ತುಮಕೂರಿನಲ್ಲಿರು ಎಚ್ ಎಂಟಿ ಫ್ಯಾಕ್ಟರಿ 
ರಾಜ್ಯ

ತುಮಕೂರು ಎಚ್ಎಂಟಿ ಕಾರ್ಖಾನೆಗೆ ಬೀಗ: 340 ಉದ್ಯೋಗಿಗಳಿಗೆ ವಿಆರ್ ಎಸ್

ತುಮಕೂರು ಎಚ್‌ಎಂಟಿ ಕೈಗಡಿಯಾರ ಕಾರ್ಖಾನೆಯ ಹೋರಾಟದ ಬದುಕು ಕೊನೆಯಾಗಿದೆ. ನಷ್ಟದಲ್ಲಿದ್ದ ಕಾರ್ಖಾನೆಗೆ ಶನಿವಾರ ಅಧಿಕೃತವಾಗಿ ಬೀಗ ಹಾಕಲಾಯಿತು

ತುಮಕೂರು: ತುಮಕೂರು ಎಚ್‌ಎಂಟಿ ಕೈಗಡಿಯಾರ ಕಾರ್ಖಾನೆಯ ಹೋರಾಟದ ಬದುಕು ಕೊನೆಯಾಗಿದೆ. ನಷ್ಟದಲ್ಲಿದ್ದ ಕಾರ್ಖಾನೆಗೆ ಶನಿವಾರ ಅಧಿಕೃತವಾಗಿ ಬೀಗ ಹಾಕಲಾಯಿತು.
ಕಾರ್ಮಿಕರ ದಿನಾಚರಣೆಯ ಮುನ್ನಾದಿನ 125 ಕಾರ್ಮಿಕರಿಗೆ  ಬಿಡುಗಡೆ ಪತ್ರ  ನೀಡಲಾಯಿತು.

1978 ರಲ್ಲಿ  ಮಾಜಿ ಸಂಸದ ಕೆ. ಲಕ್ಕಪ್ಪ ತುಮಕೂರಿನಲ್ಲಿ ಎಚ್ .ಎಂ ಟಿ ಘಟಕ ಸ್ಥಾಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.  119 ಎಕರೆಯಲ್ಲಿದ್ದ ಎಚ್ ಎಂಟಿಯ 20 ಘಟಕಗಳಲ್ಲಿ  1.600 ಸಿಬ್ಬಂದಿ ಕೆಲಸ ಮಾಡುತ್ತಿದ್ದರು.

ಇನ್ನು ಸಿದ್ದಗಂಗ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಕೆಐಎಡಿಬಿ ಗೆ 40 ಎಕರೆ ಭೂಮಿಯನ್ನು ಸ್ವಯಂ ಪ್ರೇರಿತವಾಗಿ ಈ ಕಾರ್ಖಾನೆಗೆ ನೀಡಿದ್ದರು.

ಇನ್ನು ಈ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ  ಕೆಲವು ಉನ್ನತ ಅಧಿಕಾರಿಗಳು ಹೊಸೂರಿನಲ್ಲಿರುವ ಖಾಸಗಿ ಕಂಪನಿಯ ನೌಕರಿಗೆ ಸೇರಿಕೊಂಡಿದ್ದಾರೆ. ಪೂರಕ ಘಟಕಗಳಲ್ಲಿ ಕೆಲಸ ನಿರ್ವಹಿಸುವ ಕೆಲ ಸಿಬ್ಬಂದಿ ಈಗಾಗಲೇ ವಾಚ್ ಬಿಡಿಭಾಗಗಳ ಅಕ್ರಮ ಮಾರಾಟದಲ್ಲಿ ತೊಡಗಿದ್ದಾರೆ ಎಂದು ತುಮಕೂರು ಎಚ್ ಎಂಟಿ ಕಾರ್ಖಾನೆ ಪಿಆರ್  ಆಗಿದ್ದ ಒ ಕೆ.ಎನ್ ಶಿವರಾಜ್ ಹೇಳಿದ್ದಾರೆ.

2006 ನೇ ಇಸವಿಯಲ್ಲಿ  ತುಮಕೂರು ಘಟಕದ ಆಡಳಿತ ಮಂಡಳಿ ಕಾರ್ಖಾನೆಯನ್ನು ಪುನರುಜ್ಜೀವನ ಗೊಳಿಸುವಂತೆ ಮಾಡಿದ ಮನವಿಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿತ್ತು.
ಮುಂದಿನ ಹತ್ತು ದಿನದಲ್ಲಿ ಕಾರ್ಮಿಕರಿಗೆ ಪರಿಹಾರದ ಹಣ ನೀಡಲಾಗುವುದು ಎಂದು ಆಡಳಿತ ಮಂಡಳಿ ಹೇಳಿದೆ. ಕನಿಷ್ಠ 25 ರಿಂದ 30 ಲಕ್ಷ ಸಿಗಬಹುದು ಎಂಬುದು ಕಾರ್ಮಿಕರ ಲೆಕ್ಕಾಚಾರ. ಕಣ್ಣೀರು ಒರೆಸಿಕೊಳ್ಳುತ್ತಾ, ಭಾರವಾದ ಹೃದಯ ಹೊತ್ತು ಫ್ಯಾಕ್ಟರಿಯಿಂದ ಈಚೆ ನಡೆದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮ ಕಡೆಯಿಂದ ವೈಮಾನಿಕ ದಾಳಿ ಇರುವುದಿಲ್ಲ: 5 ವರ್ಷಗಳಲ್ಲಿ ಮೊದಲ ಬಾರಿಗೆ ಕದನ ವಿರಾಮ ಪ್ರಸ್ತಾಪಿಸಿದ ಯುಕ್ರೇನ್ ಅಧ್ಯಕ್ಷ Zelensky

ಡ್ರಗ್ಸ್ ಸೇವನೆ ದೃಢ: ಫುಕೆಟ್- ದೆಹಲಿ ಏರ್ ಇಂಡಿಯಾ ವಿಮಾನದ ಮುಖ್ಯ ಪೈಲಟ್ ವಜಾ!

Video: 'ಪೊಲೀಸರು ಬುದ್ದಿ ಕಲಿಸಿದ್ದಾರೆ, ತಪ್ಪನ್ನ ಕ್ಷಮಿಸಲ್ಲ'; ಮಗ ಸಾಮ್ರಾಟ್‌ ಬಗ್ಗೆ ಕೊನೆಗೂ ಮೌನ ಮುರಿದ ನಟ Duniya Vijay

‘ಹೂತುಹಾಕಬೇಕು ಎನ್ನುವವರಲ್ಲ ನಾವು’.. ‘ಮಹಿಳೆಯರಿಗೆ ಶಿಕ್ಷಣ, ಅವಕಾಶ ನೀಡುತ್ತಿದ್ದೇವೆ’: ‘ಮನೆಯಲ್ಲೇ ಇರಬೇಕು’ ಹೇಳಿಕೆಗೆ ಮುಸ್ಲಿಂ ಧರ್ಮಗುರು ಸ್ಪಷ್ಟನೆ, Video

ಜಮ್ಮು-ಕಾಶ್ಮೀರ: ಬುಡ್ಗಾಮ್‌ ಎನ್ ಕೌಂಟರ್ ನಲ್ಲಿ ಉಗ್ರನ ಹತ್ಯೆ; AK ರೈಫಲ್ ಮತ್ತಿತರ ಶಸ್ತ್ರಾಸ್ತ್ರಗಳು ವಶ!