು ಎರಡು ವರ್ಷಗಳಿಂದ ಶ್ರೀಗಳು ಮತ್ತು ಗಾಯಕಿ ನಡೆಸುತ್ತಿದ್ದ ಕಾನೂನು ಹೋರಾಟಕ್ಕೆ ಬ್ರೇಕ್ ಬಿದ್ದಂತಾಗಿದೆ.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಶ್ರೀಗಳ ವಿರುದ್ಧ 2014ರ ಮಧ್ಯಭಾಗದಲ್ಲಿ  ಗಾಯಕಿ ಪ್ರೇಮಲತಾ ಅತ್ಯಾಚಾರ ಆರೋಪ ಮಾಡಿದ್ದರು. ನಂತರ ನ್ಯಾಯಾಲಯದಲ್ಲಿ ಅನೇಕ ವಾದ-ವಿವಾದಗಳು ನಡೆದಿದ್ದವು.
ಪ್ರಕರಣವನ್ನು ಕೈ ಬಿಡುವಂತೆ ಕೋರಿ ರಾಘವೇಶ್ವರ ಭಾರತೀ ಸ್ವಾಮಿಗಳು ಅರ್ಜಿ ಸಲ್ಲಿಸಿದ್ದರು.ಅದನ್ನು ಪುರಸ್ಕರಿಸಿದ ಬೆಂಗಳೂರಿನ ಸೆಷನ್ಸ್ ನ್ಯಾಯಾಲಯ ಇಂದು ಅವರ ವಿರುದ್ಧದ ವಿಚಾರಣೆಯನ್ನು ಕೈಬಿಟ್ಟಿದೆ.

ಈ ಮಧ್ಯೆ ಪ್ರಕರಣದ ವಿಚಾರಣೆ ನಡೆಸುತ್ತಿರುವ ಸೆಷನ್ಸ್ ನ್ಯಾಯಾಧೀಶ ಜಿ.ಬಿ.ಮುದಿಗೌಡರ್ ಅವರನ್ನು ಬದಲಾಯಿಸಿ ಬೇರೊಬ್ಬ ನ್ಯಾಯಾಧೀಶರನ್ನು ನೇಮಿಸುವಂತೆ ಸುಪ್ರೀಂ ಕೋರ್ಟ್ ನಲ್ಲಿ ವಿಶೇಷ ಮೇಲ್ಮನವಿ ಸಲ್ಲಿಸಲಾಗಿತ್ತು.

ಭಕ್ತರ ಹರ್ಷೋದ್ಘಾರ: ರಾಘವೇಶ್ವರ ಶ್ರೀಗಳ ಪರ ನ್ಯಾಯಾಲಯ ತೀರ್ಪು ನೀಡುತ್ತಿದ್ದಂತೆ ಅವರ ಭಕ್ತವೃಂದದ ಹರ್ಷ ಮುಗಿಲು ಮುಟ್ಟಿದೆ. ಬೆಂಗಳೂರಿನ ಗಿರಿನಗರ ಹಾಗೂ ಶಿವಮೊಗ್ಗದ ಮಠದ ಮುಂದೆ ನೆರೆದಿದ್ದ ಸಾವಿರಾರು ಭಕ್ತರು ಸಂಭ್ರಮದಿಂದ ಸತ್ಯಮೇವ ಜಯತೇ ಎಂದು ಘೋಷಣೆ ಕೂಗಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT