ತುಮಕೂರಿನಲ್ಲಿರು ಎಚ್ ಎಂಟಿ ಫ್ಯಾಕ್ಟರಿ 
ರಾಜ್ಯ

ತುಮಕೂರು ಎಚ್ಎಂಟಿ ಕಾರ್ಖಾನೆಗೆ ಬೀಗ: 340 ಉದ್ಯೋಗಿಗಳಿಗೆ ವಿಆರ್ ಎಸ್

ತುಮಕೂರು ಎಚ್‌ಎಂಟಿ ಕೈಗಡಿಯಾರ ಕಾರ್ಖಾನೆಯ ಹೋರಾಟದ ಬದುಕು ಕೊನೆಯಾಗಿದೆ. ನಷ್ಟದಲ್ಲಿದ್ದ ಕಾರ್ಖಾನೆಗೆ ಶನಿವಾರ ಅಧಿಕೃತವಾಗಿ ಬೀಗ ಹಾಕಲಾಯಿತು

ತುಮಕೂರು: ತುಮಕೂರು ಎಚ್‌ಎಂಟಿ ಕೈಗಡಿಯಾರ ಕಾರ್ಖಾನೆಯ ಹೋರಾಟದ ಬದುಕು ಕೊನೆಯಾಗಿದೆ. ನಷ್ಟದಲ್ಲಿದ್ದ ಕಾರ್ಖಾನೆಗೆ ಶನಿವಾರ ಅಧಿಕೃತವಾಗಿ ಬೀಗ ಹಾಕಲಾಯಿತು.
ಕಾರ್ಮಿಕರ ದಿನಾಚರಣೆಯ ಮುನ್ನಾದಿನ 125 ಕಾರ್ಮಿಕರಿಗೆ  ಬಿಡುಗಡೆ ಪತ್ರ  ನೀಡಲಾಯಿತು.

1978 ರಲ್ಲಿ  ಮಾಜಿ ಸಂಸದ ಕೆ. ಲಕ್ಕಪ್ಪ ತುಮಕೂರಿನಲ್ಲಿ ಎಚ್ .ಎಂ ಟಿ ಘಟಕ ಸ್ಥಾಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.  119 ಎಕರೆಯಲ್ಲಿದ್ದ ಎಚ್ ಎಂಟಿಯ 20 ಘಟಕಗಳಲ್ಲಿ  1.600 ಸಿಬ್ಬಂದಿ ಕೆಲಸ ಮಾಡುತ್ತಿದ್ದರು.

ಇನ್ನು ಸಿದ್ದಗಂಗ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಕೆಐಎಡಿಬಿ ಗೆ 40 ಎಕರೆ ಭೂಮಿಯನ್ನು ಸ್ವಯಂ ಪ್ರೇರಿತವಾಗಿ ಈ ಕಾರ್ಖಾನೆಗೆ ನೀಡಿದ್ದರು.

ಇನ್ನು ಈ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ  ಕೆಲವು ಉನ್ನತ ಅಧಿಕಾರಿಗಳು ಹೊಸೂರಿನಲ್ಲಿರುವ ಖಾಸಗಿ ಕಂಪನಿಯ ನೌಕರಿಗೆ ಸೇರಿಕೊಂಡಿದ್ದಾರೆ. ಪೂರಕ ಘಟಕಗಳಲ್ಲಿ ಕೆಲಸ ನಿರ್ವಹಿಸುವ ಕೆಲ ಸಿಬ್ಬಂದಿ ಈಗಾಗಲೇ ವಾಚ್ ಬಿಡಿಭಾಗಗಳ ಅಕ್ರಮ ಮಾರಾಟದಲ್ಲಿ ತೊಡಗಿದ್ದಾರೆ ಎಂದು ತುಮಕೂರು ಎಚ್ ಎಂಟಿ ಕಾರ್ಖಾನೆ ಪಿಆರ್  ಆಗಿದ್ದ ಒ ಕೆ.ಎನ್ ಶಿವರಾಜ್ ಹೇಳಿದ್ದಾರೆ.

2006 ನೇ ಇಸವಿಯಲ್ಲಿ  ತುಮಕೂರು ಘಟಕದ ಆಡಳಿತ ಮಂಡಳಿ ಕಾರ್ಖಾನೆಯನ್ನು ಪುನರುಜ್ಜೀವನ ಗೊಳಿಸುವಂತೆ ಮಾಡಿದ ಮನವಿಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿತ್ತು.
ಮುಂದಿನ ಹತ್ತು ದಿನದಲ್ಲಿ ಕಾರ್ಮಿಕರಿಗೆ ಪರಿಹಾರದ ಹಣ ನೀಡಲಾಗುವುದು ಎಂದು ಆಡಳಿತ ಮಂಡಳಿ ಹೇಳಿದೆ. ಕನಿಷ್ಠ 25 ರಿಂದ 30 ಲಕ್ಷ ಸಿಗಬಹುದು ಎಂಬುದು ಕಾರ್ಮಿಕರ ಲೆಕ್ಕಾಚಾರ. ಕಣ್ಣೀರು ಒರೆಸಿಕೊಳ್ಳುತ್ತಾ, ಭಾರವಾದ ಹೃದಯ ಹೊತ್ತು ಫ್ಯಾಕ್ಟರಿಯಿಂದ ಈಚೆ ನಡೆದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೃಷ್ಣಾ ಮೇಲ್ದಂಡೆ ಯೋಜನೆಗೆ 5 ಸಾವಿರ ಕೋಟಿ ಅನುದಾನ: ಅಭಿವೃದ್ಧಿಗೆ ಹಣವಿಲ್ಲವೆಂಬ BJP ಆರೋಪ ಸತ್ಯಕ್ಕೆ ದೂರ; ಸಿಎಂ ಸಿದ್ದರಾಮಯ್ಯ

ಅಭಿಷೇಕ್ ಬಗ್ಗೆ ಭಾರತೀಯ ಆಟಗಾರರಿಗೆ 'ಅಸೂಯೆ ಇದೆಯಾ? ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ ಸಂಜು ಸ್ಯಾಮ್ಸನ್

Jammu- Kashmir: ಪೂಂಚ್‌ನಲ್ಲಿ ಉಗ್ರ ವಿರೋಧಿ ಕಾರ್ಯಾಚರಣೆ, ಸೇನೆಯ JCO ಹುತಾತ್ಮ

ನೌಕಾಪಡೆ ಭದ್ರತೆಯಲ್ಲಿ Hormuz ಜಲಸಂಧಿ ದಾಟಿದ ಭಾರತ ಮೂಲದ LPG tanker!

'ಯುದ್ಧನೌಕೆಗಳ ಕಳುಹಿಸಿ': ಇರಾನ್ ಹೆಡೆಮುರಿ ಕಟ್ಟಲು ಜಗತ್ತಿಗೆ Donald Trump ಸಂದೇಶ!

SCROLL FOR NEXT