ಸಾಂದರ್ಭಿಕ ಚಿತ್ರ 
ರಾಜ್ಯ

ಉಲ್ಲಾಳ ಹಿಂಸಾಚಾರ: ಮೂವರ ಬಂಧನ, ನಿಷೇಧಾಜ್ಞೆ ಮುಂದುವರಿಕೆ

ಉಲ್ಲಾಳದ ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ಯತ್ನ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಅಪರಾಧ ವಿಭಾಗ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ಮಂಗಳೂರು: ಉಲ್ಲಾಳದ ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ಯತ್ನ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಅಪರಾಧ ವಿಭಾಗ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ಉಲ್ಲಾಳದ ಮೊಗವೀರಪಟ್ಟಣದ ರಾಹುಲ್ ಪೂಜಾರಿ, ಎಲ್ಯಾರ್ ಪಡವು ನಿವಾಸಿ ಪ್ರಜ್ವಲ್ ಅಲಿಯಾಸ್ ಹೇಮಚಂದ್ರ ಹಾಗೂ ತೋಕ್ಕೊಟುವಿನ ಕಪಿಕಡ್ ಗ್ರಾಮದ ವಿನೀತ್ ಬಂಧಿತ ಆರೋಪಿಗಳು. ಏಪ್ರಿಲ್ 26 ರಂದು ಈ ಮೂವರು ಆರೋಪಿಗಳು ಸಫ್ವಾನ್ ಹಸನ್ ಮತ್ತು ಸಲೀಮ್ ಮತ್ತು ನಿಜಾಮ್ ಎಂಬುವರ ಮೇಲೆ ದಾಳಿ ನಡೆಸಿದ್ದರು.

ಸಲೀಂ ಮತ್ತು ನಿಜಾಂ ದಾಳಿಯಿಂದ ಪಾರಾಗಿದ್ದರು. ಆದರೆ ಸಫ್ವಾನ್ ತೀವ್ರ ಗಾಯಗಳಿಂದ ಆಸ್ಪತ್ರೆ ಸೇರಿ ಏಪ್ರಿಲ್ 28 ರಂದು ಸಾವನ್ನಪ್ಪಿದ್ದನು. ರಾಹುಲ್ ಪೂಜಾರಿ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾನೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಎಂ ಚಂದ್ರಶೇಖರ್ ಹೇಳಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಉಲ್ಲಾಳದಲ್ಲಿ ನಿಷೇದಾಜ್ಞೆ ಮುಂದುವರಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

SCROLL FOR NEXT