ಸಾಂದರ್ಭಿಕ ಚಿತ್ರ 
ರಾಜ್ಯ

ಉಲ್ಲಾಳ ಹಿಂಸಾಚಾರ: ಮೂವರ ಬಂಧನ, ನಿಷೇಧಾಜ್ಞೆ ಮುಂದುವರಿಕೆ

ಉಲ್ಲಾಳದ ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ಯತ್ನ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಅಪರಾಧ ವಿಭಾಗ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ಮಂಗಳೂರು: ಉಲ್ಲಾಳದ ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ಯತ್ನ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಅಪರಾಧ ವಿಭಾಗ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ಉಲ್ಲಾಳದ ಮೊಗವೀರಪಟ್ಟಣದ ರಾಹುಲ್ ಪೂಜಾರಿ, ಎಲ್ಯಾರ್ ಪಡವು ನಿವಾಸಿ ಪ್ರಜ್ವಲ್ ಅಲಿಯಾಸ್ ಹೇಮಚಂದ್ರ ಹಾಗೂ ತೋಕ್ಕೊಟುವಿನ ಕಪಿಕಡ್ ಗ್ರಾಮದ ವಿನೀತ್ ಬಂಧಿತ ಆರೋಪಿಗಳು. ಏಪ್ರಿಲ್ 26 ರಂದು ಈ ಮೂವರು ಆರೋಪಿಗಳು ಸಫ್ವಾನ್ ಹಸನ್ ಮತ್ತು ಸಲೀಮ್ ಮತ್ತು ನಿಜಾಮ್ ಎಂಬುವರ ಮೇಲೆ ದಾಳಿ ನಡೆಸಿದ್ದರು.

ಸಲೀಂ ಮತ್ತು ನಿಜಾಂ ದಾಳಿಯಿಂದ ಪಾರಾಗಿದ್ದರು. ಆದರೆ ಸಫ್ವಾನ್ ತೀವ್ರ ಗಾಯಗಳಿಂದ ಆಸ್ಪತ್ರೆ ಸೇರಿ ಏಪ್ರಿಲ್ 28 ರಂದು ಸಾವನ್ನಪ್ಪಿದ್ದನು. ರಾಹುಲ್ ಪೂಜಾರಿ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾನೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಎಂ ಚಂದ್ರಶೇಖರ್ ಹೇಳಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಉಲ್ಲಾಳದಲ್ಲಿ ನಿಷೇದಾಜ್ಞೆ ಮುಂದುವರಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT