ಪೈಪ್ ಲೈನ್ ಒಡೆದಿದ್ದರಿಂದ ನೀರಿನಿಂದ ಹಾನಿಗೊಳಗಾಗಿರುವ ಮನೆ 
ರಾಜ್ಯ

ಪೈಪ್ ಲೈನ್ ಒಡೆದು ವ್ಯರ್ಥವಾಯ್ತು 19 ಲಕ್ಷ ಲೀಟರ್ ಅಮೂಲ್ಯವಾದ ನೀರು

ಪೈಪ್ ಲೈನ್ ಒಡೆದು ಸುಮಾರು 19 ಲಕ್ಷ ಲೀಟರ್ ಅಮೂಲ್ಯವಾದ ನೀರು ವ್ಯರ್ಥವಾಗಿರುವ ಘಟನೆ ಬೆಳಗಾವಿಯ ಮುಚ್ಚಂಡಿ ಗ್ರಾಮದಲ್ಲಿ ನಡೆದಿದೆ....

ಬೆಳಗಾವಿ: ಬರದಿಂದ ತತ್ತರಿಸಿರುವ ರಾಜ್ಯದ ಜನತೆ ಹನಿ ಹನಿ ನೀರಿಗೂ ಪರದಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲೇ ಪೈಪ್ ಲೈನ್ ಒಡೆದು ಸುಮಾರು 19 ಲಕ್ಷ ಲೀಟರ್  ಅಮೂಲ್ಯವಾದ ನೀರು ವ್ಯರ್ಥವಾಗಿರುವ ಘಟನೆ ಬೆಳಗಾವಿಯ ಮುಚ್ಚಂಡಿ ಗ್ರಾಮದಲ್ಲಿ ನಡೆದಿದೆ.

ಮುಚ್ಚಂಡಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ಹಿಡಕಲ್ ಜಲಾಶಯದಿಂದ ಬೆಳಗಾವಿ ನಗರಕ್ಕೆ ನೀರು ಸರಬರಾಜು ಮಾಡುವ ಮುಖ್ಯ ಪೈಪ್​ಲೈನ್ ಒಡೆದು ಪ್ರವಾಹ ಪರಿಸ್ಥಿತಿ ಉಂಟಾಗಿದೆ. ನೂರಾರು ಅಡಿ ಎತ್ತರಕ್ಕೆ ನೀರು ಚಿಮ್ಮಿದ ರಭಸಕ್ಕೆ 4 ಮನೆ ಸಂಪೂರ್ಣ ಜಲಾವೃತಗೊಂಡಿವೆ.

ಮಂಗಳವಾರ ರಾತ್ರಿ 2 ಗಂಟೆಯ ಸುಮಾರಿಗೆ ಪೈಪ್​ಲೈನ್ ಒಡೆದು ದೇವಪ್ಪ ಜಾಧವ, ವಿನೋದ ಕುಳಚಗೌಡ, ನಾರಾಯಣ ಜಕ್ಕಾಣಿ ಹಾಗೂ ಬಸವಂತ ಬಂಗಾರೆ ಅವರ ಮನೆಗೆ ನೀರು ನುಗ್ಗಿದೆ. ನಾಲ್ಕು ಮನೆಗಳು ಜಲಾವೃತಗೊಂಡಿವೆ. ಮೇಲ್ಛಾವಣಿ, ಗೋಡೆಗಳೆಲ್ಲ ಕುಸಿದು ಬಿದ್ದಿವೆ.

ಮಳೆ ಬರುತ್ತಿರಬರಹುದು ಎಂದು ಭಾವಸಿದ ಅವರಿಗೆ ಹೊರಗಡೆ ಬಂದು ನೋಡುವಷ್ಟರಲ್ಲಿ ಪರಿಸ್ಥಿತಿಯ ಅರಿವಾಗಿದೆ. ಕೂಡಲೇ ಮನೆಯಲ್ಲಿ ಕಟ್ಟಿದ್ದ ಜಾನುವಾರಗಳನ್ನು ದೂರಕ್ಕೆ ಎಳೆದೊಯ್ದಿದ್ದಾರೆ. ಇನ್ನು ಈ ಕುಟುಂಬದವರು ಬೆಳೆದಿದ್ದ ಜೋಳ, ಸೌತೇಕಾಯಿ, ಹೂಕೋಸು, ಎಲೆಕೋಸು ಮುಂತಾದ ಬೆಳೆಗಳೆಲ್ಲಾ ಹಾನಿಯಾಗಿವೆ.

ಮನೆಯೊಳಗಿದ್ದ ಟಿವಿ, ಫ್ರಿಡ್ಜ್, ಫರ್ನೀಚರ್, ಪಾತ್ರೆ, ಸಾಮಾನು ಸರಂಜಾಮು ಎಲ್ಲಾ ನೀರಿನಲ್ಲಿ ಕೊಚ್ಚಿ ಹೋಗಿವೆ, ಜಲಮಂಡಳಿಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

1998ರಲ್ಲಿ ನಗರಕ್ಕೆ ನೀರು ಸರಬರಾಜು ಮಾಡಲು ಹಿಡಕಲ್ ಜಲಾಶಯದಿಂದ ಲಕ್ಷ್ಮೀಟೇಕ್ ಪಂಪ್​ಹೌಸ್​ವರೆಗೆ 1,168 ಮಿ.ಮೀ. ವ್ಯಾಸದ ಪೈಪ್​ಲೈನ್ ಅಳವಡಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT